Breaking; ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ, ಜುಲೈ 17; ಕೇಂದ್ರದ ಮಾಜಿ ಸಚಿವೆ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ. ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಭಾನುವಾರ ದೆಹಲಿಯಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಶನಿವಾರ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್ ಹೆಸರು ಘೋಷಣೆ ಮಾಡಲಾಗಿತ್ತು. ವಿರೋಧ ಪಕ್ಷಗಳು ದೆಹಲಿಯಲ್ಲಿ ಭಾನುವಾರ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿವೆ.

ಕಾಂಗ್ರಸ್ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಕೇಂದ್ರದ ಸಚಿವರಾಗಿ ಕೆಲಸ ಮಾಡಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿರುವ ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿವೆ.
ಉಪ ರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದೆ. ಅದಕ್ಕೂ ಮೊದಲು ಹೊಸ ಉಪ ರಾಷ್ಟ್ರಪತಿ ಆಯ್ಕೆಯಾಗಬೇಕಿದೆ. ಈ ಹಿನ್ನಲೆಯಲ್ಲಿ ಆಗಸ್ಟ್ 6ರಂದು ಚುನಾವಣೆ ನಡೆಯಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.
It is a privilege and an honour to be nominated as the candidate of the joint opposition for the post of Vice President of India. I accept this nomination with great humility and thank the leaders of the opposition for the faith they’ve put in me.
— Margaret Alva (@alva_margaret) July 17, 2022
Jai Hind 🇮🇳
ಜಗದೀಪ್ ಧನ್ಖರ್; ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಎನ್ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಮಾರ್ಗರೇಟ್ ಆಳ್ವ ಎದುರಾಳಿಯಾಗಿದ್ದಾರೆ.
ಅಧಿಸೂಚನೆ ಪ್ರಕಟ; ಉಪರಾಷ್ಟ್ರಪತಿ ಚುನಾವಣೆಯ ಅಧಿಸೂಚನೆಯನ್ನು ನಿಯಮ 1952ರ 4ನೇ ನಿಯಮದ, ಉಪನಿಯಮ [1]ರ ಅಡಿ ಹೊರಡಿಸಲಾಗಿದೆ.
ನಾಮಪತ್ರಗಳನ್ನು ಅಭ್ಯರ್ಥಿ ಅಥವಾ ಯಾವುದೇ ಸೂಚಕರು ಅಥವಾ ಎರಡನೇಯವರಾಗಿ ಸಹಿ ಮಾಡಿರುವವರು, ನವದೆಹಲಿಯ ಸಂಸತ್ ಭವನದ ನೆಲಮಹಡಿಯ ಕೊಠಡಿ ಸಂಖ್ಯೆ 18ರಲ್ಲಿ ಸಹಿ ಮಾಡಿದವರಿಗೆ ಅಥವಾ ಅನಿವಾರ್ಯವಾಗಿ ಗೈರು ಹಾಜರಾದಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಗೆ, ಲೋಕಸಭೆಯ ಜಂಟಿ ಕಾರ್ಯದರ್ಶಿ ಪಿ.ಸಿ. ತ್ರಿಪಾಠಿ ಅಥವಾ ಸದರಿ ಕಚೇರಿಯ ರಾಜು ಶ್ರೀವಾಸ್ತವ, ಲೋಕಸಭಾ ಸಚಿವಾಲಯದ ನಿರ್ದೇಶಕರಿಗೆ ಸಲ್ಲಿಸಬಹುದಾಗಿದೆ.
ಪ್ರತಿಯೊಂದು ನಾಮಪತ್ರದಲ್ಲಿ ಅಭ್ಯರ್ಥಿಯು ಸಂಸತ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮತದಾರನಾಗಿ ನೋಂದಾಯಿಸಲ್ಪಟ್ಟಿರುವ ಸಂಬಂಧ ದೃಢೀಕೃತ ಪ್ರತಿಯೊಂದಿಗೆ ಸಲ್ಲಿಸಬೇಕು. ಪ್ರತಿಯೊಬ್ಬ ಅಭ್ಯರ್ಥಿಯು ಕನಿಷ್ಠ 15 ಸಾವಿರ ರೂಪಾಯಿ ಮೊತ್ತವನ್ನು ಠೇವಣಿ ರೂಪದಲ್ಲಿ ಸಲ್ಲಿಸಬೇಕು.
ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿಗಳಿಗೆ ಈ ಮೊತ್ತವನ್ನು ನಗದು ರೂಪದಲ್ಲಿ ಅಥವಾ ಇದಕ್ಕೂ ಮುನ್ನ ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಠೇವಣಿ ಮಾಡಿರಬೇಕು ಅಥವಾ ಸರ್ಕಾರಿ ಖಜಾನೆ ಮತ್ತು ಈ ಸಂದರ್ಭದಲ್ಲಿ ಸದರಿ ಮೊತ್ತವನ್ನು ಠೇವಣಿ ಮಾಡಲಾಗಿದೆ ಎಂದು ತೋರಿಸುವ ರಸೀದಿ ಸಲ್ಲಿಸಬೇಕು.
ಆಗಸ್ಟ್ 6 ರ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಿಯಮಗಳ ಅಡಿಯಲ್ಲಿ ನಿಗದಿಪಡಿಸಿದ ಮತದಾನ ಕೇಂದ್ರದಲ್ಲಿ ಮತದಾನ ನಡೆಯಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications