ಮಂಗಳಯಾನ ದುಡ್ಡು ದಂಡ ಎಂದ 'ಮೂನ್ ಮ್ಯಾನ್ '

ಮಂಗಳಯಾನ 'ಪಬ್ಲಿಸಿಟಿ ಸ್ಟಂಟ್' ಎನ್ನಬಹುದು. ಜೀವ ಉಗಮಕ್ಕೆ ಕಾರಣವಾಗುವ ರಾಸಾಯನಿಕಗಳ ಅನ್ವೇಷಣೆ ಎಂಬುದು ಬರೀ ಮಾತಿಗಷ್ಟೇ. ಮಂಗಳದ ಅಂಗಳದಲ್ಲಿ ಮಿಥೇನ್ ಸೇರಿದಂತೆ ಯಾವುದೇ ಅಗತ್ಯ ರಾಸಾಯನಿಕಗಳಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಈ ಯೋಜನೆ ಕಡಿಮೆ ವೆಚ್ಚದ್ದು ಎಂದರೂ ಸರಿ ಸುಮಾರು 450 ಕೋಟಿ ರು ಕಡಿಮೆ ಮೊತ್ತವೇನಲ್ಲ. ಈಗಾಗಲೇ ಅಮೆರಿಕ ರೋವರ್ ಸಾಧನಗಳು ಮಂಗಳದ ಅಂಗಳದಲ್ಲಿ ಜೀವ ವಿಕಸನಕ್ಕೆ ಕಾರಣವಾಗಬಲ್ಲ ವಾತಾವರಣ ಕಂಡು ಬಂದಿಲ್ಲ ಎಂದು ಸಾರಿವೆ. ಇದೇ ವಿಷಯದ ಮೇಲೆ ಇಸ್ರೋ ಮತ್ತೆ ಹೊಸದಾಗಿ ಏನು ಸಾಧಿಸಲು ಹೊರಟಿದೆ ಗೊತ್ತಿಲ್ಲ ಎಂದು ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಕಡಿಮೆ ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಮೊದಲ ಹಂತ ಯಶಸ್ವಿಯಾಗುತ್ತಿದ್ದಂತೆ ವಿಶ್ವದೆಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ. ಆದರೆ, ಇದರ ಬೆನ್ನಲ್ಲೇ ಇಸ್ರೋ ಮಾಜಿ ಉದ್ಯೋಗಿಗಳ ಅಪಸ್ವರ ಬೇಸರ ತರಿಸಿದೆ.
ರಷ್ಯಾ, ಅಮೆರಿಕ, ಬ್ರಿಟನ್ ಸಾಲಿಗೆ ಸೇರ್ಪಡೆಯಾಗಿರುವ ಭಾರತ ಮಂಗಳಯಾನದ ಕನಸು 1969ರಿಂದ ಕಾಣುತ್ತಲೇ ಇತ್ತು. ಆದರೆ, 2013ರಲ್ಲಿ 450 ಕೋಟಿ ರು ವೆಚ್ಚದಲ್ಲಿ ಈ ಯೋಜನೆ ಸಫಲಗೊಂಡಿದೆ. 2014ರ ಸೆಪ್ಟೆಂಬರ್ ವೇಳೆಗೆ ಮಂಗಳನ ಅಂಗಳಕ್ಕೆ ಉಪಗ್ರಹ ಕಾಲಿಡುವ ನಿರೀಕ್ಷೆಯಿದೆ.
ನಾಯರ್ ಹಿಸ್ಟರಿ: ನಾಯರ್ ಅಧ್ಯಕ್ಷರಾಗಿದ್ದಾಗ ಇಸ್ರೋ ಚಂದ್ರಯಾನ ಕೈಗೊಂಡಿತ್ತು ಎಂಬುದನ್ನು ಬಿಟ್ಟರೆ ಲಕ್ಷಾಂತರ ಕೋಟಿ ರು. ಅಂತರಿಕ್ಷ್ ಹಗರಣದಲ್ಲಿ ಸಿಲುಕಿ ಜಿ. ಮಾಧವನ್ ನಾಯರ್ ಒದ್ದಾಡಿದ್ದರು. ಚಂದ್ರಯಾನ 2 ಕನಸು ನನಸಾಗುವ ಮುನ್ನವೇ ಅನಿವಾರ್ಯವಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.
ಯಾವುದೇ ಸರ್ಕಾರಿ ನೌಕರಿಗೆ ಮಾಧವನ್ ಅವರು ಅನರ್ಹ ಎಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪಟನಾ ಐಐಟಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಾಧವನ್ ಕಳೆದ ವರ್ಷ ಜನವರಿಯಲ್ಲಿ ರಾಜೀನಾಮೆ ನೀಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications