ಕಮಲ ಹಾಸನ್ ಟೀಕೆಗೆ ಅರುಣ್ ಜೇಟ್ಲಿ ಖಡಕ್ ಉತ್ತರ
ನವದೆಹಲಿ, ಜೂನ್ 5: ''ಮಾಧ್ಯಮಗಳಲ್ಲಿ ಹುಯಿಲೆಬ್ಬಿಸುವುದರಿಂದ ಸರ್ಕಾರದ ನೀತಿಯ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವಿಲ್ಲ'' - ಇದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ತಮಿಳು ನಟ ಕಮಲ ಹಾಸನ್ ಅವರಿಗೆ ಹೇಳಿದ ಕಿವಿಮಾತು.
ಒಂದು ದೇಶ, ಒಂದು ತೆರಿಗೆ ಧ್ಯೇಯದೊಂದಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜುಲೈ 1ರಿಂದ ಜಾರಿಗೆಗೊಳ್ಳಲಿದೆ.[ಜಿಎಸ್ ಟಿ ಜಾರಿಯಾದ್ರೆ ಚಿತ್ರರಂಗಕ್ಕೆ ವಿದಾಯ: ಕಮಲ್ ಹಾಸನ್]

ಈ ಬಗ್ಗೆ ಕೆಲ ದಿನಗಳ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದ ಕಮಲ ಹಾಸನ್, ''ಚಿತ್ರರಂಗದ ಮೇಲೆ ಜಿಎಸ್ ಟಿಯಿಂದಾಗಿ ಶೇ. 28ರಷ್ಟು ತೆರಿಗೆ ಬೀಳುತ್ತದೆ. ಕೇಂದ್ರ ಸರ್ಕಾರ ಇದನ್ನು ತಕ್ಷಣವೇ ಪರಿಷ್ಕರಿಸಬೇಕು ಅಥವಾ ಜಿಎಸ್ ಟಿಯನ್ನು ಹಿಂಪಡೆಯಬೇಕು. ಇಲ್ಲವಾದರೆ, ನಾನು ಚಿತ್ರರಂಗಕ್ಕೇ ವಿದಾಯ ಹೇಳುತ್ತೇನೆ'' ಎಂದು ಕಿಡಿಕಾರಿದ್ದರು.
ಇದಕ್ಕೆ ಸೋಮವಾರ (ಜೂನ್ 5) ಉತ್ತರ ಕೊಟ್ಟಿರುವ ಜೇಟ್ಲಿ, ''ಜಿಎಸ್ ಟಿ ಸಾಧಕ-ಬಾಧಕಗಳೇನು ಎಂಬುದನ್ನು ನಾವು ಹೆಜ್ಜೆ ಹೆಜ್ಜೆಗೂ ಅವಲೋಕಿಸುತ್ತಿದ್ದೇವೆ. ಆದರೆ, ಹೀಗೆ ಮಾಧ್ಯಮಗಳನ್ನು ಬಳಸಿಕೊಂಡು ಸರ್ಕಾರದ ನಿಯಮಗಳ ವಿರುದ್ಧ ಹುಯಿಲೆಬ್ಬಿಸಿದರೆ ಅದು ಯಾವುದೇ ಪರಿಣಾಮ ಬೀರುವುದಿಲ್ಲ'' ಎಂದು ಎಚ್ಚರಿಸಿದರು.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]
ಅಲ್ಲದೆ, ಈವೆರೆಗೆ ನಾನಾ ರಾಜ್ಯಗಳಿದ್ದ ವಿವಿಧ ಬಗೆಯ ಮನರಂಜನಾ ತೆರಿಗೆಗಳ ಒಟ್ಟು ಮೊತ್ತ ಶೇ. 29.1ರಷ್ಟಿತ್ತು. ಆದರೆ, ಜಿಎಸ್ ಟಿಯಿಂದಾಗಿ ಅದು ಶೇ. 28ಕ್ಕೆ ಇಳಿಯಲಿದೆ. ಶೇ. 1ರಷ್ಟು ತೆರಿಗೆ ಕಡಿಮೆಯೇ ಆಗಿದೆ. ಇದನ್ನರಿತು ಟೀಕೆ ಮಾಡಬೇಕು ಎಂದು ಅವರು ಕಮಲ್ ಗೆ ನೇರವಾಗಿ ತಿಳಿ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications