ಉತ್ತರ, ಪಶ್ಚಿಮ ಭಾರತದಲ್ಲಿ ರಾತ್ರಿ ವೇಳೆ ದಾಖಲಾಗುತ್ತಿದೆ ಅತ್ಯಧಿಕ ತಾಪಮಾನ
ನವದೆಹಲಿ,ಫೆಬ್ರವರಿ 19: ದೇಶಾದ್ಯಂತ ಚಳಿ ಮುಂದುವರೆದಿದ್ದರೂ ಕೂಡ ಉತ್ತರ ಹಾಗೂ ಪಶ್ಚಿಮ ಭಾರತದಲ್ಲಿ ರಾತ್ರಿಹೊತ್ತು ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಫೆಬ್ರವರಿ 22ರವರೆಗೆ ಉತ್ತರ ಭಾರತ,ಮಧ್ಯ ಭಾರತ ಹಾಗೂ ಪೂರ್ವ ಭಾರತದ ಕೆಲವು ಭಾಗಗಳಲ್ಲಿ ರಾತ್ರಿ ಸಂದರ್ಭದಲ್ಲಿ ಬೆಚ್ಚಗಿನ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ(ಫೆ.18) ದೆಹಲಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು. ಇದು ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಿತ್ತು.ಮತ್ತು ಕನಿಷ್ಠ ಉಷ್ಣಾಂಶ 9.6 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು ಇದು ಸಾಮಾನ್ಯಕ್ಕಿಂತ ಒಂದು ಡಿಗ್ರಿಯಷ್ಟು ಹೆಚ್ಚಿದೆ.
ಅಮೃತಸರದಲ್ಲಿ 22 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 10.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದು ಸಾಮಾನ್ಯಕ್ಕಿಂತ 3 ಡಿಗ್ರಿಯಷ್ಟು ಹೆಚ್ಚು. ಅಹಮದಾಬಾದ್ ನಲ್ಲಿ ಗರಿಷ್ಠ ತಾಪಮಾನ 33.2 ಡಿಗ್ರಿ ಸೆಲ್ಸಿಯಸ್, ಇದು ಸಾಮಾನ್ಯಕ್ಕಿಂತ 2 ಡಿಗ್ರಿಯಷ್ಟು, ಮತ್ತು ಕನಿಷ್ಠ 17.8 ಡಿಗ್ರಿ ಸೆಲ್ಸಿಯಸ್ ಇದು ಸಾಮಾನ್ಯಕ್ಕಿಂತ 3ಡಿಗ್ರಿಯಷ್ಟು ಹೆಚ್ಚಿದೆ.

ಕನಿಷ್ಠ ತಾಮಾನದಲ್ಲಿ ಹೆಚ್ಚಳ
ಗುಜರಾತ್,ಜಮ್ಮು ಮತ್ತು ಕಾಶ್ಮೀರ, ಮಧ್ಯ ಹಾಗೂ ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇವು ಭಾರತದ ಉಳಿದ ಭಾಗಗಳಿಗಿಂತ ಸಾಮಾನ್ಯ ಅಥವಾ ಸ್ವಲ್ಪ ಕಡಿಮೆ ಉಷ್ಣಾಂಶವಾಗಿದೆ.

ಹರ್ಯಾಣ,ಪಂಜಾಬ್ನಲ್ಲಿ ದಟ್ಟ ಮಂಜುಕವಿದ ವಾತಾವರಣ
ಪಂಜಾಬ್ನ ವಾಯುವ್ಯ ಭಾಗ, ರಾಜಸ್ಥಾನ,ಹರ್ಯಾಣ,ಚಂಡೀಗಢ ಹಾಗೂ ದೆಹಲಿಯ ಕೆಲವು ಭಾಗಗಳಲ್ಲಿ ಶುಕ್ರವಾರ ದಟ್ಟ ಮಂಜು ಕಂಡುಬಂದಿದೆ. ಅಮೃತಸರ,ಪಟಿಯಾಲ ಮತ್ತು ಗಂಗನಗರದಲ್ಲಿ 25 ಮೀಟರ್ಗಿಂತ ಕಡಿಮೆ ಗೋಚರತೆಯನ್ನು ದಾಖಲಿಸಿದೆ. ಫೆಬ್ರವರಿ 18 ರಿಂದ ಮಾರ್ಚ್ 3ರವರೆಗೆ ರಾಜಸ್ಥಾನದ ಪಶ್ಚಿಮ ಭಾಗಗಳನ್ನು ಹೊರತುಪಡಿಸಿ ವಾಯುವ್ಯ ,ಮಧ್ಯ ಭಾರತ, ಈಶಾನ್ಯ ರಾಜ್ಯಗಳಲ್ಲಿ ಉಷ್ಣಾಂಶ ಕಡಿಮೆ ಇರಲಿದೆ.

ದೇಶದ ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಮಶ್ಚಿಮ ಮಧ್ಯಪ್ರದೇಶ,ವಿದರ್ಭ,ಮರಾಠವಾಡ ಮತ್ತು ಮಧ್ಯ ಮಹಾರಾಷ್ಟ್ರಗಳಲ್ಲಿ ಗುಡುಗು,ಮಿಂಚು ಹಾಗೂ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆಗಳಿವೆ.

ಉತ್ತರಾಖಂಡ್ ಪರಿಸ್ಥಿತಿ ಹೇಗಿದೆ?
ಉತ್ತರಾಖಂಡ್ನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ. ಹಿಮಪಾತವೂ ಮುಂದುವರೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಎಚ್ಚರಿಕೆ ಸಂದೇಶ ರವಾನಿಸಿದೆ.
-
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
'ಕೆಲಸ ಇಲ್ಲ ಅಂದ್ರೆ ಜೀವನ ಮುಗಿದಿಲ್ಲ': ಲಂಡನ್ನಲ್ಲಿ ಕೆಲಸ ಕಳೆದುಕೊಂಡ ಭಾರತೀಯ ಮಹಿಳೆಯ Video Viral -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications