Puri Jagannath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ; ಹಲವರಿಗೆ ಗಾಯ
ಭಾರತ ಅತಿ ದೊಡ್ಡ ಜಾತ್ರೆಯಾದ ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನೇಕ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಒಡಿಶಾದ ಕಡಲತೀರದ ಪಟ್ಟಣವಾದ ಪುರಿಯಲ್ಲಿ ಭಾನುವಾರದಂದು ವಾರ್ಷಿಕ ಭಗವಾನ್ ಜಗನ್ನಾಥ ರಥಯಾತ್ರೆ ನಡೆಯುತ್ತಿದ್ದು ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದಾರೆ.

ರಥ ಎಳೆಯುವ ಕಾರ್ಯಕ್ರಮದ ವೇಳೆ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು, ಭವ್ಯ ಮೆರವಣಿಗೆ ಸಾಗುತ್ತಿದ್ದ ಪುರಿಯ ಗ್ರ್ಯಾಂಡ್ ರೋಡ್ ಬಡಾ ದಂಡದಲ್ಲಿ ಈ ಘಟನೆ ನಡೆದಿದೆ.
ಬಲಭದ್ರ ದೇವರ ರಥ ಎಳೆಯುವಾಗ ಘಟನೆ
ರಥ ಎಳೆಯುವ ವೇಳೆ ನಡೆದ ದುರ್ಘಟನೆಯಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ಮೆರವಣಿಗೆಯನ್ನು ಮುನ್ನಡೆಸುವ ಬಲಭದ್ರ ದೇವರ ರಥವನ್ನು ಎಳೆಯುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಸ್ಥಳದಲ್ಲಿದ್ದ ತುರ್ತು ಸೇವೆಗಳು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ.
ಒಡಿಶಾದ ರಥಯಾತ್ರೆಯು ವಿಶ್ವಪ್ರಸಿದ್ಧವಾಗಿದ್ದು, ಭವ್ಯವಾದ ರಥಗಳನ್ನು ವೀಕ್ಷಿಸಲು ಮತ್ತು ಅವುಗಳನ್ನು ಎಳೆಯಲು ಸಾವಿರಾರು ಭಕ್ತರು ಆಗಮಿಸುತ್ತಾರೆ.
12ನೇ ಶತಮಾನದ ಪುರಿಯ ಜಗನ್ನಾಥ ದೇವಸ್ಥಾನದಿಂದ ಸುಮಾರು 2.5 ಕಿಮೀ ದೂರದಲ್ಲಿರುವ ಗುಂಡಿಚಾ ದೇವಸ್ಥಾನದ ಕಡೆಗೆ ಸಾವಿರಾರು ಜನರು ರಥಗಳನ್ನು ಎಳೆದು ಭಕ್ತಿ ಸಮರ್ಪಣೆ ಮಾಡಿದರು.
ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲನಾದ ಸರಸ್ವತಿ ಅವರು ತಮ್ಮ ಶಿಷ್ಯರೊಂದಿಗೆ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ದೇವಿ ಸುಭದ್ರರ ರಥಗಳಿಗೆ ಭೇಟಿ ನೀಡಿದ ನಂತರ ರಥ ಎಳೆಯುವಿಕೆಯು ಸಂಜೆ 5.20 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಪುರಿಯ ಪಟ್ಟದ ರಾಜನು 'ಛೇರಾ ಪಹನ್ರ' (ರಥ ಗುಡಿಸುವ) ವಿಧಿಯನ್ನು ಪೂರ್ಣಗೊಳಿಸಿದರು.
ಇದಕ್ಕೂ ಮುನ್ನ ಮುಂಜಾನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೂರು ರಥಗಳ 'ಪರಿಕ್ರಮ' ನಡೆಸಿ ದೇವತೆಗಳಿಗೆ ನಮನ ಸಲ್ಲಿಸಿದರು.
ಸುಮಾರು 45 ಅಡಿ ಎತ್ತರದ ಬಲಭದ್ರ ದೇವರ ಮರದ ರಥವನ್ನು ಎಳೆಯಲು ಸಾವಿರಾರು ಜನರು ಭಾಗವಹಿಸುವ ಮೂಲಕ ವಾರ್ಷಿಕ ರಥಯಾತ್ರೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದ ನಂತರ ದೇವಿ ಸುಭದ್ರಾ ಮತ್ತು ಜಗನ್ನಾಥನ ರಥಗಳನ್ನು ಎಳೆಯಲಾಗುತ್ತದೆ.
ರಥಯಾತ್ರೆಯಲ್ಲಿ ಸುಮಾರು 10 ಲಕ್ಷ ಭಕ್ತರು ಪಟ್ಟಣದಲ್ಲಿ ಸೇರುತ್ತಾರೆ ಎಂದು ಅಂದಾಜಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications