ಎಷ್ಟು ಕಾರ್ಮಿಕ ದಿನಾಚರಣೆಗಳು ಬಂದರೂ ಕಾರ್ಮಿಕನ ಬದುಕು ಹೀಗೆಯೇ!
ನವದೆಹಲಿ, ಮೇ.2: ವಿಶ್ವದ ಎಲ್ಲಾ ಶ್ರಮಜೀವಿಗಳನ್ನು ನೆನೆದು ವಿಶ್ವ ಕಾರ್ಮಿಕ ದಿನವನ್ನು ಆಚರಣೆಯೇನೋ ಮಾಡುತ್ತೇವೆ. ಆದರೆ ಕಾರ್ಮಿಕರು ಯಾವ ಸ್ಥಿತಿಯಲ್ಲಿದ್ದಾರೆ. ಅವರ ಕಷ್ಟಗಳೇನು ಎಂದು ನೋಡಿದಾಗ ಕಣ್ಣಿಂದ ನೀರು ಬರದೆ ಇರಲಾರದು.
ಅವರ ಹಕ್ಕನ್ನು ದಕ್ಕಿಸಿಕೊಡಲು ಎಷ್ಟು ಜನ ಪ್ರಯತ್ನ ಪಡುತ್ತಿದ್ದಾರೆ ?ಇಡೀ ದಿನ ದಣಿವೆನ್ನದೆ ದುಡಿದು, ರಾತ್ರಿ ವಿಶ್ರಾಂತಿಗೆ ಜಾಗವಿಲ್ಲದೆ, ತಿನ್ನಲು ಮೂರು ಹೊತ್ತು ಊಟವಿಲ್ಲದೆ ಅಲೆದಾಡುವ ಕಾರ್ಮಿಕರನ್ನೂ ನೋಡಿದ್ದೇವೆ. ಕೇವಲ ಕಾರ್ಮಿಕ ದಿನಾಚರಣೆ ಆಚರಣೆಗಷ್ಟೇ ಸೀಮಿತವಾಯಿತೇ, ಅವರ ಪರವಾಗಿ ನಮ್ಮ ಮನಸ್ಸಿನಲ್ಲಿ ಯಾವುದೇ ಭಾವನೆಗಳಿಲ್ಲವೇ?
ಕಾರ್ಮಿಕ ಪ್ರಭುತ್ವದ ಶುಭಯುಗದ ಉದಯದ ಕುರುಹಾಗಿ 1889 ಮೇ 1 ರಂದು ಉತ್ಸವಾಚರಣೆ ಮಾಡಬೇಕೆಂದು ರಾಬರ್ಟ ಓವೆನ್ ಸೂಚಿಸಿದ್ದ. 1889ರಲ್ಲಿ ಪ್ಯಾರಿಸಿನಲ್ಲಿ ಸಮಾವೇಶಗೊಂಡಿದ್ದ ಸಮಾಜವಾದಿ ಅಂತರರಾಷ್ಟ್ರೀಯ ಪ್ರಥಮ ಅಧಿವೇಶನದಲ್ಲಿ ಮೇ 1 ನೇ ದಿನಾಂಕವನ್ನು ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಆಚರಿಸಬೇಕೆಂದು ನಿರ್ಧರಿಸಲಾಯಿತು.
ಈ ದಿನದ ಆಚರಣೆಯ ಮೂಲ ಇರುವುದು ಅಮೆರಿಕಾದಲ್ಲಿ 19ನೇ ಶತಮಾನದಲ್ಲಿ ನಡೆದ ಕಾರ್ಮಿಕ ಚಳವಳಿಗಳಲ್ಲಿ. ಕೆಲಸದ ಅವಧಿಯನ್ನು ದಿನಕ್ಕೆ 8 ಗಂಟೆ ನಿಗದಿ ಪಡಿಸಲು, ದುಡಿಯುವ ಪರಿಸರದಲ್ಲಿ ಮೂಲಸೌಕರ್ಯ ಒದಗಿಸಲು ಮತ್ತು ಕಾರ್ಮಿಕರ ಹಿತರಕ್ಷಣೆ ಕಾನೂನುಗಳನ್ನು ರೂಪಿಸಲು ಪಟ್ಟುಹಿಡಿದ ಕಾರ್ಮಿಕ ಒಕ್ಕೂಟದ ಸದಸ್ಯರು, ಸಮಾಜವಾದಿಗಳು ಮತ್ತು ಕಮ್ಯೂನಿಸ್ಟರು ಧರಣಿ ಹೂಡಿದ್ದರು.
ಭಾರತದಲ್ಲಿ ಮೇ ದಿನವೇ ಕಾರ್ಮಿಕರ ದಿನ. 20 ನೇ ಶತಮಾನದ ಎರಡನೆಯ ದಶಕದ ದ್ವಿತೀಯಾರ್ಧದಲ್ಲಿ ಕಾರ್ಮಿಕ ಸಂಘ ಚಳುವಳಿಯ ಪ್ರಭಾವ ಹೆಚ್ಚಿಸಿದಾಗಿನಿಂದ ಇದರ ಆಚರಣೆ ಆರಂಭವಾಯಿತು.
ಮೇ ದಿನಾಚರಣೆಯಲ್ಲಿ ಭಾಗವಹಿಸಿದ ಮೊಟ್ಟಮೊದಲಿನ ಭಾರತೀಯ ಕಾರ್ಮಿಕರು ಇಂಗ್ಲೆಂಡಿನಲ್ಲಿದ್ದ ಭಾರತೀಯ ನಾವಿಕರು. ಭಾರತಕ್ಕೆ ಸ್ವಾತಂತ್ರ್ಯ ನೀಡಬೇಕೆಂದು ಘೋಷಣೆಯನ್ನೊಳಗೊಂಡ ಪ್ರದರ್ಶನ ಚಿತ್ರಗಳನ್ನು ಹಿಡಿದು ಮೆರವಣಿಗೆಯಲ್ಲಿ ಅವರು ಹೈಡ್ ಪಾರ್ಕಿನ ಮೇ ದಿನದ ಉತ್ಸವ ಸಭೆಗೆ ಹೋದರು (1925). ಭಾರತದಲ್ಲಿ 1927 ರಿಂದೀಚೆಗೆ ಪ್ರತಿವರ್ಷವೂ ಕಾರ್ಮಿಕರು ಈ ದಿನವನ್ನಾಚರಿಸುತ್ತಿದ್ದಾರೆ.
ದಿನದ 24 ಗಂಟೆಗಳಲ್ಲಿ 8 ಗಂಟೆ ಕೆಲಸಕ್ಕೆ, 8 ಗಂಟೆ ಮನೋಲ್ಲಾಸಕ್ಕೆ ಮತ್ತು 8 ಗಂಟೆ ವಿಶ್ರಾಂತಿಗೆ ಮೀಸಲಿಡಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಭಾರತದಲ್ಲಿ 1923 ಮೇ 1ರಂದು ಚೆನ್ನೈನಲ್ಲಿ(ಮದ್ರಾಸ್) ಮೊದಲಿಗೆ ಈ ದಿನ ಆಚರಿಸಲಾಯಿತು. ಅಂದಿನ ಹಿಂದೂಸ್ತಾನ್ ಕಿಸಾನ್ ಪಕ್ಷವು ಈ ಆಚರಣೆಗೆ ನಾಂದಿಹಾಡಿತು.
ಈ ದಿನವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಲು ಪಕ್ಷವು ಅಂದೇ ಒತ್ತಾಯಿಸಿತ್ತು. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೇ 1ನ್ನು ಕಾರ್ಮಿಕ ದಿನಾಚರಣ ಪ್ರಯುಕ್ತ ಸಾರ್ವಜನಿಕ ರಜೆ ಇರುತ್ತದೆ. 1923ರ ಇದೇ ದಿನದಂದು, ಲೇಬರ್ ಕಿಸಾನ್ ಪಕ್ಷ ಮೊದಲ ಬಾರಿಗೆ ಭಾರತದಲ್ಲಿ ಕಾರ್ಮಿಕ ದಿನಾಚರಣೆ ಆಚರಿಸಿತ್ತು.
ವಿವಿಧ ವೃತ್ತಿರಂಗದ ಕಾರ್ಮಿಕರು ಬಳಸುವ ಸಲಕರಣೆ-ಸಾಧನಗಳ ಚಿತ್ರಗಳನ್ನು ಡೂಡಲ್ನಲ್ಲಿ ಬಿಂಬಿಸಿದೆ. ಕಾರ್ಮಿಕರಿಗೆ ಗೌರವ ಸೂಚಕವಾಗಿ ಆಚರಿಸುವ ಈ ದಿನಕ್ಕೆ 'ಮೇ ಡೇ' ಎಂತಲೂ ಕರೆಯುತ್ತಾರೆ.

ಕಾಂಕ್ರೀಟ್ ಸ್ಲ್ಯಾಬ್ ಈ ಕಾರ್ಮಿಕನಿಗೆ ಆಶ್ರಯ ತಾಣ
ವಿಶ್ವ ಕಾರ್ಮಿಕರ ದಿನದಂದು ಮೋರಾದಾಬಾದ್ನಲ್ಲಿ ರೈಲ್ವೆ ಗೋಡಾನ್ನ ಕಾರ್ಮಿಕರೊಬ್ಬರು ಕಾಂಕ್ರೀಟ್ ಸ್ಲ್ಯಾಬ್ ಮೇಲೆ ಮಲಗಿ ವಿಶ್ರಾಂಥಿ ಪಡೆಯುತ್ತಿರುವ ದೃಶ್ಯ ಕಂಡುಬಂತು. ಇದನ್ನು ನೋಡಿದಾಗ ಕಾರ್ಮಿಕನ ಸ್ಥಿತಿ ಹೇಗಿದೆ ಎನ್ನುವುದು ಅರ್ಥವಾಗದೇ ಇರಲಾರದು.

ಮುಂಬೈ ಇಂಡಿಯನ್ಸ್ ಮಣಿಸಿದ ಆರ್ಸಿಬಿ
ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ 14 ರನ್ಗಳಿಂದ ಆರ್ಸಿಬಿಯನ್ನು ಮಣಿಸಿತು. ಆರ್ಸಿಬಿ ಗೆಲುವಿನ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯ ಸಂಭ್ರದ ನಗು.

ಕ್ಯೂಬಾದಲ್ಲಿ ನದಿಯಂತೆ ಕಂಡ ಕಾರ್ಮಿಕರ ಮೆರವಣಿಗೆ
ಹವಾನಾದ ಕ್ಯೂಬಾದಲ್ಲಿ ಮಂಗಳವಾರ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾರ್ಮಿಕರು, ಕ್ಯೂಬನ್ಸ್ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ನೆರೆದಿದ್ದ ಜನರು ಒಂದು ನಂದಿಯಂತೆ ಗೋಚರಿಸುತ್ತಿತ್ತು.

ಮರಳಿನ ಮೇಲೆ ನೃತ್ಯ ಚಮತ್ಕಾರ
ಮುಂಬೈನ ಸಮುದ್ರವೊಂದರ ದಡದಲ್ಲಿ ಮರಳಿನ ಮೇಲೆ ಯುವಕನೊಬ್ಬನು ನೃತ್ಯ ಮಾಡಿ ಎಲ್ಲರ ಗಮನ ಸೆಳೆದನು. ನೃತ್ಯಕ್ಕೆ ವೇಳೆ, ಜಾಗವೆನ್ನುವುದಿಲ್ಲ, ಮನಸ್ಸಿಗೆ ಸಂತೋಷ ಸಿಕ್ಕರೆ ಸಾಕೆಂದು ಡ್ಯಾನ್ಸ್ ಮಾಡುತ್ತಾ, ಅಲ್ಲಿದ್ದವರ ಗಮನ ಸೆಳೆದನು.

ಹೂವಿಗಾಗಿ ನಿಂತ ಮಹಿಳೆಯರು
ರಾಂಚಿಯಲ್ಲಿ ಮಂದ ಪೂಜಾ ಹಬ್ಬದ ಕೊನೆಯ ದಿನವಾದ ಮಂಗಳವಾರ ಭೋಕ್ತಾದಿಂದ ಬೀಳುವ ಹೂವಿಗಾಗಿ ಗಂಟೆಗಟ್ಟಲೆ ಕಾದುನಿಂತ ಮಹಿಳೆಯರು,
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications