ಮಹಿಳಾ ಪೊಲೀಸ್ ಪೇದೆಯರ ಮೇಲೆ ಅತ್ಯಾಚಾರ
ಮಥುರಾ, ನವೆಂಬರ್, 9: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಯರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂದ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ.
ಮೊದಲನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಪೊಲೀಸ್ ಪೇದೆಯೊಬ್ಬರು "ನರೇಂದ್ರ ಮತ್ತು ಬಬ್ಬಲ್ ಎಂಬುವವರು ನನ್ನನ್ನು ಬಲವಂತವಾಗಿ ಇಲ್ಲಿಯ ಕೃಷ್ಣನಗರದಲ್ಲಿರುವ ಉಪಾಹಾರಗೃಹಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ". ಎಂದು ಆರೋಪಿಸಿದ್ದಾರೆ.
ಈ ಮಹಿಳೆಯನ್ನು ಗ್ವಾಲಿಯರ್ ಪ್ರದೇಶಕ್ಕೆ ಪೊಲೀಸ್ ಪೇದೆಯಾಗಿ ನಿಯುಕ್ತಿ ಮಾಡಲಾಗಿತ್ತು. ಮಂಗಳವಾರ (ನ.8) ಈ ಘಟನೆ ನಡೆದಿದೆ ಎಂದು ಸಂತ್ರಸ್ತ ಮಹಿಳೆ ತಿಳಿಸಿದ್ದಾರೆ.

ನರೇಂದ್ರ ಅವರನ್ನು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಈ ಸಂದರ್ಭದಲ್ಲಿ ಉಪಹಾರಾ ಗೃಹದ ಮಾಲಿಕ ಮತ್ತು ಬಬ್ಬಲ್ ಯಾರು ಓಳಗೆ ಬಾರದಂತೆ ಬಾಗಿಲ ಬಳಿ ನಿಂತಿದ್ದರು ಎಂದು ಮಹಿಳೆ ತಿಳಿಸಿರುವುದಾಗಿ ಮಥುರಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಎರಡನೇ ಪ್ರಕರಣದಲ್ಲಿ ಮತ್ತೊಬ್ಬ ಮಹಿಳಾ ಪೊಲೀಸ್ ಪೇದೆ ಪ್ರತಿಕ್ರಿಯೆ ನೀಡಿ ಸತ್ಯೇಂದ್ರ ಸಿಂಗ್ ಎಂಬ ಪೊಲೀಸ್ ಪೇದೆಯಿಂದ ಅತ್ಯಾಚಾರ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಸತ್ಯೇಂದ್ರ ಸಿಂಗ್ ಎಂಬ ಪೊಲೀಸ್ ಪೇದೆ ಮಹಿಳೆಯನ್ನು ಮಥುರಾ ಜಂಕ್ಷನ್ ಬಳಿ ಬರುವಂತೆ ಹೇಳಿದರು. ಹೋದ ಬಳಿಕ ತಂಪು ಪಾನೀಯದಲ್ಲಿ ಮತ್ತುಪದಾರ್ಥ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.
ಅಷ್ಟೇ ಅಲ್ಲದೆ ಸತ್ಯೇಂದ್ರ ಸಿಂಗ್ ನನ್ನನ್ನು ಮದುವೆಯಾಗುವುದಾಗಿ ಒಮ್ಮೆ ತಿಳಿಸಿದ್ದ ನಾನು ಅವನ ಮಾತನ್ನು ನಿರಾಕರಿಸಿದ್ದೆ ಆದ್ದರಿಂದಲೇ ಆತ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ.
ಸಂತ್ರಸ್ತ ಪೊಲೀಸ್ ಪೇದೆಗಳನ್ನು ಗ್ವಾಲಿಯರ್ ನಲ್ಲಿ ಕೆಲಸಕ್ಕೆ ನಿಯುಕ್ತಿ ಮಾಡಲಾಗಿತ್ತು. ಸತ್ಯೇಂದ್ರ ಸಿಂಗ್ ಸಹ ಗ್ವಾಲಿಯರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದ್ದು, ಸಂತ್ರಸ್ತ ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಎಸ್ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications