Tirupati: ತಿರುಪತಿ ಭಕ್ತರಿಗೆ ಗುಡ್ ನ್ಯೂಸ್: ಲಡ್ಡು ಜೊತೆಗೆ ಮಸಾಲೆ ವಡೆ ಘಮ
ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವಸ್ಥಾನ ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. ನಿತ್ಯ ಸಾವಿರಾರು ಭಕ್ತರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ತಿರುಪತಿಗೆ ಭೇಟಿ ನೀಡುವ ಭಕ್ತರು ಅನ್ನ ಪ್ರಸಾದವನ್ನು ಸೇವಿಸಿ ನಂತರ ಲಡ್ಡು ಪ್ರಸಾದವನ್ನು ಖರೀದಿ ಮಾಡುತ್ತಾರೆ. ಇದೀಗ ತಿರುಪತಿ ದೇವಸ್ಥಾನದಲ್ಲಿ ಅನ್ನ ಪ್ರಸಾದದ ಜೊತೆಗೆ ಮಸಾಲಾ ವಡೆ ಘಮ ಇರಲಿದೆ.
ಹೌದು... ನಿತ್ಯ ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಮಸಾಲೆ ವಡೆ ನೀಡಲು ಟಿಟಿಡಿ ನಿರ್ಧರಿಸಿದೆ. ಇದೀಗ ಭಕ್ತರಿಗೆ ಅನ್ನ ಪ್ರಸಾದದ ಜೊತೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತನ್ನ ಅನ್ನಪ್ರಸಾದ ಮೆನುವಿನಲ್ಲಿ ದಕ್ಷಿಣ ಭಾರತದ ಜನಪ್ರಿಯ ತಿಂಡಿಯಾದ ಮಸಾಲೆ ವಡೆಯನ್ನು ಸೇರಿಸಿದೆ. ಜನವರಿ 20ರಿಂದ ಟಿಟಿಡಿ ಸಿಬ್ಬಂದಿ ಪ್ರಾಯೋಗಿಕ ಭಾಗವಾಗಿ ಭಕ್ತರಿಗೆ ಸುಮಾರು 5,000 ಮಸಾಲೆ ವಡೆಗಳನ್ನು ಬಡಿಸಿದ್ದಾರೆ. ಬಳಿಕ ಮಸಾಲೆ ವಡೆಯ ರುಚಿಯ ಬಗ್ಗೆ ಭಕ್ತರಿಂದ ಅಭಿಪ್ರಾಯವನ್ನು ಕೇಳಲಾಗಿದೆ.

ಸಾಂಪ್ರದಾಯಿಕ ಪದ್ಧತಿಗಳಿಗೆ ಬದ್ಧವಾಗಿ ಈ ವಡೆಗಳನ್ನು ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ತಯಾರಿಸಲಾಗಿತ್ತು. ಅನ್ನಪ್ರಸಾದ ಮೆನುವಿನಲ್ಲಿ ಹೊಸ ಐಟಂ ಮಸಾಲೆ ವಡೆಯನ್ನು ಸೇರಿಸಲಾಗಿದ್ದು ಇದರ ರುಚಿ ಮತ್ತು ಭಕ್ತರಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಯಿತು. ಮಸಾಲೆ ವಡೆಗಳು ರುಚಿಕರವಾಗಿದ್ದವು ಎಂದು ಭಕ್ತರು ಹೇಳಿದ್ದಾರೆ. ಜೊತೆಗೆ ಇದನ್ನು ನೈವೇದ್ಯಗಳಿಗೆ ಸೇರ್ಪಡೆ ಮಾಡುವುದು ಸ್ವಾಗತಾರ್ಹ ಎಂದು ಅನೇಕ ಭಕ್ತರು ಹೇಳಿದ್ದಾರೆ.
ಮಸಾಲ ವಡೆಯಂತಹ ಹೊಸ ತಿಂಡಿಯನ್ನು ಪರಿಚಯಿಸುವ ಮೂಲಕ ತಿರುಮಲಕ್ಕೆ ಭೇಟಿ ನೀಡುವ ಬಹುಸಂಖ್ಯೆಯ ಯಾತ್ರಿಕರಿಗೆ ಹೆಚ್ಚು ಪೌಷ್ಟಿಕ ಮತ್ತು ರುಚಿಕರವಾದ ಆಹಾರವನ್ನು ಒದಗಿಸುವ ಗುರಿಯನ್ನು ಟಿಟಿಡಿ ಹೊಂದಿದೆ.
ಪ್ರಾಯೋಗಿಕ ಪರೀಕ್ಷೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತ ನಂತರ, ಟಿಟಿಡಿ ಅಧಿಕೃತವಾಗಿ ಅನ್ನಪ್ರಸಾದ ಮೆನುವಿನಲ್ಲಿ ಮಸಾಲೆ ವಡೆಯನ್ನು ಸೇರಿಸಲು ಯೋಜಿಸಿದೆ. ಭಕ್ತರಿಗೆ ಅನ್ನಪ್ರಸಾದ ಸೇವೆಗಳನ್ನು ನಿರಂತರವಾಗಿ ಸುಧಾರಿಸುವ ಉದ್ದೇಶದಿಂದ ಈ ಹೊಸ ತಿಂಡಿಯನ್ನು ಸೇರಿಸಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications