ಏರ್ ಇಂಡಿಯಾ ಮೇಲೆ ಬೃಹತ್ ಸೈಬರ್ ದಾಳಿ; 45 ಲಕ್ಷ ಪ್ರಯಾಣಿಕರ ಮಾಹಿತಿ ಸೋರಿಕೆ
ನವದೆಹಲಿ, ಮೇ 22: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮೇಲೆ ಬೃಹತ್ ಮಟ್ಟದಲ್ಲಿ ಸೈಬರ್ ದಾಳಿ ನಡೆದಿದ್ದು, ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳನ್ನು ಕಳವು ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಫೆಬ್ರವರಿಯಲ್ಲಿ ತನ್ನ ಡೇಟಾ ಪ್ರಾಸೆಸರ್ ಮೇಲೆ ಭಾರೀ ಸೈಬರ್ ದಾಳಿ ನಡೆದಿದ್ದು, ಸುಮಾರು ಹತ್ತು ವರ್ಷಗಳ ಅವಧಿಯ ಏರ್ ಇಂಡಿಯಾ ಗ್ರಾಹಕರ ಕ್ರೆಡಿಟ್ ಕಾರ್ಡ್, ಪಾಸ್ಪೋರ್ಟ್, ಫೋನ್ ನಂಬರ್ ಸೇರಿದಂತೆ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಿಸಿದೆ.

ಈ ಸಂಗತಿ ವಿಶ್ವಾದ್ಯಂತ 4,500,000 ದತ್ತಾಂಶದ ಮೇಲೆ ಪರಿಣಾಮ ಬೀರಿದೆ ಮತ್ತು ಆಗಸ್ಟ್ 26, 2011 ಹಾಗೂ ಫೆಬ್ರವರಿ 3, 2021ರ ನಡುವೆ ನೋಂದಣಿಯಾದವರ ವೈಯಕ್ತಿಕ ಮಾಹಿತಿಗಳನ್ನು ಒಳಗೊಂಡಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಪ್ರಯಾಣಿಕರ ಸೇವಾ ವ್ಯವಸ್ಥೆ ಡೇಟಾ ಪ್ರಾಸೆಸರ್ ಮೇಲೆ ಸಿಟಾ ಪಿಎಸ್ಎಸ್ ಮೇಲೆ ಸೈಬರ್ ಕಳ್ಳರು ದಾಳಿ ಮಾಡಿದ್ದಾರೆ. ಇದು ಕೆಲವು ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆಗೆ ಕಾರಣವಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸರು, ಹುಟ್ಟಿದ ದಿನಾಂಕ, ಸಂಪರ್ಕ ಮಾಹಿತಿ, ಪಾಸ್ಪೋರ್ಟ್, ಟಿಕೆಟ್, ಕ್ರೆಡಿಟ್ ಕಾರ್ಡ್, ಸ್ಟಾರ್ ಅಲಯನ್ಸ್ ಹಾಗೂ ಏರ್ ಇಂಡಿಯಾ ಪ್ರಯಾಣಿಕರ ಮಾಹಿತಿ (ಪಾಸ್ವರ್ಡ್ ಹೊರತುಪಡಿಸಿ) ಮಾಹಿತಿಗಳನ್ನು ಇದು ಒಳಗೊಂಡಿರುತ್ತದೆ.
ನಮ್ಮ ಡೇಟಾ ಪ್ರಾಸೆಸರ್ ಪರಿಹಾರ ಕ್ರಮಗಳನ್ನು ಮುಂದುವರೆಸುತ್ತೇವೆ. ಪ್ರಯಾಣಿಕರು ತಮ್ಮ ವೈಯಕ್ತಿಕ ಮಾಹಿತಿ ಸುರಕ್ಷತೆಗಾಗಿ ಸಾಧ್ಯವಾದಾಗಲೆಲ್ಲಾ ಪಾಸ್ವರ್ಡ್ ಬದಲಾಯಿಸುವಂತೆ ತಿಳಿಸುತ್ತಿರುತ್ತೇವೆ ಎಂದು ಸಂಸ್ಥೆ ಹೇಳಿದೆ.
ಕ್ರೆಡಿಟ್ ಕಾರ್ಡ್ ಹೊಂದಿರುವ ಸಿವಿವಿ/ಸಿವಿಸಿ ಡೇಟಾ ಸಂಗ್ರಹಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ದಾಳಿಗೆ ಒಳಗಾದ ಪ್ರಯಾಣಿಕರಿಗೆ ಸಹಾಯ ಮಾಡಲು ಸಂಸ್ಥೆ ಕಾಲ್ ಸೆಂಟರ್ ಸ್ಥಾಪಿಸಿದೆ. ಈ ಕುರಿತು ತನಿಖೆಗೆ ಮುಂದಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications