ಉ.ಪ್ರ: ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಂಸದಂಗಡಿಗಳಿಗೆ ಬೆಂಕಿ
ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರುತ್ತಿದ್ದಂತೆ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಲು ಮುಂದಾಗಿದೆ. ಇದರ ಬೆನ್ನಲ್ಲೇ ಗುಂಪೊಂದು ಹಥ್ರಾಸ್ ನಲ್ಲಿ ಮಾಂಸದಂಗಡಿಗಳಿಗೆ ಬೆಂಕಿ ಇಟ್ಟಿದೆ.
ಲಕ್ನೊ, ಮಾರ್ಚ್ 22: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರುತ್ತಿದ್ದಂತೆ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಲು ಮುಂದಾಗಿದೆ. ಇದರ ಬೆನ್ನಲ್ಲೇ ಗುಂಪೊಂದು ಹಥ್ರಾಸ್ ನಲ್ಲಿ ಮಾಂಸದಂಗಡಿಗಳಿಗೆ ಬೆಂಕಿ ಇಟ್ಟಿದೆ.
ಗೋ ರಕ್ಷಕರು ಈ ಅಂಗಡಿಗಳಿಗೆ ಬೆಂಕಿ ಇಟ್ಟಿರಬಹುದು ಎನ್ನಲಾಗಿದೆ. ಆದರೆ ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೂರೇ ದಿನಗಳಲ್ಲಿ ಈ ಎಲ್ಲಾ ಘಟನೆಗಳು ನಡೆಯುತ್ತಿವೆ.[ರಾಮಮಂದಿರ ನಿರ್ಮಾಣ: ಸಿಎಂ ಯೋಗಿ ಕೈಲಿದೆ 'ಪವರ್' ಅಸ್ತ್ರ]

ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವುದಾಗಿ ಹೇಳಿದ್ದರು. ಸರಕಾರ ಸ್ಪಷ್ಟವಾಗಿ ಅಕ್ರಮ ಕಸಾಯಿಖಾನೆಗಳನ್ನು ಮಾತ್ರ ಮುಚ್ಚುವುದಾಗಿ ಹೇಳಿತ್ತು. ಆದರೆ ಶಂಕಿತ ಗೋ ರಕ್ಷಕರು ಇದೀಗ ಮಾಂಸದಂಗಡಿಗಳಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದೆ.
Uttar Pradesh: Three meat shops torched by unknown persons in Hathras, police registers case. pic.twitter.com/Ro0B2jhoJ6
— ANI UP (@ANINewsUP) March 22, 2017
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು ಯಾರಾದರೂ ಮುಂದೆ ಬಂದು ದೂರು ದಾಖಲಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.[ಉ.ಪ್ರ: ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ]
ಇದೇ ವೇಳೆ ಸ್ಥಳೀಯ ಸಂಸ್ಥೆಗಳು ಅಕ್ರಮ ಕಸಾಯಿಖಾನೆಗಳಿಗೆ ನೊಟೀಸ್ ನೀಡುವ ಕೆಲಸದಲ್ಲಿ ನಿರತವಾಗಿದ್ದು, ಮುಚ್ಚಲು ಅಣಿಯಾಗಿವೆ. ಈಗಾಗಲೇ ಗಾಝಿಯಾಬಾದ್ ನಲ್ಲಿ 20 ಮಾಂಸದಂಗಡಿಗಳನ್ನು ಮಂಗಳವಾರ ಮುಚ್ಚಲಾಗಿದೆ.
ಅಕ್ರಮ ಕಸಾಯಿಖಾನೆಗಳನ್ನು ಮತ್ತು ಅಂಗಡಿಗಳನ್ನು ಮುಚ್ಚುವುದರ ಜತೆಗೆ ಜಾನುವಾರುಗಳ ಕಳ್ಳ ಸಾಗಣೆಯ ಮೇಲೆಯೂ ಕಣ್ಣಿಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. (ಒನ್ ಇಂಡಿಯಾ ಸುದ್ದಿ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications