Rozargar Mela: ಮೇ 16ಕ್ಕೆ ದೇಶದ 45 ಕಡೆ ಉದ್ಯೋಗ ಒದಗಿಸುವ ಮೇಳ ಆರಂಭ, ಪ್ರಧಾನಿ ಚಾಲನೆ
ಬೆಂಗಳೂರು, ಮೇ 15: ಭಾರತ ದೇಶಾದ್ಯಂತ ಅನೇಕ ಕಡೆಗಳಲ್ಲಿ ನಾಳೆ ಮಂಗಳವಾರ ಮೇ 16ರಂದು 'ರೋಜ್ಗಾರ್ ಮೇಳ' ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಹುನಿರೀಕ್ಷೆಯ ಕಾರ್ಯಕ್ರಮಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.
ದೇಶಾದ್ಯಂತ 45 ಕಡೆಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಮೇಳವು ಬೆಳಗ್ಗೆ 10.30ಗಂಟೆಗೆ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇಳದಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಬಳಿಕ ನೇಮಕಾತಿ ಕುರಿತು ಮಾತನಾಡಲಿದ್ದಾರೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.

ದೇಶದಲ್ಲಿ ಅಗತ್ಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆ ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಕೇಂದ್ರದ ಪಾಲಿಗೆ ಮಹತ್ವದ ಹೆಜ್ಜೆಯಾಗಿದೆ. ದೇಶಾದ್ಯಂತ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು, ಕೇಂದ್ರಾಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ.
ದೇಶಾದ್ಯಂತ ಹೊಸ ನೇಮಕಾತಿಗಳು
ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು, ಗ್ರಾಮೀಣ ಡಾಕ್ ಸೇವಕ್, ಪೋಸ್ಟ್ಗಳ ಇನ್ಸ್ಪೆಕ್ಟರ್, ಕಮರ್ಷಿಯಲ್-ಕಮ್-ಟಿಕೆಟ್ ಕ್ಲರ್ಕ್, ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಜೂನಿಯರ್ ಅಕೌಂಟ್ಸ್ ಕ್ಲರ್ಕ್, ಟ್ರ್ಯಾಕ್ ಮೇಂಟೇನರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಮುಂತಾದ ವಿವಿಧ ಹುದ್ದೆಗಳು/ಪೋಸ್ಟ್ಗಳಿಗೆ ನೇಮಕವಾಗಲಿದೆ.
ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕಪರಿಶೋಧಕ, ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ಇಲಾಖೆಗಳಲ್ಲಿನ ಗುಮಾಸ್ತ, ಉಪವಿಭಾಗಾಧಿಕಾರಿ, ನರ್ಸಿಂಗ್ ಅಧಿಕಾರಿಗಳು, ಸಹಾಯಕ ಭದ್ರತಾ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ, ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ, ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ, ತೆರಿಗೆ ಸಹಾಯಕರು, ಸಹಾಯಕ ಜಾರಿ ಅಧಿಕಾರಿ, ಇನ್ಸ್ಪೆಕ್ಟರ್ಗಳು, ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕಪರಿಶೋಧಕ, ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ಸಹಾಯಕ ಕುಲಸಚಿವರು, ಸಹಾಯಕ ಪ್ರಾಧ್ಯಾಪಕರು ಮತ್ತು ತರಬೇತಿ ಪಡೆದವರು ಪದವೀಧರ ಶಿಕ್ಷಕರು ಇನ್ನಿತರರು ನೇಮಕಗೊಳ್ಳುತ್ತಾರೆ.

ಬಿಜೆಪಿ ಸರ್ಕಾರ ವಾರ್ಷಿಕವಾಗಿ ಎರಡು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿತ್ತು. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂಬ ನಿರೀಕ್ಷೆ ಮೇಳದಿಂದ ಹೆಚ್ಚಾಗುತ್ತಿದೆ.
ವಿವಿಧ ಇಲಾಖೆಗಳಿಗೆ ಹೊಸದಾಗಿ ಸೇರ್ಪಡೆಗೊಂಡವರು ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲು ಅವಕಾಶ ಪಡೆಯುತ್ತಾರೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ಆನ್ಲೈನ್ ಓರಿಯಂಟೇಶನ್ ಕೋರ್ಸ್ ಆಗಿರುತ್ತದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications