ಮಾಯಾವತಿ ಪ್ರಧಾನಿಯಾಗಲು ಸೂಕ್ತರು, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅಜಿತ್ ಜೋಗಿ
ರಾಯ್ ಪುರ್, ನವೆಂಬರ್ 9: ಬಹುಜನ ಸಮಾಜ ಪಕ್ಷ ಹಾಗೂ ಎಡಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ತೀರ್ಮಾನಿಸಲಾಗಿದೆ ಎಂದು ಕಾಂಗ್ರೆಸ್ ನ ಭಿನ್ನಮತೀಯ ನಾಯಕ- ಛತ್ತೀಸ್ ಗಢದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಅಜಿತ್ ಜೋಗಿ ಹೇಳಿದ್ದಾರೆ.
ಪ್ರಧಾನಿ ಹುದ್ದೆಗೆ ಮಾಯಾವತಿಯೇ ಸೂಕ್ತರು ಎಂದಿರುವ ಅವರು, ಮುಂಬರು ಲೋಕಸಭೆ ಚುನಾವಣೆ ನಂತರ ಬಿಜೆಪಿಯೇತರ ಹಾಗೂ ಕಾಂಗ್ರೆಸ್ಸೇತರ ಮೈತ್ರಿ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ನಾನು ಯಾವಾಗಲೂ ನಂಬಿದ್ದೇನೆ. ಆಗ ಪ್ರಧಾನಿ ಯಾರು ಎಂಬುದನ್ನು ತೀರ್ಮಾನಿಸಲಾಗುತ್ತದೆ. ಆದರೆ ವೈಯಕ್ತಿಕವಾಗಿ ನಾನು ಅಂದುಕೊಳ್ಳುತ್ತೇನೆ, ಮಾಯಾವತಿ ಪಿಎಂ ಆಗಲು ಅರ್ಹರು. ಮೊದಲ ದಲಿತ ಮಹಿಳೆ ಪ್ರಧಾನಿ ಆಗಲಿ ಎಂದಿದ್ದಾರೆ ಅಜಿತ್ ಜೋಗಿ.
ಅಜಿತ್ ಜೋಗಿ ಅವರು ಐಪಿಎಸ್ ಹಾಗೂ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. 1986ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ಅಲ್ಲಿಂದ ಮೂವತ್ತು ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದರು. ಪಕ್ಷದಲ್ಲಿ ಊಲೆಗುಂಪು ಮಾಡುತ್ತಿದ್ದಾರೆ ಎಂದು ಆರೋಪಿಸಿ, 2016ರಲ್ಲಿ ಕಾಂಗ್ರೆಸ್ ತೊರೆದು, ಹೊಸ ಪಕ್ಷ ಸ್ಥಾಪನೆ ಮಾಡಿದರು.

ಛತ್ತೀಸ್ ಗಢ ಚುನಾವಣೆಯಲ್ಲಿ ಬಿಎಸ್ ಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ. ಎಲ್ಲಿ ಅಜಿತ್ ಜೋಗಿ ಹಾಗೂ ಅವರ ಮಗ ಕಾಂಗ್ರೆಸ್ ಗೆ ಹಾನಿ ಮಾಡುತ್ತಾರೋ ಎಂಬ ಆತಂಕದಲ್ಲಿ ಇಂಥ ನಿರ್ಧಾರ ಮಾಡಿದೆ. ಕಳೆದ ಮೂರು ಅವಧಿಯಿಂದ ಛತ್ತೀಸ್ ಗಢದಲ್ಲಿ ಅಧಿಕಾರಲ್ಲಿರುವ ಬಿಜೆಪಿ ವಿರುದ್ಧ ಆಡಳಿತವಿರೋಧಿ ಅಲೆ ಇದೆ. ಆದ್ದರಿಂದ ಈ ಬಾರಿ ಸುಲಭ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ನಲ್ಲಿದೆ.
90 ಸದಸ್ಯ ಬಲದ ಛತ್ತೀಸ್ ಗಢ ವಿಧಾನಸಭೆಗೆ ನವೆಂಬರ್ 12 ಹಾಗೂ 20ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications