Get Updates
Get notified of breaking news, exclusive insights, and must-see stories!

ಮಾವೋವಾದಿಗಳಿಂದ ನಾಲ್ವರು ಬಿಎಸ್ ಎಫ್ ಜವಾನರ ಹತ್ಯೆ

ಕಂಕೇರ್(ಛತ್ತೀಸ್ ಗಢ), ಏಪ್ರಿಲ್ 04: ಛತ್ತೀಸ್ ಗಢದ ಕಾಂಕೇರ್ ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಬಿಎಸ್ ಎಫ್ ಜವಾನರ ನಡುವೆ ನಡೆದ ಎನ್ ಕೌಂಟರ್ ದಾಳಿಯಲ್ಲಿ ನಾಲ್ವರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಛತ್ತೀಸ್ ಗಢದಲ್ಲಿ ಲೋಕಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಉಳಿದಿರುವಾಗ ಈ ಘಟನೆ ನಡೆದಿದ್ದು ಆತಂಕ ಸೃಷ್ಟಿಸಿದೆ.

ಇದಕ್ಕೂ ಮುನ್ನ ಮಾರ್ಚ್ 26 ರಂದು ಛತ್ತೀಸ್ ಗಢ ರಾಜಧಾನಿ ರಾಯ್‍ಪುರದಿಂದ 800 ಕಿ.ಮೀ. ದೂರದಲ್ಲಿರುವ ಕರ್ಕನ್ ಗುಡ ಗ್ರಾಮದ ಬಳಿ ಕಾಡಿನಲ್ಲಿ ನಕ್ಸಲರು ಅಡಗಿರುವ ಖಚಿತ ಮಾಹಿತಿ ಲಭ್ಯವಾದ ಕಾರಣ ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆ ನಡೆಸಿ, ನಾಲ್ವರು ನಕ್ಸಲರನ್ನು ಬಲಿತೆಗೆದುಕೊಂಡಿದ್ದರು.

Many BSF Jawanas killed in an encounter with maoist

ಛತ್ತೀಸ್ ಗಢದ 11 ಲೋಕಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 11, 18, 23 ರಂದು ಚುನಾವಣೆ ನಡೆಯಲಿದೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+