ಮಸೂದ್ ಬಂಧನ : ಪಾಕ್ ಕಣ್ಣಾಮುಚ್ಚಾಲೆ!
ಬೆಂಗಳೂರು, ಜನವರಿ 16 : ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನದ ವಿಚಾರದಲ್ಲಿ ಪಾಕಿಸ್ತಾನ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಅಜರ್ನನ್ನು ವಶಕ್ಕೆ ಪಡೆದಿರುವುದಾಗಿ ಪಾಕ್ ಹೇಳುತ್ತಿದೆ. ಆದರೆ, ಜೈಷ್-ಎ-ಮೊಹಮ್ಮದ್ ಸಂಘಟನೆ ಈ ಹೇಳಿಕೆಯನ್ನು ತಳ್ಳಿಹಾಕಿದೆ.
ಪಂಜಾಬಿನ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನನ್ನು ವಶಕ್ಕೆ ಪಡೆದಿರುವುದಾಗಿ ಹೇಳಿತ್ತು. ಆದರೆ, ಭಾರತ ಇದಕ್ಕೆ ಸಾಕ್ಷಿ ಕೇಳಿದೆ. [ನಿಜಕ್ಕೂ ಪಾಕ್ ಮಸೂದ್ ವಶಕ್ಕೆ ಪಡೆದಿದೆಯೇ?]

ಮಸೂದ್ ಅಜರ್ನನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಕ್ ಮಾಧ್ಯಮಗಳು ಬುಧವಾರ ಹೇಳಿದ್ದವು. ಪಾಕಿಸ್ತಾನದ ಸಚಿವ ರಾನಾ ಸನಾವುಲ್ಲಾ ಅವರು ಸಹ ಇದನ್ನು ಖಚಿತ ಪಡಿಸಿದ್ದಾರೆ. ಆದರೆ, ಉಗ್ರ ಸಂಘಟನೆ ಅಜರ್ನನ್ನು ವಶಕ್ಕೆ ಪಡೆದಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. [ಮಸೂದ್ ಯಾರು?]
ಉಗ್ರ ಮಸೂದ್ ವಶಕ್ಕೆ ಪಡೆದಿರುವ ವಿಚಾರದಲ್ಲಿ ಪಾಕ್ ಹಿಂದೆ ಮಾಡಿದಂತೆಯೇ ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದೆ. 26/11ರ ಮುಂಬೈ ದಾಳಿ ನಡೆದಾಗಲೂ ಉಗ್ರ ಹಫೀಜ್ನನ್ನು ವಶಕ್ಕೆ ಪಡೆದಿರುವುದಾಗಿ ಹೇಳಿ ಪಾಕ್ ದಾರಿ ತಪ್ಪಿಸಿತ್ತು. ಈಗಲೂ ಇಂತಹ ಹೇಳಕೆಗಳನ್ನೇ ನೀಡುತ್ತಿದೆ. ["ಭಾರತದ ಸೇನೆ ವೈರಿಗಳ ಸದೆ ಬಡಿಯಲು ಸಿದ್ಧ"]
ವಶಕ್ಕೆ ಪಡೆದಿಲ್ಲ : ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ತಮ್ಮ ನಾಯಕನನ್ನು ಬಂಧಿಸಿಲ್ಲ ಅಥವ ವಶಕ್ಕೆ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಒಂದು ವೇಳೆ ಪಾಕ್ ಮಸೂದ್ ವಶಕ್ಕೆ ಪಡೆದರೆ ಜಿಹಾದಿಗಳಿಗೆ ಹೋರಾಟ ಮಾಡಲು ಮತ್ತಷ್ಟು ಸ್ಫೂರ್ತಿ ಸಿಗಲಿದೆ ಎಂದು ಉರ್ದುವಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications