ಮತ್ತೊಂದು ragging : ಬೆತ್ತಲು ಮಾಡಿ ಬಚ್ಚಲು ತೊಳಿಸಿದರು
ತಿರುವನಂತಪುರಂ, ಡಿಸೆಂಬರ್ 20 : ವಿದ್ಯಾರ್ಥಿಯೊಬ್ಬನಿಗೆ ಕೊಡಬಾರದ ಚಿತ್ರಹಿಂಸೆ ನೀಡಿ ಆತನ ಮೂತ್ರಕೋಶವೇ ಹಾಳಾಗುವ ಹಾಗೆ ಮಾಡಿದ ಕೆಲವೇ ದಿನಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೆತ್ತಲೆ ಮಾಡಿ ಬಚ್ಚಲು ತೊಳೆಸಿದ ಘಟನೆ ನಡೆದಿದೆ.
ಮಂಜೇರಿಯಲ್ಲಿರುವ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಹೊಸದಾಗಿ ಸೇರಿಕೊಂಡ 42 ವಿದ್ಯಾರ್ಥಿಗಳ ಬಟ್ಟೆಯನ್ನು ಸಂಪೂರ್ಣವಾಗಿ ಬಿಚ್ಚಿಸಿ ಅವರಿಂದ ಪುರುಷರ ಶೌಚಾಲಯವನ್ನು ತೊಳೆಸಿದ್ದಲ್ಲದೆ, ನಲ್ಲಿಯಲ್ಲಿ ಬರುವ ಹೊಲಸು ನೀರನ್ನು ಕುಡಿಯುವಂತೆ ಹಿರಿಯ ವಿದ್ಯಾರ್ಥಿಗಳು ಮಾಡಿದ್ದಾರೆ.
ಈ ಕಾರಣಕ್ಕಾಗಿ 21 ಹಿರಿಯ ವಿದ್ಯಾರ್ಥಿಗಳನ್ನು ವಿಚಾರಣೆ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ತಮ್ಮ ಬಟ್ಟೆ ಬಿಚ್ಚಿಸಿ ಅನುಚಿತವಾಗಿ ಹಿರಿಯ ವಿದ್ಯಾರ್ಥಿಗಳು ನಡೆದುಕೊಂಡಿದ್ದಾರೆ ಎಂದು ಮೊದಲನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಜಂಟಿ ದೂರು ನೀಡಿದ್ದರು.

ಕಿರಿಯ ವಿದ್ಯಾರ್ಥಿಗಳು ನೀಡಿರುವ ಆರೋಪ ಸಾಬೀತಾದರೆ ಚಿತ್ರಹಿಂಸೆ ನೀಡಿದ ಎಲ್ಲ ಹಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದಲೇ ತೆಗೆದುಹಾಕಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಾಲೇಜಿನ ಪ್ರಿನ್ಸಿಪಾಲ್ ಎಂ ಮೋಹನನ್ ಅವರು ಎಚ್ಚರಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ನಟ್ಟಕೋಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐವರು ಹಿರಿಯ ವಿದ್ಯಾರ್ಥಿಗಳು ನೀಡಿದ ಹಿಂಸೆಯಿಂದಾಗಿ ಓರ್ವನ ಮೂತ್ರಕೋಶಗಳೇ ಹಾಳಾಗಿವೆ. ಎಲ್ಲ ಐದು ಹಿರಿಯ ವಿದ್ಯಾರ್ಥಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಘಟನೆ ಕುರಿತಂತೆ ವಿಚಾರಣೆ ನಡೆಸಿ ವರದಿ ನೀಡಬೇಕೆಂದು ಶಿಕ್ಷಣ ಇಲಾಖೆಗೆ ಸರಕಾರ ಆದೇಶ ನೀಡಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications