ಮೋದಿ ಆಪ್ತೆ ಮಾಯಾ ಕೊಡ್ನಾನಿ ಮತ್ತೆ ಬಚಾವ್!
ಅಹಮದಾಬಾದ್, ಜುಲೈ 25: 2002ರ ನರೋಡಾ ಪಾಟಿಯಾ ಕೋಮುಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಗುಜರಾತ್ನ ಮಾಜಿ ಸಚಿವೆ ಮಾಯಾ ಕೊಡ್ನಾನಿಗೆ ಮತ್ತೆ ರಿಲೀಫ್ ಸಿಕ್ಕಿದೆ.
ಒಂದು ಕಾಲದಲ್ಲಿ ಅಂದಿನ ಸಿಎಂ ಮೋದಿ ಅವರ ಆಪ್ತ ವರ್ಗದ ಸದಸ್ಯೆಯಾಗಿದ್ದ ಮಾಯಾ ಅವರಿಗೆ ನರೋಡಾ ಪಾಟಿಯಾ ಗಲಭೆ ಪ್ರಕರಣದಲ್ಲಿ ಜಾಮೀನು ಗಳಿಸಿದ್ದಾರೆ.

ಈಗ ಈ ಪ್ರಕರಣದ ಸಾಕ್ಷಿಯೊಬ್ಬರು ಹೇಳಿಕೆ ದಾಖಲಿಸಿದ್ದು, ಘಟನೆ ನಡೆದಾಗ ಮಾಯಾ ಅವರು ಆಸ್ಪತ್ರೆಯಲ್ಲಿದ್ದರು ಎಂದು ಹೇಳಿದ್ದಾರೆ. ರಾಯಿಬೆನ್ ಠಾಕೊರ್ ಅವರ ಹೇಳಿಕೆಯನ್ನು ಕೊಡ್ನಾನಿ ಅವರ ವಕೀಲರು, ವಿಶೇಷ ತನಿಖಾ ತಂಡ(ಎಸ್ ಐಟಿ)ಯ ಪರ ವಕೀಲ ಪಿಬಿ ದೇಸಾಯಿ ಅವರು ದಾಖಲಿಸಿಕೊಂಡಿದ್ದಾರೆ.
ಕೊಡ್ನಾನಿ ಅವರು ಘಟನೆ ನಡೆದ ದಿನ ಶಿವಮ್ ಮೆಟರ್ನಿಟಿ ಹಾಗೂ ಸರ್ಜನಿಕಲ್ ನರ್ಸಿಂಗ್ ಹೋಮ್ ನಲ್ಲಿದ್ದರು. ಕೊಡ್ನಾನಿ ಅವರ ಸೊಸೆ ಮಗುವಿಗೆ ಜನ್ಮ ನೀಡುತ್ತಿದ್ದರು. 2002ರ ಫೆಬ್ರವರಿ 28ರಂದು ಹಾಗೂ ಮರುದಿನ ಬೆಳಗ್ಗೆ ತನಕ ಆಸ್ಪತ್ರೆಯಲ್ಲಿದ್ದರು. 5.30ರ ವೇಳೆಗೆ ಮಗುವಿನ ಜನನವಾಯಿತು. ಡಾಕ್ಟರ್ ಧವಳ್ ಶಾ ಹಾಗೂ ಕೊಡ್ನಾನಿ ಅವರು ಆಪರೇಷನ್ ಥಿಯೇಟರ್ ನಲ್ಲಿದ್ದರು ಎಂದು ಕೊಡ್ನಾನಿ ಅವರ ಪತಿ ಸುರೇಂದ್ರ ಅವರು ಕೋರ್ಟಿಗೆ ತಿಳಿಸಿದ್ದಾರೆ.
ನರೇಂದ್ರ ಮೋದಿ ಗುಜರಾತ್ನ ಮುಖ್ಯಮಂತ್ರಿ ಯಾಗಿದ್ದಾಗ ಅವರ ಸಂಪುಟದಲ್ಲಿ ಮಾಯಾ ಕೊಡ್ನಾನಿ ಮಹಿಳಾ ಹಾಗೂ ಶಿಶು ಕಲ್ಯಾಣ ಸಚಿವೆಯಾಗಿದ್ದರು. 2002ರಲ್ಲಿ ನಡೆದ ಗುಜರಾತ್ ಹಿಂಸಾಚಾರದ ವೇಳೆ ನರೋಡಾದಲ್ಲಿ ನಡೆದ ಹತ್ಯಾಕಾಂಡದಲ್ಲಿ ಆಕೆ ಮುಖ್ಯ ಸೂತ್ರಧಾರಿಯೆಂದು ನ್ಯಾಯಾಲಯ ತೀರ್ಪು ನೀಡಿತ್ತು ಹಾಗೂ ಆಕೆಗೆ 28 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಿತ್ತು.
ನರೋಡಾ ಪಾಟಿಯಾ ಹತ್ಯಾಕಾಂಡ: ಈ ದುರ್ಘಟನೆಯಲ್ಲಿ 97 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು.ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications