Mass suicide in Gujarat: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯ ಶವ ಪತ್ತೆ- ಸಾಮೂಹಿಕ ಆತ್ಮಹತ್ಯೆ
ಸೂರತ್, ಅಕ್ಟೋಬರ್ 28: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಆರು ಮಂದಿ ವಿಷಕಾರಿ ಪದಾರ್ಥಗಳನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಏಳನೇ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದಾರುಣ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ.
ಮೃತರನ್ನು ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಅವರ ಮೂವರು ಚಿಕ್ಕ ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾ ಎಂದು ಗುರುತಿಸಲಾಗಿದೆ.
ಮನೀಶ್ ಸೋಲಂಕಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಸಾವನ್ನಪ್ಪಿದ್ದಾರೆ. ಇದಲ್ಲದೆ, ಸೋಲಂಕಿ ಅವರೇ ಬರೆದಿರುವ ಆತ್ಮಹತ್ಯೆ ಪತ್ರವು ಮನೆಯಲ್ಲಿ ಕಂಡುಬಂದಿದೆ. ಈ ಪತ್ರದಲ್ಲಿ ಅವರು ಹಣಕಾಸಿನ ತೊಂದರೆಗಳ ಬಗ್ಗೆ ಬರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಪೊಲೀಸರು ತಮ್ಮ ತನಿಖೆಯನ್ನು ಮುಂದುವರೆಸಿರುವುದರಿಂದ ಈ ಹಣಕಾಸಿನ ಸಮಸ್ಯೆಗಳ ನಿಖರವಾದ ಸ್ವರೂಪವನ್ನು ಬಹಿರಂಗಪಡಿಸಲಾಗಿಲ್ಲ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಡಿಸಿಪಿ ರಾಕೇಶ್ ಬರೋಟ್, ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಸ್ಥಳದಲ್ಲಿ ಪತ್ರವೊಂದು ದೊರೆತಿದೆ. ಇದರ ಕಾರಣವನ್ನು ಪರಿಶೀಲಿಸುತ್ತಿದ್ದೇವೆ. ಇದು ಮೇಲ್ನೋಟಕ್ಕೆ ಆರ್ಥಿಕ ಸಮಸ್ಯೆಯಿಂದಾಗಿ ನಡೆದ ಘಟನೆ ಎಂದು ಕಾಣುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮನೀಷ್ ಸೋಲಂಕಿ ಅವರು ಪೀಠೋಪಕರಣ ವ್ಯಾಪಾರದಲ್ಲಿ ತೊಡಗಿದ್ದರು. ಸರಿಸುಮಾರು 35 ಬಡಗಿಗಳು ಮತ್ತು ಕಾರ್ಮಿಕರ ತಂಡವನ್ನು ನೋಡಿಕೊಳ್ಳುತ್ತಿದ್ದರು.
ಶನಿವಾರ ಬೆಳಿಗ್ಗೆ ಅವರ ಉದ್ಯೋಗಿಗಳು ಫೋನ್ ಕರೆಗಳ ಮೂಲಕ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಇದಕ್ಕೆ ಸೋಲಂಕಿ ಅವರಿಂದ ಯಾವುದೇ ಉತ್ತರ ಬಂದಿಲ್ಲ. ಅವರ ಮನೆಯ ಬಾಗಿಲು ತಟ್ಟಿದಾಗ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಸಹದ್ಯೋಗಿಗಳು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದರ ಪರಿಣಾಮವಾಗಿ ಸ್ಥಳೀಯರು ರಕ್ಷಣೆಗೆ ಬಂದರು. ಮನೆಯ ಒಳಗೆ ಪ್ರವೇಶಿಸಲು ಮನೆಯ ಹಿಂಭಾಗದ ಕಿಟಕಿಯನ್ನು ಒಡೆದರು ಎಂದು ತಿಳಿದುಬಂದಿದೆ.
ಇದೇ ರೀತಿಯ ಮತ್ತೊಂದು ಘಟನೆ ಸೂರತ್ನಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಬಲಿಯಾದವರಲ್ಲಿ 50 ವರ್ಷದ ವ್ಯಕ್ತಿ, ಅವರ 45 ವರ್ಷದ ಪತ್ನಿ, 20 ವರ್ಷದ ಮಗ ಮತ್ತು 17 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದಿಂದ ಉಂಟಾದ ವಜ್ರ ಉದ್ಯಮದ ಆರ್ಥಿಕ ಹಿಂಜರಿತಕ್ಕೆ ಸಂಬಂಧಿಸಿರುವ ಆರ್ಥಿಕ ತೊಂದರೆಗಳಿಂದಾಗಿ ಅವರು ಈ ನಿರ್ಣಯವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಜ್ರ ಪಾಲಿಶ್ ಮಾಡುವ ವ್ಯಕ್ತಿಯ ಆದಾಯವು ಕಳೆದ 8-9 ತಿಂಗಳುಗಳಲ್ಲಿ ತಿಂಗಳಿಗೆ ₹25,000-30,000ದಿಂದ ₹15,000ಕ್ಕೆ ಕುಸಿದಿತ್ತು ಎಂದು ಹೇಳಲಾಗುತ್ತಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications