Priyanka Gandhi: ಪ್ರಿಯಾಂಕಾ ವಾದ್ರಾ ಪರವಾಗಿ ಮಕ್ಕಳ ಭರ್ಜರಿ ಪ್ರಚಾರ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಹಲವು ಪ್ರಮುಖ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಪರವಾಗಿ ಪ್ರಚಾರ ನಡೆಸಿದ್ದಾರೆ. ನವೆಂಬರ್ 13ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, ಇಂದು (ನವೆಂಬರ್ 11) ಬಹಿರಂಗ ಪ್ರಚಾರ ಅಂತ್ಯವಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಪರವಾಗಿ ಮಗಳು ಮಿರಾಯಾ ವಾದ್ರಾ ಮತ್ತು ಮಗ ರೈಹಾನ್ ವಾದ್ರಾ ಪ್ರಚಾರ ನಡೆಸಿದ್ದು ಗಮನ ಸೆಳೆದಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಶತಪ್ರಯತ್ನ ಮಾಡುತ್ತಿದೆ. ಅಮ್ಮನ ರಾಜಕೀಯ ಜೀವನಕ್ಕೆ ಮಕ್ಕಳು ಕೂಡ ಬೆಂಬಲ ಕೊಟ್ಟಿದ್ದಾರೆ. ವಯನಾಡ್ನಲ್ಲಿ ಪ್ರಚಾರದ ವೇಳೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಿರಾಯಾ ವಾದ್ರಾ ಯಾರು?
ಪ್ರಿಯಾಂಕಾ ಗಾಂಧಿ ವಾದ್ರಾ ಮಗಳು 22 ವರ್ಷದ ಮಿರಾಯಾ ಡೆಹ್ರಾಡೂನ್ನ ವೆಲ್ಹ್ಯಾಮ್ ಗರ್ಲ್ಸ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಈ ಮೊದಲು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಕೂಡ ಮಿರಾಯಾ ವಾದ್ರಾ ಕಾಣಿಸಿಕೊಂಡಿದ್ದರು.
2024ರ ಲೋಕಸಭಾ ಚುನಾವಣೆಯಲ್ಲಿ ದೆಹಿಯಲ್ಲಿ ಮಿರಾಯಾ ವಾದ್ರಾ ಮೊದಲ ಬಾರಿಗೆ ಮತ ಚಲಾಯಿಸಿದ್ದರು. ಮತದಾನ ಮಾಡಿದ ಬಳಿಕ ಮಾತನಾಡಿದ್ದ ಅವರು, ಪ್ರಜಾಪ್ರಭುತ್ವದಲ್ಲಿ ದೊಡ್ದ ಹಬ್ಬದಲ್ಲಿ ಭಾಗವಹಿಸಲು, ಮತ್ತು ಬದಲಾವಣೆ ತರಲು ಸಿಗುವ ಅವಕಾಶ ಇದಾಗಿದ್ದು. ಎಲ್ಲರೂ ಹೊರಬಂದು ಮತ ಚಲಾಯಿಸಬೇಕು ಎಂದು ಹೇಳಿದ್ದರು. 2016ರಲ್ಲಿ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ಹರಿಯಾಣ ಬಾಲಕಿಯರ ತಂಡದಲ್ಲಿ ಭಾಗವಹಿಸಿದಾಗ ಗಮನ ಸೆಳೆದಿದ್ದರು.
ರೈಹಾನ್ ವಾದ್ರಾ ಯಾರು?
24 ವರ್ಷದ ರೈಹಾನ್ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರ ಹಿರಿಯ ಮಗ. ರೈಹಾನ್ ವೃತ್ತಿಯಲ್ಲಿ 'ದೃಶ್ಯ ಕಲಾವಿದ' ಎಂದು ಅವರ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದ್ದಾರೆ. ಛಾಯಾಗ್ರಹಣದಲ್ಲಿ ಅವರು ಆಸಕ್ತಿ ಹೊಂದಿದ್ದು, ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ರಸ್ತೆ ಮತ್ತು ವನ್ಯಜೀವಿ ಛಾಯಾಗ್ರಹಣ ಮಾಡಿರುವ ಕೆಲವು ಫೋಟಗಳನ್ನು ಹಂಚಿಕೊಂಡಿದ್ದಾರೆ.
ಕೋಲ್ಕತ್ತಾದಲ್ಲಿ "ದಿ ಇಂಡಿಯಾ ಸ್ಟೋರಿ" ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳಲ್ಲಿ ರೈಹಾನ್ ಭಾಗವಹಿಸಿದ್ದಾರೆ. ಈವರೆಗೆ ಎರಡು ಏಕವ್ಯಕ್ತಿ ಕಲಾ ಪ್ರದರ್ಶನಗಳನ್ನು ಕೂಡ ನಡೆಸಿದ್ದಾರೆ.
ವಯನಾಡಿನಲ್ಲಿ ಭರ್ಜರಿ ಪ್ರಚಾರ
ವಯನಾಡ್ ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ನೇತೃತ್ವದ ಯುಡಿಎಫ್ನ ಭದ್ರಕೋಟೆಯಾಗಿದೆ ಮತ್ತು ಚೇಲಕ್ಕರ ವಿಭಾಗವು ಸಿಪಿಐ (ಎಂ) ನೇತೃತ್ವದ ಎಲ್ಡಿಎಫ್ನ ಭದ್ರಕೋಟೆಯಾಗಿದೆ. ವಯನಾಡ್ ಮತ್ತು ರಾಯ್ಬರೇಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಗೆಲುವು ಸಾಧಿಸಿದ್ದರು, ಬಳಿಕ ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications