Meghalaya election results 2023; ಎನ್ಪಿಪಿ, ಟಿಎಂಸಿ ಮುನ್ನಡೆ
ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ಆರಂಭವಾಗಿದೆ. ಎನ್ಪಿಪಿ ಮತ್ತು ಟಿಎಂಸಿ ಪಕ್ಷಗಳು ಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಶಿಲ್ಲಾಂಗ್, ಮಾರ್ಚ್ 02; ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. 60 ಸದಸ್ಯ ಬಲದ ವಿಧಾನಸಭೆಯ ಪೈಕಿ 59 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಬುಡಕಟ್ಟು ಮತ್ತು ಕ್ರೈಸ್ತ ಸಮುದಾಯದ ಪ್ರಾಬಲ್ಯವಿರುವ ಚಿಕ್ಕ ರಾಜ್ಯವಾದ ಮೇಘಾಲಯದಲ್ಲಿ ಕಳೆದ ಬಾರಿ ಕಾಂಗ್ರೆಸ್ ಆಡಳಿತ ಕೊನೆಗೊಂಡಿತ್ತು. ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿದ್ದರು.

ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಎನ್ಪಿಪಿ, ಟಿಎಂಸಿ, ಬಿಜೆಪಿ, ಕಾಂಗ್ರೆಸ್, ಯುನೈಟೆಡ್ ಡೆಮಾಕ್ರೆಟಿಕ್ ಪಕ್ಷ ಚುನಾವಣಾ ಕಣದಲ್ಲಿವೆ. ಮತ ಎಣಿಕೆಯಲ್ಲಿ ಎನ್ಪಿಪಿ ಮತ್ತು ಟಿಎಂಸಿ ಸದ್ಯ ಮುನ್ನಡೆ ಕಾಯ್ದುಕೊಂಡಿವೆ. ಮುಕುಲ್ ಸಂಗ್ಮಾ ನೇತೃತ್ವದಲ್ಲಿ 11 ಶಾಸಕರು ಟಿಎಂಸಿಗೆ ವಲಸೆ ಹೋಗಿದ್ದು, ಟಿಎಂಸಿ ಬಲವನ್ನು ಹೆಚ್ಚಿಸಿದೆ ಎಂಬುದನ್ನು ತೋರಿಸುತ್ತಿದೆ.
ಗುರುವಾರ ಬೆಳಗ್ಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸದ್ಯದ ಮಾಹಿತಿ ಪ್ರಕಾರ ಎನ್ಪಿಪಿ 15, ಟಿಎಂಸಿ 16, ಬಿಜೆಪಿ 5, ಕಾಂಗ್ರೆಸ್ 7, ಇತರರು 16 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣೆಯ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ. ಮೇಘಾಲಯ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳಿವೆ. ಆದರೆ ಶಿಲ್ಲಾಂಗ್ ವಿಧಾನಸಭಾ ಕ್ಷೇತ್ರದ ಯುನೈಟೆಡ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಎಚ್. ಡಿ. ಆರ್. ಲಿಂಗ್ಡೊ ಮೃತಪಟ್ಟ ಕಾರಣ ಆ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಆದ್ದರಿಂದ 59 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.

ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್ಪಿಪಿಗೆ ಟಿಎಂಸಿ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಮುಕುಲ್ ಸಂಗ್ಮಾ ನೇತೃತ್ವದಲ್ಲಿ ಕಳೆದ ವರ್ಷ ಕಾಂಗ್ರೆಸ್ ಬಿಟ್ಟು ಟಿಎಂಸಿ ಸೇರಿದ್ದರು. ಈ ಕಾರಣದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುಸಿದು, ಟಿಎಂಸಿ ಪ್ರಾಬಲ್ಯ ಹೆಚ್ಚಳವಾಗಿದೆ. ಕಾಂಗ್ರೆಸ್ 8 ಮತ್ತು ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, ಎರಡೂ ಪಕ್ಷಗಳು ಎರಡಂಕಿ ದಾಟಲಿವೆಯೇ? ಎಂದು ಕಾದು ನೋಡಬೇಕಿದೆ.
ಪಕ್ಷಗಳ ನಡುವೆ ಅಸಮಾಧಾನ; ಕಳೆದ ಬಾರಿಯ ಚುನಾವಣೆಯಲ್ಲಿ ಒಂದಾಗಿ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಮೈತ್ರಿಕೂಟ ರಚನೆ ಮಾಡಿಕೊಂಡಿದ್ದ ಪಕ್ಷಗಳ ನಡುವೆ ಈ ಬಾರಿ ಅಸಮಾಧಾನವಿದೆ. ಎನ್ಪಿಪಿ ಕಳೆದ ಬಾರಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 2018ರ ತನಕ ರಾಜ್ಯದಲ್ಲಿದ್ದ ಕಾಂಗ್ರೆಸ್ ಪ್ರಾಬಲ್ಯವನ್ನು ಮುರಿದು ಅಧಿಕಾರವನ್ನು ಹಿಡಿದಿತ್ತು.
ಎನ್ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಸರ್ಕಾರಕ್ಕೆ ಬೆಂಬಲ ನೀಡಿದ್ದ ಯುಡಿಎಫ್, ಪಿಡಿಎಫ್, ಎಚ್ಎಸ್ಪಿಡಿಪಿ, ಬಿಜೆಪಿ, ಪಕ್ಷೇತರರು ಈ ಬಾರಿ ಸ್ವತಂತ್ರವಾಗಿ ಕಣಕ್ಕಿಳಿಸಿದ್ದಾರೆ. ಐದು ವರ್ಷಗಳ ಕಾಲ ಒಟ್ಟಾಗಿ ಆಡಳಿತ ನಡೆಸಿದರೂ ಸಹ ಈ ಬಾರಿ ಎಲ್ಲರೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications