ಮನದಾಸೆ ಈಡೇರಿಸಿದ 'ವಿಷಕಂಠ'ನಿಗೆ ನಾಲಿಗೆಯನ್ನೇ ಕತ್ತರಿಸಿ ಕೊಟ್ಟಳು!
ಕೊರ್ಬಾ, ಫೆ 15 (ಪಿಟಿಐ): 'ಶಿವಪ್ಪ ಕಾಯೋ ತಂದೆ' ಎಂದು ಬೇಡರ ಕಣ್ಣಪ್ಪ ಅಂದು ಶಿವನಿಗೆ ಕಣ್ಣು ಕಿತ್ತುಕೊಟ್ಟನಂತೆ, 'ಬೆಂದ ಜೀವ ನೊಂದು, ಕೂಗೆ ಬಂದು ನೋಡೆಯಾ ಹರನೇ' ಎಂದು ಕಲಿಯುಗದ ಭಕ್ತೆಯೊಬ್ಬಳು ಶಿವನಿಗೆ ನಾಲಿಗೆಯನ್ನೇ ಕತ್ತರಿಸಿಕೊಟ್ಟಿದ್ದಾಳೆ.
ಛತ್ತೀಸಗಢ, ಕೊರ್ಬಾ ಜಿಲ್ಲೆ, ನೌನೇರಾ ಗ್ರಾಮದ, ಸೀಮಾಬಾಯಿ ಗೊಂದ್ ಎನ್ನುವ 28ವರ್ಷದ ವಿವಾಹಿತ ಮಹಿಳೆ, ಸಮೀಪದ ಶಿವ ದೇವಾಲಯವೊಂದರಲ್ಲಿ ಅಸಂಖ್ಯಾತ ಭಕ್ತರ ಸಮ್ಮುಖದಲ್ಲೇ ಶಿವಲಿಂಗದ ಮುಂದೆ ನಿಂತು ಚಾಕುವಿನಿಂದ ತನ್ನ ನಾಲಗೆಯನ್ನು ಕತ್ತರಿಸಿ ಶಿವನಿಗೆ ಅರ್ಪಿಸಿದ್ದಾಳೆ.
ಅಚಾನಕ್ ಆಗಿ ನಡೆದ ಈ ಘಟನೆಯಿಂದ ವಿಚಲಿತರಾದ ದೇವಾಲಯದಲ್ಲಿ ನೆರೆದಿದ್ದ ಭಕ್ತರಲ್ಲಿ ಕೆಲವರು ಆಕೆಯನ್ನು ಸಮೀಪದ ಆಸ್ಪತ್ರೆಗೆ ಕೂಡಲೇ ದಾಖಲಿಸಿದ್ದಾರೆ. ಸದ್ಯ, ಈಕೆ ಚೇತರಿಸಿಕೊಳ್ಳುತ್ತಿದ್ದು, ಆಕೆಯ ಪತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಮಹಾನ್ ಶಿವಭಕ್ತೆಯಾದ ಈಕೆ, ತನ್ನ ಮನದಾಸೆಯೊಂದು ಈಡೇರಿದರೆ ತನ್ನ ನಾಲಗೆಯನ್ನೇ ಕತ್ತರಿಸಿ ಕೊಡುತ್ತೇನೆಂದು ದೇವರಲ್ಲಿ ಹರಕೆ ಹೊತ್ತಿದ್ದಳು. ಅದಕ್ಕಾಗಿ ಆಕೆ ಹೀಗೆ ಮಾಡಿದ್ದಾಳೆ ಎಂದು ಸೀಮಾಭಾಯಿ ಪತಿ, ಪೊಲೀಸ್ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ.
ಜಿಲ್ಲಾಕೇಂದ್ರ ಕೊಬ್ರಾದಿಂದ ಅರವತ್ತು ಕಿಲೋಮೀಟರ್ ದೂರದಲ್ಲಿರುವ ಈ ದೇವಾಲಯದಲ್ಲಿ, ಬುಧವಾರ (ಫೆ 14) ಬೆಳಗ್ಗಿನ ಪೂಜೆಗೆ ತುಂಬಾ ಭಕ್ತರು ನೆರೆದಿದ್ದರು. ಶಿವಲಿಂಗದ ಮುಂದೆ ತುಂಬಾ ಹೊತ್ತು ಪಾರ್ಥನೆ ಸಲ್ಲಿಸಿದ ನಂತರ, ಸೀಮಾಬಾಯಿ ಶಿವನಿಗೆ ತನ್ನ ನಾಲಿಗೆಯನ್ನು ಅರ್ಪಿಸಿದ್ದಾಳೆ.
ಹರಕೆಗೋಸ್ಕರ ಈ ಕೆಲಸ ಮಾಡಿದ್ದಾಳೆಂದು ಪತಿ ಹೇಳಿದ್ದರೂ, ಪೊಲೀಸರು ಈಕೆಯ ಗಂಡ ಫಿರ್ತು ರಾಂನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications