ಖಾಸಗಿ ಸಂಸ್ಥೆಗಳಲ್ಲಿ ಹೆರಿಗೆ ರಜೆ ವಿಸ್ತರಣೆ : ಮೇನಕಾ ಗಾಂಧಿ
ನವದೆಹಲಿ, ಡಿ. 30: ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ಹೆರಿಗೆ ರಜೆಯನ್ನು ವಿಸ್ತರಿಸಲು ಸರ್ಕಾರ ಮುಂದಾಗಿದೆ. 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಾರ್ವಿುಕ ಸಚಿವಾಲಯ ಕೂಡಾ ಒಪ್ಪಿಗೆ ನೀಡಿದೆ.
ಹೆರಿಗೆ ರಜೆ ವಿಸ್ತರಣೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಕಾರ್ವಿುಕ ಸಚಿವಾಲಯಕ್ಕೆ ಮನವಿ ಮಾಡಿತ್ತು. ಅಪೌಷ್ಟಿಕತೆ, ಅತಿಸಾರ ಮತ್ತಿತರ ಆರೋಗ್ಯ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸಲು ಕನಿಷ್ಠ 6 ತಿಂಗಳ ಕಾಲ ಹಾಲುಣಿಸುವುದು ಅನಿವಾರ್ಯವಾಗಿದೆ ಎಂದು ಸೂಚಿಸಲಾಗಿತ್ತು.

ಖಾಸಗಿ ಮತ್ತು ಸರ್ಕಾರಿ ನೌಕರಿಯಲ್ಲಿರುವವರಿಗೆ ಹೆರಿಗೆ ರಜೆ ಅವಧಿಯನ್ನು 32 ವಾರ(8 ತಿಂಗಳು)ಕ್ಕೆ ಹೆಚ್ಚಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರೆ, ಇದಕ್ಕೆ ಕಾರ್ಮಿಕ ಸಚಿವಾಲಯ ಇನ್ನೂ ಒಪ್ಪಿಗೆ ಮುದ್ರೆ ಒತ್ತಿಲ್ಲ.
1972ರ ಕೇಂದ್ರ ನಾಗರಿಕ ಸೇವಾ ನಿಯಮಗಳ ಪ್ರಕಾರ ಸರ್ಕಾರಿ ನೌಕರರಿಗೆ 6 ತಿಂಗಳ ಕಾಲ ಹೆರಿಗೆ ರಜೆ ತೆಗೆದುಕೊಳ್ಳಬಹುದಾಗಿದೆ. ಅದರ ಜತೆಗೆ ಮಗುವಿಗೆ 18 ವರ್ಷಗಳಾಗುವವರೆಗೆ ಯಾವುದೇ ಅವಧಿಯಲ್ಲಿ 2 ವರ್ಷಗಳ ಕಾಲ ಮಗುವಿನ ಪಾಲನೆ ರಜೆ ಹಾಕಬಹುದಾಗಿದೆ. ಇದರಲ್ಲಿ 365 ದಿನಗಳ ವೇತನವನ್ನು ಸಂಪೂರ್ಣವಾಗಿ ನೀಡಿದರೆ, ಉಳಿದ 365 ದಿನಗಳ ವೇತನದಲ್ಲಿ ಶೇ.80ರಷ್ಟನ್ನು ನೀಡಲಾಗುತ್ತದೆ.(ಒನ್ ಇಂಡಿಯಾ ಸುದ್ದಿ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications