Get Updates
Get notified of breaking news, exclusive insights, and must-see stories!

ಮಂತ್ರಾಲಯದ ರಾಯರ ಹುಂಡಿಗೂ ತಟ್ಟಿದ ಬರದ ಬಿಸಿ: 31 ದಿನದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?

ರಾಯಚೂರು ಡಿಸೆಂಬರ್ 3: ಭಕ್ತರ ಪಾಲಿನ ಕಲ್ಪವೃಕ್ಷ, ಬೇಡಿದ್ದು ಕೊಡುವ ಕಾಮದೇನು ತುಂಗಾ ತೀರದಲ್ಲಿ ನಲೆಸಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಶಕ್ರವಾರ ನಡೆದ ಎಣಿಕೆ ಕಾರ್ಯದಲ್ಲಿ 31 ದಿನಗಳಲ್ಲಿ 2 ಕೋಟಿ 56ಲಕ್ಷ 40 ಸಾವಿರ ರೂ. ಬಂದಿದೆ. ಕಳೆದ 8 ತಿಂಗಳಲ್ಲಿಯೇ ಇದು ಅತೀ ಕಡಿಮೆ ಹುಂಡಿ ಕಾಣಿಕೆ ಸಂಗ್ರಹವಾಗಿದೆ. ಏಪ್ರಿಲ್ ತಿಂಗಳಲ್ಲಿ 29 ದಿನಗಳಲ್ಲಿಯೇ 2 ಕೋಟಿ 67ಲಕ್ಷ 76 ಸಾವಿರದ 840 ರೂ. ಜಮಾವಾಗಿತ್ತು. ಮೇ ತಿಂಗಳಲ್ಲಿ 34 ದಿನಗಳಲ್ಲಿ 3ಕೋಟಿ 46 ಲಕ್ಷ 20 ಸಾವಿರದ 423ರೂ. ಸಂಗ್ರಹವಾಗಿತ್ತು.

Drought: How much was collected in Mantralaya in 31 days?

ಜೂನ್ ತಿಂಗಳಲ್ಲಿ 27 ದಿನಗಳಲ್ಲಿ 2 ಕೋಟಿ 84 ಲಕ್ಷ 12 ಸಾವಿರದ 635 ರೂ. ಬಂದಿದ್ದ ಕಾಣಿಕೆ. ಜುಲೈನಲ್ಲಿ 34 ದಿನಗಳಲ್ಲಿ 3ಕೋಟಿ 69 ಲಕ್ಷ 62 ಸಾವಿರ 469 ರೂ. ಸಂಗ್ರಹ, ಆಗಷ್ಟ ತಿಂಗಳಲ್ಲಿ 22 ದಿನಗಳಲ್ಲಿಯೇ 2ಕೋಟಿ 35 ಲಕ್ಷ 62 ಸಾವಿರ 719 ರೂ. ಜಮಾ ಆಗಿದ್ದರೆ, ಸೆಪ್ಟೆಂಬರ್ ತಿಂಗಳಲ್ಲಿ 34 ದಿನಗಳಲ್ಲಿ 3 ಕೋಟಿ 74 ಲಕ್ಷ 85 ಸಾವಿರದ 859 ರೂ. ಕಾಣಿಕೆ ಸಂಗ್ರಹವಾಗಿದೆ.

ಅಕ್ಟೋಬರ್ ನಲ್ಲಿ ಎಣಿಕೆ ಸಂಗ್ರಹದಲ್ಲಿ 35 ದಿನಗಳಲ್ಲಿ 3 ಕೋಟಿ 62ಲಕ್ಷ 27 ಸಾವಿರದ 720 ರೂ. ಕಾಣಿಕೆ ಹರಿದು ಬಂದಿದೆ. ಆದರೆ ಈ ಬಾರಿ ನವೆಂಬರ್ ತಿಂಗಳಲ್ಲಿ 31ದಿನಗಳಲ್ಲಿ 2 ಕೋಟಿ 56 ಲಕ್ಷ 40 ಸಾವಿರ ರೂ. ಸಂಗ್ರಹವಾಗಿದೆ. ಇದು ಎಂಟು ತಿಂಗಳ ಅವಧಿಯಲ್ಲಿ ಅತಿ ಕಡಿಮೆಯಾಗಿದೆ. ರಾಜ್ಯಾದ್ಯಂತ ಬರಗಾಲದಿಂದ ಭಕ್ತರು ಸಂಕಷ್ಟದಲ್ಲಿದ್ದಾರೆ.

Drought: How much was collected in Mantralaya in 31 days?

ಅದರಲ್ಲೂ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ತೀವ್ರ ಬರ ಆವರಿಸಿದೆ. ರೈತರು ಬೆಳೆ ನಷ್ಟವಾಗಿ ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಈ ಬಾರಿ ಮಂತ್ರಾಲಯಕ್ಕೆ ಬರುವ ಭಕ್ತರ ಸಂಖ್ಯೆಯೂ ಗಣನೀಯವಾಗಿ ಇಳಿಮುಖವಾಗಿರುವ ಹಿನ್ನೆಲೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಹುಂಡಿ ಕಾಣಿಕೆ ಮೇಲೂ ಬರದ ಬಿಸಿ ತಟ್ಟಿದೆ.

ಗುರುರಾಯರನ್ನು ನೆನೆದಾಗ ಮೊದಲು ನೆನಪಾಗುವುದೇ ರಾಯರ ಸನ್ನಿಧಿ ಮಂತ್ರಾಲಯ. ವಿಶೇಷ ದಿನಗಳಲ್ಲಿ ನೂರಾರು ಭಖ್ತರು ರಾಯರ ಮಠಕ್ಕೆ ಆಗಮಿಸುತ್ತಾರೆ. ಯಾವುದೇ ಕಷ್ಟವಿದ್ದರು ರಾಯರನ್ನು ನೆನೆದರೆ, ರಾಯರ ದರ್ಶನ ಮಾಡಿದರೆ ಕಷ್ಟಗಳೆಲ್ಲಾ ನಿವಾರಣೆಯಾಗುತ್ತದೆ ಎನ್ನಲಾಗುತ್ತದೆ. ಆಂಧ್ರಪ್ರದೇಶದಲ್ಲಿರುವ ಮಂತ್ರಾಲಯವು ಬಹಳ ಪ್ರಸಿದ್ಧಿಯನ್ನು ಹೊಂದಿರುವ ದೇವಾಲಯವಾಗಿದೆ.

ಮಂತ್ರಾಲಯವು ಹಿಂದೂ ಧಾರ್ಮಿಕ ಸ್ಥಳವಾಗಿದ್ದು, ಇಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಮೂಲ ಬೃಂದಾವನಂ ಇದೆ. ಶ್ರೀ ಗುರು ರಾಘವೇಂದ್ರ ಸ್ವಾಮಿ (1601-1671) ಹಿಂದೂ ಧರ್ಮದಲ್ಲಿ ಪ್ರಭಾವಿ ಸಂತರಾಗಿದ್ದರು. ಅವರು ವೈಷ್ಣವ ಧರ್ಮವನ್ನು ಮತ್ತು ಶ್ರೀ ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ತತ್ವಶಾಸ್ತ್ರವನ್ನು ಪ್ರತಿಪಾದಿಸಿದರು. ಅವರನ್ನು ನರಸಿಂಹ ಅವತಾರದಲ್ಲಿ ವಿಷ್ಣುವಿನಿಂದ ರಕ್ಷಿಸಲ್ಪಟ್ಟ ಭಕ್ತ ಪ್ರಹಲ್ಲಾದನ ಪುನರ್ಜನ್ಮವೆಂದು ಪರಿಗಣಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+