ರಾಮ್ ರಹೀಮ್ ಸಿಂಗ್ ದತ್ತುಪುತ್ರಿಗಾಗಿ ಹುಡುಕಾಟ ತೀವ್ರ
ನವದೆಹಲಿ, ಸೆಪ್ಟೆಂಬರ್ 20 : ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಾಬಾ ರಾಮ್ ರಹೀಮ್ ಸಿಂಗ್ ದತ್ತು ಪುತ್ರಿ ಹನಿ ಪ್ರೀತ್ ಗಾಗಿ ಹುಡುಕಾಟ ತೀವ್ರಗೊಳಿಸಲಾಗಿದೆ. ಭಾರತ-ನೇಪಾಳ ಗಡಿಯಲ್ಲಿ ಆಕೆ ಇರುವ ಸಾಧ್ಯತೆ ಇದ್ದು, ನೇಪಾಳ ಬಿಟ್ಟು ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಉತ್ತರ ಪ್ರದೇಶ ಮತ್ತು ನೇಪಾಳದಲ್ಲಿರುವ ಡೇರಾ ಸಚ್ಚಾ ಸೌಧಕ್ಕೆ ಸಂಬಂಧಿಸಿದ ವ್ಯಕ್ತಿಗಳು, ರಾಮ್ ರಹೀಮ್ ಸಿಂಗ್ ಬೆಂಬಲಿಗರ ಮನೆಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹರ್ಯಾಣ ಪೊಲೀಸರು ಭಾರತ-ನೇಪಾಳ ಗಡಿ, ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಹನಿಪ್ರೀತ್ಗಾಗಿ ಶೋಧ ನಡೆಸುತ್ತಿದ್ದಾರೆ.

ನೇಪಾಳ ಗಡಿ ಪ್ರದೇಶದ ಪೊಲೀಸ್ ಠಾಣೆಗಳಲ್ಲಿ ಹನಿಪ್ರೀತ್ ಭಾವಚಿತ್ರಗಳನ್ನು ಅಂಟಿಸಲಾಗಿದೆ. ನೇಪಾಳದಿಂದ ಬೇರೆ ಕಡೆ ಪರಾರಿಯಾಗದಂತೆ ಎಚ್ಚರ ವಹಿಸಲು ಗುಪ್ತಚರ ಇಲಾಖೆಯ ಸಹಕಾರವನ್ನು ಪಡೆಯಲಾಗಿದೆ. ಸೆ.1ರಂದು ಹರ್ಯಾಣ ಪೊಲೀಸರು ಹನಿಪ್ರೀತ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಂದಿನಿಂದಲೂ ಆಕೆಗಾಗಿ ಹುಡುಕಾಟ ನಡೆಸಲಾಗುತ್ತದೆ.
ಉತ್ತರ ಪ್ರದೇಶ ರಾಜ್ಯ 599.3 ಕಿ.ಮೀ.ಗಡಿಯನ್ನು ನೇಪಾಳದೊಂದಿಗೆ ಹಂಚಿಕೊಂಡಿದೆ. ರಾಜ್ಯದ ಏಳು ಜಿಲ್ಲೆಗಳು ಭಾರತ-ನೇಪಾಳ ಗಡಿಯಲ್ಲಿವೆ. ಈ ಗಡಿಯ ಮೂಲಕವೇ ಹನಿಪ್ರೀತ್ ನೇಪಾಳಕ್ಕೆ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಗಡಿಯಲ್ಲಿರುವ ನೇಪಾಳ ಪೊಲೀಸ್ ಠಾಣೆಗಳ ಜೊತೆಗೂ ಹರ್ಯಾಣ ಪೊಲೀಸರು ಸಂಪರ್ಕದಲ್ಲಿದ್ದಾರೆ.
2002ರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಮ್ ಸಿಂಗ್ ಜೈಲು ಸೇರಿದ್ದಾನೆ. ಎರಡು ಪ್ರಕರಣಗಳಲ್ಲಿ ಅವರಿಗೆ ತಲಾ 10 ವರ್ಷದ ಜೈಲು ಶಿಕ್ಷೆ ಮತ್ತು 15 ಲಕ್ಷ ರೂ. ದಂಡವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಹನಿಪ್ರೀತ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿದೆ. ಆದರೆ, ಬಂಧನದಿಂದ ತಪ್ಪಿಸಿಕೊಳ್ಳಲು ಹನಿಪ್ರೀತ್ ಪರಾರಿಯಾಗಿದ್ದಾರೆ. ಆದ್ದರಿಂದ, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿ ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications