ಗುಜರಾತ್ ಸಿಎಂ ಕಣ್ಣೆದುರಲ್ಲೇ ಹುತಾತ್ಮ ಯೋಧನ ಪುತ್ರಿಗೆ ಅವಮಾನ
ಅಹಮದಾಬಾದ್, ಡಿಸೆಂಬರ್ 2: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮ್ಮುಖದಲ್ಲೇ ಹುತಾತ್ಮ ಯೋಧರ ಮಗಳನ್ನು ಪೊಲೀಸರು ಎಳೆದೊಯ್ದಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಸೇನೆಯಲ್ಲಿದ್ದಾಗ ಮರಣವನ್ನಪ್ಪಿದ ಸೈನಿಕರ 26 ವರ್ಷದ ಮಗಳು ರೂಪಲ್ ದೇವಿ ಗುಜರಾತ್ ಮುಖ್ಯಮಂತ್ರಿಯನ್ನು ಭೇಟಿಯಾಗಲು ಶುಕ್ರವಾರ ಆಗಮಿಸಿದ್ದರು. ನರ್ಮದಾ ಕೆವಾಡಿಯಾ ಕಾಲೊನಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ರೂಪಾಣಿಯನ್ನು ಭೇಟಿಯಾಗಲು ಯತ್ನಿಸಿದರು.
ಆದರೆ ಇದಕ್ಕೆ ಅವಕಾಶ ನೀಡದ ಮಹಿಳಾ ಪೊಲೀಸ್ ಅಧಿಕಾರಿಗಳು ಆಕೆಯನ್ನು ಅಲ್ಲಿಂದ ಎಳೆದೊಯ್ದರು. ಇದನ್ನೆಲ್ಲಾ ವೇದಿಕೆ ಮೇಲಿದ್ದ ಮುಖ್ಯಮಂತ್ರಿ ವಿಜಯ್ ರೂಪಾನಿ ನೋಡುತ್ತಾ ಹಾಗೇ ನಿಂತಿದ್ದರು. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆಕೆ ಉರುಳಾಡುತ್ತಿದ್ದರೂ ರೂಪಾನಿ ಏನೂ ಸೂಚನೆ ನೀಡಲೇ ಇಲ್ಲ.

ತನ್ನ ತಂದೆ ಅಶೋಕ್ ತದ್ವಿ ನಿಧನರಾದ ನಂತರ ಸರಕಾರ ಜಮೀನು ನೀಡುವುದಾಗಿ ಹೇಳಿತ್ತು. ಆದರೆ 7 ವರ್ಷವಾದರೂ ಜಮೀನು ನೀಡದ ಹಿನ್ನಲೆಯಲ್ಲಿ ಅಶೋಕ್ ತದ್ವಿ ಮಗಳು ರೂಪಲ್ ದೇವಿ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. ಹೀಗಿದ್ದೂ ಜಮೀನು ಇನ್ನೂ ಸಿಕ್ಕಿಲ್ಲ.
ದೂಪಲ್ ದೇವಿಯನ್ನು ಮಹಿಳಾ ಪೊಲೀಸರು ಎಳೆದೊಯ್ಯುತ್ತಿರುವುದನ್ನು ನೋಡಿದ ರೂಪಾನಿ ಕೊನೆಗೆ ತಾವು ಕಾರ್ಯಕ್ರಮದ ನಂತರ ಆಕೆಯನ್ನು ಭೇಟಿಯಾಗುವುದಾಗಿ ಘೋಷಿಸಿದರು.ಆದರೆ ಆಕೆಯನ್ನು ಭೇಟಿಯಾಗಿಲ್ಲ ಎಂದು ತಿಳಿದು ಬಂದಿದೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, "ಬಿಜೆಪಿ ಅಹಂಕಾರ ಪರಾಕಾಷ್ಠೆಯನ್ನು ಮುಟ್ಟಿದೆ," ಎಂದು ಝಾಡಿಸಿದ್ದಾರೆ.
भाजपा का घमंड अपने चरम पर है।
— Office of RG (@OfficeOfRG) December 1, 2017
‘परम देशभक्त’ रुपाणीजी ने शहीद की बेटी को सभा से बाहर फिंकवा कर मानवता को शर्मसार किया।
15 साल से परिवार को मदद नहीं मिली, खोखले वादे और दुत्कार मिली। इंसाफ़ माँग रही इस बेटी को आज अपमान भी मिला।
शर्म कीजिए,न्याय दीजिए। pic.twitter.com/w8k7TYQrDt
"ಪರಮ ದೇಶಭಕ್ತ ಎಂದು ಬಿಂಬಿಸಿಕೊಳ್ಳುತ್ತಿರುವ ವಿಜಯ್ ರೂಪಾಣಿ ಹುತಾತ್ಮ ಯೋಧರ ಮಗಳನ್ನು ದೂರ ತಳ್ಳಿ ಮಾನವೀಯತೆಯನ್ನೇ ಅವಮಾನಿಸಿದ್ದಾರೆ," ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications