ಉತ್ತರ, ಪಶ್ಚಿಮ ಭಾರತದಲ್ಲಿ ರಾತ್ರಿ ವೇಳೆ ದಾಖಲಾಗುತ್ತಿದೆ ಅತ್ಯಧಿಕ ತಾಪಮಾನ
ನವದೆಹಲಿ,ಫೆಬ್ರವರಿ 19: ದೇಶಾದ್ಯಂತ ಚಳಿ ಮುಂದುವರೆದಿದ್ದರೂ ಕೂಡ ಉತ್ತರ ಹಾಗೂ ಪಶ್ಚಿಮ ಭಾರತದಲ್ಲಿ ರಾತ್ರಿಹೊತ್ತು ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಫೆಬ್ರವರಿ 22ರವರೆಗೆ ಉತ್ತರ ಭಾರತ,ಮಧ್ಯ ಭಾರತ ಹಾಗೂ ಪೂರ್ವ ಭಾರತದ ಕೆಲವು ಭಾಗಗಳಲ್ಲಿ ರಾತ್ರಿ ಸಂದರ್ಭದಲ್ಲಿ ಬೆಚ್ಚಗಿನ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ(ಫೆ.18) ದೆಹಲಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು. ಇದು ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಿತ್ತು.ಮತ್ತು ಕನಿಷ್ಠ ಉಷ್ಣಾಂಶ 9.6 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು ಇದು ಸಾಮಾನ್ಯಕ್ಕಿಂತ ಒಂದು ಡಿಗ್ರಿಯಷ್ಟು ಹೆಚ್ಚಿದೆ.
ಅಮೃತಸರದಲ್ಲಿ 22 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 10.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದು ಸಾಮಾನ್ಯಕ್ಕಿಂತ 3 ಡಿಗ್ರಿಯಷ್ಟು ಹೆಚ್ಚು. ಅಹಮದಾಬಾದ್ ನಲ್ಲಿ ಗರಿಷ್ಠ ತಾಪಮಾನ 33.2 ಡಿಗ್ರಿ ಸೆಲ್ಸಿಯಸ್, ಇದು ಸಾಮಾನ್ಯಕ್ಕಿಂತ 2 ಡಿಗ್ರಿಯಷ್ಟು, ಮತ್ತು ಕನಿಷ್ಠ 17.8 ಡಿಗ್ರಿ ಸೆಲ್ಸಿಯಸ್ ಇದು ಸಾಮಾನ್ಯಕ್ಕಿಂತ 3ಡಿಗ್ರಿಯಷ್ಟು ಹೆಚ್ಚಿದೆ.

ಕನಿಷ್ಠ ತಾಮಾನದಲ್ಲಿ ಹೆಚ್ಚಳ
ಗುಜರಾತ್,ಜಮ್ಮು ಮತ್ತು ಕಾಶ್ಮೀರ, ಮಧ್ಯ ಹಾಗೂ ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇವು ಭಾರತದ ಉಳಿದ ಭಾಗಗಳಿಗಿಂತ ಸಾಮಾನ್ಯ ಅಥವಾ ಸ್ವಲ್ಪ ಕಡಿಮೆ ಉಷ್ಣಾಂಶವಾಗಿದೆ.

ಹರ್ಯಾಣ,ಪಂಜಾಬ್ನಲ್ಲಿ ದಟ್ಟ ಮಂಜುಕವಿದ ವಾತಾವರಣ
ಪಂಜಾಬ್ನ ವಾಯುವ್ಯ ಭಾಗ, ರಾಜಸ್ಥಾನ,ಹರ್ಯಾಣ,ಚಂಡೀಗಢ ಹಾಗೂ ದೆಹಲಿಯ ಕೆಲವು ಭಾಗಗಳಲ್ಲಿ ಶುಕ್ರವಾರ ದಟ್ಟ ಮಂಜು ಕಂಡುಬಂದಿದೆ. ಅಮೃತಸರ,ಪಟಿಯಾಲ ಮತ್ತು ಗಂಗನಗರದಲ್ಲಿ 25 ಮೀಟರ್ಗಿಂತ ಕಡಿಮೆ ಗೋಚರತೆಯನ್ನು ದಾಖಲಿಸಿದೆ. ಫೆಬ್ರವರಿ 18 ರಿಂದ ಮಾರ್ಚ್ 3ರವರೆಗೆ ರಾಜಸ್ಥಾನದ ಪಶ್ಚಿಮ ಭಾಗಗಳನ್ನು ಹೊರತುಪಡಿಸಿ ವಾಯುವ್ಯ ,ಮಧ್ಯ ಭಾರತ, ಈಶಾನ್ಯ ರಾಜ್ಯಗಳಲ್ಲಿ ಉಷ್ಣಾಂಶ ಕಡಿಮೆ ಇರಲಿದೆ.

ದೇಶದ ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಮಶ್ಚಿಮ ಮಧ್ಯಪ್ರದೇಶ,ವಿದರ್ಭ,ಮರಾಠವಾಡ ಮತ್ತು ಮಧ್ಯ ಮಹಾರಾಷ್ಟ್ರಗಳಲ್ಲಿ ಗುಡುಗು,ಮಿಂಚು ಹಾಗೂ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆಗಳಿವೆ.

ಉತ್ತರಾಖಂಡ್ ಪರಿಸ್ಥಿತಿ ಹೇಗಿದೆ?
ಉತ್ತರಾಖಂಡ್ನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ. ಹಿಮಪಾತವೂ ಮುಂದುವರೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಎಚ್ಚರಿಕೆ ಸಂದೇಶ ರವಾನಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications