ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನುಮಾನ ತರುವ ಹವಾಮಾನ ವರದಿ, ಇಲಾಖೆ ವಿರುದ್ಧ ದೂರು

By Mahesh
|
Google Oneindia Kannada News

ಮುಂಬೈ, ಜುಲೈ 15: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ, ವರದಿಗಳು ಅನುಮಾನ ಹುಟ್ಟಿಸುತ್ತಿವೆ. ಸರಿಯಾದ ಮಾಹಿತಿಯನ್ನು ಪ್ರಕಟಿಸುತ್ತಿಲ್ಲ ಎಂಬ ಆರೋಪವನ್ನು ಮರಾಠವಾಡ ರೈತರು ಮಾಡಿದ್ದಾರೆ.

ಬೀಜ ಹಾಗೂ ರಸಗೊಬ್ಬರ ಕಂಪನಿಗಳ ಅಗತ್ಯಕ್ಕೆ ತಕ್ಕಂತೆ ವರದಿಗಳನ್ನು ತಿರುಚಿ, ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

Marathwada farmers accuse IMD of conspiracy

'ಹವಾಮಾನ ಇಲಾಖೆಯ ಪುಣೆ ಮತ್ತು ಕೊಲಬಾ ಕೇಂದ್ರಗಳ ಅಧಿಕಾರಿಗಳು, 'ಜೂನ್‌-ಜುಲೈನಲ್ಲಿ ವಾಡಿಕೆ ಮಳೆಯಾಗುತ್ತದೆ' ಎಂದು ಮುನ್ಸೂಚನೆ ನೀಡಿದ್ದರು. ಅದನ್ನು ನಂಬಿಕೊಂಡು ಇಲ್ಲಿನ ರೈತರು ಉಳುಮೆ ಕಾರ್ಯ ಮುಗಿಸಿ, ಗೊಬ್ಬರವನ್ನೂ ಹಾಕಿ, ಬಿತ್ತನೆಯನ್ನೂ ಮುಗಿಸಿದ್ದಾರೆ. ವಾಡಿಕೆಯಂತೆ ಬೀಳಬೇಕಾಗಿದ್ದ ಮಳೆ ಕೈಕೊಟ್ಟಿದೆ. ಮುನ್ಸೂಚನೆ ವರದಿಯಲ್ಲಿದ್ದಂತೆ ಮೊದಲೆರಡು ದಿನ ಮಳೆ ಸುರಿದಿದ್ದು ಬಿಟ್ಟರೆ ಮತ್ತೆ ಒಣ ಹವೆ ಮುಂದುವರೆದಿದೆ.

ಇಲಾಖೆಯ ಅಧಿಕಾರಿಗಳು ಬೀಜ ಮತ್ತು ಗೊಬ್ಬರ ತಯಾರಕರ ಜತೆ ಕೈಜೋಡಿಸಿ, ನಮ್ಮನ್ನು ವಂಚಿಸಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ' ಎಂದು ರೈತರು ದೂರಿನಲ್ಲಿ ಕೋರಿದ್ದಾರೆ.

English summary
Accusing the Indian Meteorological Department of getting forecasts always wrong, farmers from the Marathwada region have filed a police complaint. Farmers alleged that the IMD was colluding with seed and pesticide manufacturers inflating the monsoon forecast figures.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X