'ಭಾರತ ಕೋವಿಡ್-19 ಲಸಿಕೆ ರಫ್ತಿನ ಮೇಲೆ ನಿಷೇಧ ಹೇರಿಲ್ಲ'
ನವದೆಹಲಿ, ಏಪ್ರಿಲ್ 3: ಕೊರೊನಾ ವೈರಸ್ ಲಸಿಕೆಗಳ ರಫ್ತಿನ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. 80ಕ್ಕೂ ಅಧಿಕ ದೇಶಗಳಿಗೆ ಇದುವರೆಗೂ 640 ಲಕ್ಷ ಡೋಸ್ಗಳಿಗಿಂತಲೂ ಹೆಚ್ಚು ಲಸಿಕೆಗಳನ್ನು ಪೂರೈಕೆ ಮಾಡುವಲ್ಲಿ ಭಾರತ ಮುಂಚೂಣಿಯ ಹೆಜ್ಜೆ ಇರಿಸಿದೆ ಎಂದು ಅದು ತಿಳಿಸಿದೆ.
ವಿದೇಶಗಳಿಗೆ ಲಸಿಕೆ ಪೂರೈಕೆ ಮಾಡುವ 'ವ್ಯಾಕ್ಸಿನ್ ಮೈತ್ರಿ' ಯೋಜನೆಯು ಬಹಳ ಯಶಸ್ವಿಯಾಗಿದ್ದು, ಜಗತ್ತಿನ ಮಿತ್ರ ದೇಶಗಳು ಅದನ್ನು ಮೆಚ್ಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.
'ಈ ದಿನದವರೆಗೆ 'ವ್ಯಾಕ್ಸಿನ್ ಮೈತ್ರಿ' ಯೋಜನೆಯಡಿ ನಾವು ಜಾಗತಿಕ ಸಮುದಾಯಕ್ಕೆ ಸುಮಾರು 644 ಲಕ್ಷ ಡೋಸ್ ಲಸಿಕೆಗಳನ್ನು ಪೂರೈಸಿದ್ದೇವೆ. ಇದರಲ್ಲಿ 104 ಲಕ್ಷ ಡೋಸ್ ಲಸಿಕೆಗಳನ್ನು ಅನುದಾನವಾಗಿ 357 ಲಕ್ಷ ಡೋಸ್ ಲಸಿಕೆಗಳನ್ನು ವಾಣಿಜ್ಯ ಆಧಾರದಲ್ಲಿ ಮತ್ತು 182 ಲಕ್ಷ ಡೋಸ್ಗಳನ್ನು ಕೋವ್ಯಾಕ್ಸ್ ಯೋಜನೆಯಡಿ ಪೂರೈಕೆ ಮಾಡಲಾಗಿದೆ' ಎಂದು ಅವರು ತಿಳಿಸಿದ್ದಾರೆ.

ನೇಪಾಳವು ಐದು ಮಿಲಿಯನ್ ಡೋಸ್ ಲಸಿಕೆ ಖರೀದಿಗಾಗಿ ಬೇಡಿಕೆ ಇರಿಸಿದೆ. ಇದಕ್ಕೆ ಭಾರತದಿಂದ ಪ್ರತಿಕ್ರಿಯೆ ಬಂದಿಲ್ಲ ಎಂಬ ವರದಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಅಂತರಿಕ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ವಿದೇಶಿ ಪೂರೈಕೆಯನ್ನು ನಡೆಸಲಾಗುತ್ತಿದೆ. ನಾವು ರಫ್ತು ನಿಷೇಧವನ್ನು ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications