ಅಪಹೃತ ಕೋಬ್ರಾ ಕಮಾಂಡೋ ಭಾವಚಿತ್ರ ಬಿಡುಗಡೆಗೊಳಿಸಿದ ನಕ್ಸಲರು
ರಾಯ್ಪುರ, ಏಪ್ರಿಲ್ 7: ಅಪಹರಣ ಮಾಡಿದ್ದ ಕೋಬ್ರಾ ಕಮಾಂಡೋ ಒಬ್ಬರ ಭಾವಚಿತ್ರವನ್ನು ನಕ್ಸಲರು ಬಿಡುಗಡೆ ಮಾಡಿದ್ದಾರೆ.
ಛತ್ತೀಸ್ಗಢದಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಕೋಬ್ರಾ ಕಮಾಂಡೋ ಒಬ್ಬರನ್ನು ಮಾವೋವಾದಿಗಳು ಅಪಹರಣ ಮಾಡಿದ್ದರು. ಬಳಿಕ ಈ ಕುರಿತು ಪತ್ರಕರ್ತರೊಬ್ಬರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಯೋಧನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಮಧ್ಯವರ್ತಿಯೊಬ್ಬರನ್ನು ಸರ್ಕಾರ ನೇಮಕ ಮಾಡಬೇಕೆಂದು ಹೇಳಿದ್ದರು.
ಛತ್ತೀಸ್ಗಢದ ಸುಕ್ಮಾ ಹಾಗೂ ಬಿಜಾಪುರ ಜಿಲ್ಲೆಯ ಗಡಿಯ ಜೊನಗುಡ ಮತ್ತು ಟೆಕಲ್ಗುಡದ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಯ ಮೇಲೆ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿದ ಪರಿಣಾಮ 22 ಯೋಧರು ಹುತಾತ್ಮರಾಗಿದ್ದರು.

ಇದೀಗ ಯೋಧನ ಫೋಟೋವನ್ನು ಬಿಡುಗಡೆ ಮಾಡಿರುವ ಮಾವೋವಾದಿಗಳು ಯೋಧ ಸುರಕ್ಷಿತವಾಗಿದ್ದು, ನಾವು ಯಾವುದೇ ರೀತಿಯ ಹಾನಿ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯ ತರೆಮ್, ಉಸೂರ್, ಪಮೇಡ್, ಸುಕ್ಮಾ ಜಿಲ್ಲೆಯ ಮಿನ್ಪಾ ಹಾಗೂ ನರ್ಸಾಪುರಂ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ಆರಂಭವಾಗಿತ್ತು.
2,000 ಸಿಬ್ಬಂದಿ ಭಾಗಿಯಾಗಿದ್ದರು. ಅಧಿಕಾರಿಯೊಬ್ಬರ ಪ್ರಕಾರ, ಗುಂಡಿನ ದಾಳಿ ಕೃತ್ಯದಲ್ಲಿ ಸುಮಾರು 400 ಮಾವೋವಾದಿಗಳು ಭಾಗಿಯಾಗಿದ್ದರು. ಪಿಎಲ್ಜಿಎ ಸಂಘಟನೆ 1ನೇ ಬೆಟಾಲಿಯನ್ನ ಹಿದ್ಮಾ ಮತ್ತು ಆತನ ಸಹಚರರಾದ ಸುಜಾತಾ ಈ ದಾಳಿಯ ಹಿಂದಿದ್ದಾರೆ ಎಂದು ಶಂಕಿಸಲಾಗಿದೆ. ಕೋಬ್ರಾ ಯೋಧರು ತೀವ್ರ ಪ್ರತಿರೋಧ ತೋರಿದ್ದರಿಂದ ನಕ್ಸಲರು ಇನ್ನಷ್ಟು ದಾಳಿ ಮುಂದುವರಿಸಲಾಗಲಿಲ್ಲ.
ನಕ್ಸಲರು ಅಡಗಿದ್ದಾರೆ ಎಂದು ನಮಗೆ ಬಂದಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ತೆರಳಿದ್ದೆವು, ಆದರೆ ಆ ಜಾಗದಲ್ಲಿ ಉಆರೂ ಇರಲಿಲ್ಲ, ಕೆಂಪು ಬಾವುಟವಿತ್ತು. ನಾವು ವಾಪಸ್ ತೆರಳುವುದಕ್ಕೆ ಮುಂದಾದಾಗ ಹೇಗೆ ನಕ್ಸಲರು ದಾಳಿ ಮಾಡಿದರು ಎಂಬುದೇ ತಿಳಿಯಲಿಲ್ಲ ಎಂದು ಯೋಧರೊಬ್ಬರು ತಿಳಿಸಿ್ದರು.
ಮಾವೋವಾದಿಗಳ ಪ್ರಾಬಲ್ಯವಿರುವ ಗಡಿ ಜಿಲ್ಲೆಯ ಸುಕ್ಮಾದ ಅರಣ್ಯ ಭಾಗದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳನ್ನು ಸುತ್ತುವರಿದು ನಕ್ಸಲರು ಗುಂಡಿನ ದಾಳಿ ನಡೆಸಿದ್ದರು. ಸುಮಾರು 4 ಗಂಟೆ ಗುಂಡಿನ ಚಕಮಕಿ ನಡೆದಿದೆ. ತಂಡವು ತರೆಮ್ನಿಂದ ಹೊರಟು ಜೋನಾಗುಡ ಅರಣ್ಯದ ಮೂಲಕ ಹೋಗುವಾಗ ದಾಳಿ ನಡೆದಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications