ಮತ್ತೊಂದು ragging : ಬೆತ್ತಲು ಮಾಡಿ ಬಚ್ಚಲು ತೊಳಿಸಿದರು
ತಿರುವನಂತಪುರಂ, ಡಿಸೆಂಬರ್ 20 : ವಿದ್ಯಾರ್ಥಿಯೊಬ್ಬನಿಗೆ ಕೊಡಬಾರದ ಚಿತ್ರಹಿಂಸೆ ನೀಡಿ ಆತನ ಮೂತ್ರಕೋಶವೇ ಹಾಳಾಗುವ ಹಾಗೆ ಮಾಡಿದ ಕೆಲವೇ ದಿನಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೆತ್ತಲೆ ಮಾಡಿ ಬಚ್ಚಲು ತೊಳೆಸಿದ ಘಟನೆ ನಡೆದಿದೆ.
ಮಂಜೇರಿಯಲ್ಲಿರುವ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಹೊಸದಾಗಿ ಸೇರಿಕೊಂಡ 42 ವಿದ್ಯಾರ್ಥಿಗಳ ಬಟ್ಟೆಯನ್ನು ಸಂಪೂರ್ಣವಾಗಿ ಬಿಚ್ಚಿಸಿ ಅವರಿಂದ ಪುರುಷರ ಶೌಚಾಲಯವನ್ನು ತೊಳೆಸಿದ್ದಲ್ಲದೆ, ನಲ್ಲಿಯಲ್ಲಿ ಬರುವ ಹೊಲಸು ನೀರನ್ನು ಕುಡಿಯುವಂತೆ ಹಿರಿಯ ವಿದ್ಯಾರ್ಥಿಗಳು ಮಾಡಿದ್ದಾರೆ.
ಈ ಕಾರಣಕ್ಕಾಗಿ 21 ಹಿರಿಯ ವಿದ್ಯಾರ್ಥಿಗಳನ್ನು ವಿಚಾರಣೆ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ತಮ್ಮ ಬಟ್ಟೆ ಬಿಚ್ಚಿಸಿ ಅನುಚಿತವಾಗಿ ಹಿರಿಯ ವಿದ್ಯಾರ್ಥಿಗಳು ನಡೆದುಕೊಂಡಿದ್ದಾರೆ ಎಂದು ಮೊದಲನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಜಂಟಿ ದೂರು ನೀಡಿದ್ದರು.

ಕಿರಿಯ ವಿದ್ಯಾರ್ಥಿಗಳು ನೀಡಿರುವ ಆರೋಪ ಸಾಬೀತಾದರೆ ಚಿತ್ರಹಿಂಸೆ ನೀಡಿದ ಎಲ್ಲ ಹಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದಲೇ ತೆಗೆದುಹಾಕಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಾಲೇಜಿನ ಪ್ರಿನ್ಸಿಪಾಲ್ ಎಂ ಮೋಹನನ್ ಅವರು ಎಚ್ಚರಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ನಟ್ಟಕೋಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐವರು ಹಿರಿಯ ವಿದ್ಯಾರ್ಥಿಗಳು ನೀಡಿದ ಹಿಂಸೆಯಿಂದಾಗಿ ಓರ್ವನ ಮೂತ್ರಕೋಶಗಳೇ ಹಾಳಾಗಿವೆ. ಎಲ್ಲ ಐದು ಹಿರಿಯ ವಿದ್ಯಾರ್ಥಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಘಟನೆ ಕುರಿತಂತೆ ವಿಚಾರಣೆ ನಡೆಸಿ ವರದಿ ನೀಡಬೇಕೆಂದು ಶಿಕ್ಷಣ ಇಲಾಖೆಗೆ ಸರಕಾರ ಆದೇಶ ನೀಡಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications