ಉತ್ತರಾಖಂಡ: ಬೃಹತ್ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭ
ಡೆಹರಾಡೂನ್, ಫೆಬ್ರವರಿ 8: ಉತ್ತರಾಖಂಡದಲ್ಲಿ ಹಿಮನದಿ ಸ್ಫೋಟ ದುರ್ಘಟನೆ ಬಳಿಕ ಸುರಂಗ ಒಂದರ ಒಳಗೆ ಸಿಲುಕಿಕೊಂಡಿರುವ 30ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲು ಬೃಹತ್ ಕಾರ್ಯಾಚರಣೆ ಆರಂಭವಾಗಿದೆ. ಹಿಮಪಾತದಿಂದ ಇದುವರೆಗೂ 18 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಚಮೋಲಿಯ ತಪೋವನದಲ್ಲಿರುವ 12 ಅಡಿ ಎತ್ತರ ಮತ್ತು 15 ಅಡಿ ಅಗಲದ ಸುರಂಗದಲ್ಲಿ ಕೆಸರು ಹಾಗೂ ಅವಶೇಷಗಳು ತುಂಬಿಕೊಂಡಿದ್ದು, ಕಾರ್ಮಿಕರು ಒಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಈ ಸುರಂಗಕ್ಕೆ ಒಂದೇ ಒಂದು ಪ್ರವೇಶ ದ್ವಾರವಿದ್ದು, 1.6 ಕಿಮೀ ಉದ್ದವಿದೆ. ಹೀಗಾಗಿ ಸುರಂಗದ ಒಳಗೆ ಪ್ರವೇಶಿಸಿ ಕಾರ್ಯಾಚರಣೆ ನಡೆಸುವುದು ಸವಾಲಾಗಿದೆ. ಸುರಂಗದ ಯಾವ ಭಾಗದಲ್ಲಿ ಕಾರ್ಮಿಕರು ಸಿಲುಕಿಕೊಂಡಿದ್ದಾರೆ, ಅವರೆಲ್ಲರೂ ಜತೆಯಾಗಿದೆಯೇ ಇದ್ದಾರೆಯೇ ಎನ್ನುವುದನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ.
ಅರ್ಥ್ ಮೂವರ್ಗಳು, ಸಲಿಕೆಗಳನ್ನು ಬಳಸಿ ನೂರಾರು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸುರಂಗವನ್ನು ತೆರವುಗೊಳಿಸಲು ಇಂಡೋ-ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ಡಿಎಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಹಗಲು ರಾತ್ರಿ ಕೆಲಸ ನಿರ್ವಹಿಸಿವೆ.

ಸುರಂಗದ ನೂರು ಮೀಟರ್ನಷ್ಟು ಮಾರ್ಗವನ್ನು ತೆರವುಗೊಳಿಸಿದ್ದು, ಒಳಗೆ ಪ್ರವೇಶಿಸಬಹುದಾಗಿದೆ. ಇನ್ನೂ ನೂರು ಮೀಟರ್ನಷ್ಟು ಅವಶೇಷಗಳನ್ನು ತೆರವುಗೊಳಿಸಬೇಕು ಎನಿಸುತ್ತದೆ. ಇದಕ್ಕೆ ಮತ್ತಷ್ಟು ಗಂಟೆಗಳು ಬೇಕಾಗಲಿದೆ ಎಂದು ಐಟಿಬಿಪಿ ವಕ್ತಾರ ವಿವೇಕ್ ಕುಮಾರ್ ಪಾಂಡೆ ಹೇಳಿದ್ದಾರೆ.
#Uttarakhand#Update: #UttarakhandGlacialBurst
— ADG PI - INDIAN ARMY (@adgpi) February 8, 2021
टनल में फंसे लोगों के लिए बचाव कार्य जारी। टनल के अंदर पहुंच कर रास्ता खोलने का प्रयास किया जा रहा है। pic.twitter.com/coCBZGsjUS
ಇದೇ ಪ್ರದೇಶದಲ್ಲಿ ಕಿರಿದಾದ ಸುರಂಗವೊಂದರಿಂದ ಕನಿಷ್ಠ 12 ಕೆಲಸಗಾರರನ್ನು ಭಾನುವಾರ ಸಂಜೆ ರಕ್ಷಿಸಲಾಗಿತ್ತು. 300ಕ್ಕೂ ಅಧಿಕ ಐಟಿಬಿಪಿ ಸಿಬ್ಬಂದಿ ಮತ್ತು ಸೇನೆ, ವಿಪತ್ತು ನಿರ್ವಹಣಾ ತಂಡಗಳ 200 ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications