ಧಾರ್ಮಿಕ ಮತಾಂತರ, ಲವ್ ಜಿಹಾದ್ ಖಂಡಿಸಿ ಬೃಹತ್ ಪ್ರತಿಭಟನೆ
ಮುಂಬೈನ ಸಕಲ್ ಹಿಂದೂ ಸಮಾಜ ಆಯೋಜಿಸಿದ್ದ 'ಹಿಂದೂ ಜನ ಆಕ್ರೋಶ ಮೋರ್ಚಾ' ಬ್ಯಾನರ್ನಡಿಯಲ್ಲಿ ಪ್ರತಿಭಟನಾಕಾರರು ಸೆಂಟ್ರಲ್ ಮುಂಬೈನ ದಾದರ್ನ ಶಿವಾಜಿ ಪಾರ್ಕ್ನಿಂದ ತಮ್ಮ ಮೆರವಣಿಗೆ ನಡೆಸಿದರು.
ಮುಂಬೈ, ಜನವರಿ 30: ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಲವ್ ಜಿಹಾದ್ ವಿರುದ್ಧ ಬಲಪಂಥೀಯ ಗುಂಪುಗಳು ಭಾನುವಾರ ಮಧ್ಯ ಮುಂಬೈನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಮುಂಬೈನ ಸಕಲ್ ಹಿಂದೂ ಸಮಾಜ ಆಯೋಜಿಸಿದ್ದ 'ಹಿಂದೂ ಜನ ಆಕ್ರೋಶ ಮೋರ್ಚಾ' ಬ್ಯಾನರ್ನಡಿಯಲ್ಲಿ ಪ್ರತಿಭಟನಾಕಾರರು ಸೆಂಟ್ರಲ್ ಮುಂಬೈನ ದಾದರ್ನ ಶಿವಾಜಿ ಪಾರ್ಕ್ನಿಂದ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿ, ಪರೇಲ್ನ ಕಾಮ್ಗರ್ ಮೈದಾನದಲ್ಲಿ 4 ಕಿ.ಮೀ.ಗೂ ಹೆಚ್ಚು ದೂರವನ್ನು ಕ್ರಮಿಸಿದರು.
ಪ್ರತಿಭಟನೆಯಲ್ಲಿ ಜನರು ಕೇಸರಿ ಧ್ವಜಗಳು ಮತ್ತು ಬ್ಯಾನರ್ಗಳನ್ನು ಹಿಡಿದುಕೊಂಡು "ಲವ್ ಜಿಹಾದ್" ವಿರುದ್ಧ ಕಾನೂನು ತರಬೇಕು ಮತ್ತು ರಾಜ್ಯದಲ್ಲಿ ಧಾರ್ಮಿಕ ಮತಾಂತರಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮೊದಲು, ಜನವರಿ 22ರಂದು ಸಕಲ್ ಹಿಂದೂ ಸಮಾಜದ ಸದಸ್ಯರು ಮಹಾರಾಷ್ಟ್ರದ ಪುಣೆಯಲ್ಲಿ "ಲವ್ ಜಿಹಾದ್", ಅಕ್ರಮ ಮತಾಂತರ ಮತ್ತು ಗೋಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. 'ಹಿಂದೂ ಜನ ಆಕ್ರೋಶ್ ಮೋರ್ಚಾ' ಶೀರ್ಷಿಕೆಯ ಮೆರವಣಿಗೆಯು ಲಾಲ್ ಮಹಲ್ನಲ್ಲಿ ಪ್ರಾರಂಭವಾಯಿತು ಮತ್ತು ಪುಣೆಯ ಡೆಕ್ಕನ್ ಪ್ರದೇಶದಲ್ಲಿ ಮುಕ್ತಾಯಗೊಂಡಿತ್ತು.
ಶಿವಾಜಿ ಪಾರ್ಕ್ನಿಂದ ಹೊರಟ ಮೆರವಣಿಗೆಯಲ್ಲಿ ಬಲಪಂಥೀಯ ಸಂಘಟನೆಗಳಾದ ಆರ್ಎಸ್ಎಸ್, ಬಜರಂಗದಳ ಮತ್ತು ವಿಎಚ್ಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಸಾಗಿದರು. ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಬಣದ ಹಲವು ಮುಖಂಡರು ಮತ್ತು ಶಾಸಕರು ಭಾಗವಹಿಸಿದ್ದರು.
ಮಹಾರಾಷ್ಟ್ರದಾದ್ಯಂತ ಈಗಾಗಲೇ ಸುಮಾರು 30 ರ್ಯಾಲಿಗಳನ್ನು ಆಯೋಜಿಸಲಾಗಿದೆ. ಈ ಹಿಂದೆ, ಪರ್ಭಾನಿ, ನಾಂದೇಡ್, ಅಹ್ಮದ್ನಗರ, ಕೊಲ್ಲಾಪುರ, ಗಡ್ಚಿರೋಲಿ, ಸತಾರಾ, ಕರಡ್, ಸಾಂಗ್ಲಿ, ಸೋಲಾಪುರ, ಪುಣೆ, ಧುಲೆ, ಜಲಗಾಂವ್, ನಾಗ್ಪುರ, ಅಮರಾವತಿ, ಹಿಂಗೋಲಿ, ಬುಲ್ಧಾನ ಮತ್ತು ಜಲ್ನಾ ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂತಹ ರ್ಯಾಲಿಗಳನ್ನು ಆಯೋಜಿಸಲಾಗಿತ್ತು.
ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಸುನೀಲ್ ಘನ್ವತ್ ಮಾತನಾಡಿ, 'ಸಕಲ್ ಹಿಂದೂ ಸಮಾಜದಿಂದ ಮುಂಬೈನಲ್ಲಿ ಭಾನುವಾರದ ರ್ಯಾಲಿಯನ್ನು ಆಯೋಜಿಸಲಾಗಿದ್ದು, ಇದರ ಅಡಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ, ಶಿವ ಪ್ರತಿಷ್ಠಾನ ಮತ್ತು ಸನಾತನ ಸಂಸ್ಥೆಗಳಂತಹ ವಿವಿಧ ಸಂಘಟನೆಗಳು ಒಗ್ಗೂಡಿವೆ. ರ್ಯಾಲಿಯಲ್ಲಿ ಕನಿಷ್ಠ 15,000 ಜನರು ಭಾಗವಹಿಸುವ ನಿರೀಕ್ಷೆಯಿದೆ, ಆದರೂ ನಾವು ಹೆಚ್ಚಿನ ಸ್ಥಳಾವಕಾಶಕ್ಕಾಗಿ ಸಿದ್ಧತೆಗಳನ್ನು ನಡೆಸುತ್ತಿದ್ದೇವೆ ಎಂದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications