ಹೋಳಿ ಹಬ್ಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದು ಯಾಕೆ?
ಮಥುರಾ, ಫೆ. 26 : ರಸ್ತೆ ಮಾಡಿಕೊಟ್ಟಿಲ್ಲ, ಸೇತುವೆಯಿಲ್ಲ, ಕುಡಿವ ನೀರಿಲ್ಲ, ಮೂಲಸೌಕರ್ಯಗಳಿಲ್ಲ ಎಂದು ಜನರು ಪ್ರತಿಭಟನೆ ಮಾಡುವುದು, ಚುನಾವಣೆ ಬಹಿಷ್ಕಾರ ಮಾಡುವುದನ್ನು ನೋಡಿದ್ದೇವೆ. ಆದರೆ, ಇಲ್ಲಿ ಒಂದು ಗ್ರಾಮದ ಜನರು ತಾವಿರುವ ಪ್ರದೇಶವನ್ನು ಮದ್ಯ ಮುಕ್ತ ಎಂದು ಘೋಷಿಸದಿದ್ದರೆ ಹಬ್ಬ ಆಚರಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತುಕೊಂಡಿದ್ದಾರೆ.
ಮಥುರಾ ಸಮೀಪದ ಬರ್ಸಾನಾ ಸುತ್ತಮುತ್ತಲಿನ ಜನರೇ ಇಂಥ ಬೇಡಿಕೆ ಇಟ್ಟಿದ್ದು ಹೋಳಿ ಹಬ್ಬ ಆಚರಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಸ್ಥಳೀಯ ಪಂಚಾಯಿತಿಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.[ಹೋಳಿ ಹುಣ್ಣಿಮೆಯ ಪೌರಾಣಿಕ ಕಥೆ - ಭಾಗ1]

ಗ್ರಾಮದ ಸುತ್ತಮುತ್ತಲ ಮದ್ಯ ಮುಕ್ತ ಪ್ರದೇಶ ಎಂದು ಘೋಷಿಸಬೇಕು. ಇಲ್ಲವಾದರೆ ನಾವು 'ಲತ್ ಮಾರ್ ಹೋಳಿ' ಹಬ್ಬ ಆಚರಿಸುವುದಿಲ್ಲ ಎಂದು ಸಾಧುಗಳು, ಮಹಾಂತ್ ಗಳು, ವಕೀಲರು ಮತ್ತು ಪ್ರದೇಶದ ನಿವಾಸಿಗಳು ಒಕ್ಕೋರಲಿನಿಂದ ಹೇಳಿದ್ದಾರೆ.
ಫೆಬ್ರವರಿ 27 ರಂದು ಗ್ರಾಮಸ್ಥರು ವಾರ್ಷಿಕ ಲಥ್ ಮಾರ್ ಹೋಳಿ ಆಚರಿಸಬೇಕಿತ್ತು. ಆದರೆ ಈ ಬಾರಿ ಮದ್ಯ ನಿಷೇಧವಾದಂತೂ ಹಬ್ಬ ಆಚರಣೆ ಮಾಡಬಾರದು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪಂಚಾಯಿತಿ ಪ್ರಮುಖ ರಾಮ್ ರಾಜ್ ದಾಸ್ ಬಾಬಾ ಹೇಳಿದ್ದಾರೆ. ಹಬ್ಬ ಬಹಿಷ್ಕಾರ ನಿರ್ಧಾರಕ್ಕೆ ಮಹಿಳಾ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ.[ಹೋಳಿ ಹಬ್ಬದ ವಿಶೇಷತೆಯೇನು?]
ಗ್ರಾಮದ ಶಾಲೆ ಮತ್ತು ದೇವಾಲಯದ ಸಮೀಪ ಮದ್ಯದ ಅಂಗಡಿಗಳನ್ನು ತೆರೆಯಲಾಗಿದೆ. ಇದು ಕಾನೂನಿನ ಉಲ್ಲಂಘನೆಯಾಗಿದ್ದು ಸಂಬಂಧಿಸಿದವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮದ್ಯ ಮುಕ್ತ ಪ್ರದೇಶ ಎಂದು ಘೋಷಣೆ ಮಾಡುವ ಅಧಿಕಾರ ನನಗಿಲ್ಲ. ಆದರೆ ಮಾರ್ಚ್ 1 ರವರೆಗೆ ಮದ್ಯದಂಗಡಿಗಳಿಗೆ ಬಾಗಿಲು ಹಾಕುವಂತೆ ಸೂಚನೆ ನೀಡಲಾಗಿದೆ. ಜನರ ಬೇಡಿಕೆಗೆ ಸಂಬಂಧಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಜಿಲ್ಲಾ ಆಡಳಿತಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಆಡಳಿತಾಧಿಕಾರಿ ಹೇಳಿಕೆಗೆ ಗ್ರಾಮದಲ್ಲಿ ವಿಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನಮ್ಮ ವಾರ್ಷಿಕ ಹಬ್ಬದ ಸಂಭ್ರಮ ಹಾಳು ಮಾಡಿಕೊಳ್ಳಲು ಸಾಧ್ಯವಿಲ್ಲ. ಆಡಳಿತ ನೀಡಿದ ಭರವಸೆಗೆ ಬೆಲೆ ನೀಡಬೇಕಾಗುತ್ತದೆ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications