ಮಾತೃಭೂಮಿ ಪತ್ರಿಕೆ ಸುದ್ದಿ ಸಂಪಾದಕರ ಮನೆ ದರೋಡೆ, ದಂಪತಿ ಮೇಲೆ ಹಲ್ಲೆ
ಕೇರಳದ ಕಣ್ಣೂರು ವಿಭಾಗದ ಮಾತೃಭೂಮಿ ಪತ್ರಿಕೆಯ ಸುದ್ದಿ ಸಂಪಾದಕ ವಿನೋದ್ ಚಂದ್ರನ್ ಹಾಗೂ ಅವರ ಪತ್ನಿ ಮೇಲೆ ಗುರುವಾರ ದಾಳಿ ನಡೆಸಿದ ನಾಲ್ವರ ಗುಂಪು, ಮನೆಯಲ್ಲಿ ದರೋಡೆ ಮಾಡಿದೆ. ವಿನೋದ್ ಹಾಗೂ ಅವರ ಪತ್ನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗುರುವಾರ ರಾತ್ರಿ 1.30ರಿಂದ 3.30ರ ಮಧ್ಯೆ ಈ ಘಟನೆ ನಡೆದಿದೆ.
ಮನೆಯ ಮುಂಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ. ಶಬ್ದ ಕೇಳಿದ ವಿನೋದ್ ಹಾಗೂ ಅವರ ಪತ್ನಿ ಸರಿತಾ ವಿಚಾರಿಸುವ ಸಲುವಾಗಿ ಕೋಣೆಯಿಂದ ಹೊರಬಂದಿದ್ದಾರೆ. ಆಗ ಅವರ ಕಣ್ಣಿಗೆ ಬಟ್ಟೆ ಕಟ್ಟಿ, ಹಗ್ಗದಿಂದ ಕಟ್ಟಿಹಾಕಿದ ದರೋಡೆಕೋರರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಮನೆಯಲ್ಲಿ ದರೋಡೆ ಮಾಡಿದ ನಾಲ್ವರು, ಅಲ್ಲಿಂದ ಹೊರಟ ನಂತರ ತಮಗೆ ಕಟ್ಟಿದ್ದ ಹಗ್ಗವನ್ನು ಬಿಡಿಸಿಕೊಳ್ಳಲು ವಿನೋದ್ ಯಶಸ್ವಿಯಾಗಿದ್ದಾರೆ. ಆ ತಕ್ಷಣವೇ ಸಹಾಯಕ್ಕಾಗಿ ಕರೆ ಮಾಡಿದ್ದಾರೆ. ಪೊಲೀಸರು ಆ ಕೂಡಲೇ ಮನೆಗೆ ಬಂದು, ದಂಪತಿಯನ್ನು ಕಣ್ಣೂರಿನ ಎಕೆಜಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿನೋದ್-ಸರಿತಾಗೆ ಕತ್ತು, ಮುಖದ ಮೇಲೆ ಗಂಭೀರವಾದ ಗಾಯಗಳಾಗಿವೆ. "ನನ್ನ ಕಣ್ಣು ಹಾಗೂ ಬಾಯಿಗೆ ಬಟ್ಟೆ ಕಟ್ಟಿದ ನಾಲ್ವರು ಹೊಡೆಯಲು ಆರಂಭಿಸಿದರು. ನನ್ನ ಹೆಂಡತಿಗೂ ಹಾಗೇ ಹೊಡೆದರು. ಅದೃಷ್ಟವಶಾತ್ ನನಗೆ ಕಟ್ಟಿದ್ದ ಹಗ್ಗವನ್ನು ಬಿಡಿಸಿಕೊಳ್ಳಲು ಸಾಧ್ಯವಾಯಿತು. ಇಲ್ಲದಿದ್ದರೆ ನಾವು ಅಲ್ಲೇ ಸತ್ತುಹೋಗ್ತಿದ್ದಿವಿ" ಎಂದು ವಿನೋದ್ ಹೇಳಿದ್ದಾರೆ.
ಇವರಿಬ್ಬರ ಮೇಲೂ ಹಲ್ಲೆ ನಡೆಸಿದ ನಾಲ್ವರ ತಂಡ ಒಂದು ಗಂಟೆ ಕಾಲ ಮನೆಯೊಳಗೇ ಕಾಲ ಕಳೆದಿದೆ. 35 ಸಾವಿರ ರುಪಾಯಿ ನಗದು, 25 ಸವರನ್ ಚಿನ್ನದ ಆಭರಣವನ್ನು ದೋಚಿದ್ದಾರೆ. ಇದರ ಜತೆ ಎಟಿಎಂ ಕಾರ್ಡ್ ಗಳು, ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಗಳನ್ನು ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದರೋಡೆ ಮಾಡಿದ ತಂಡವು ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಮಾತನಾಡುತ್ತಿತ್ತು. ಆದ್ದರಿಂದ ಈ ದರೋಡೆಕೋರರು ಕೇರಳ ರಾಜ್ಯದವರಲ್ಲ ಎನಿಸುತ್ತದೆ ಎಂದು ಪೊಲೀಸರು ತಿಳಿಸಿದ್ದು, ಕಣ್ಣೂರು ಡಿವೈಎಸ್ ಪಿ ಪಿ.ಪಿ.ಸದಾನಂದಮ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications