Meghalaya Election Result 2023 : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಿನ್ನಡೆ
ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ದಕ್ಷಿಣ ಶಿಲ್ಲಾಂಗ್ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಕಾಯ್ದುಕೊಂಡಿದ್ದಾರೆ.
ಶಿಲ್ಲಾಂಗ್, ಮಾರ್ಚ್ 02; ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಎನ್ಪಿಪಿ 28 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸುವ ಸುಳಿವು ಸಿಕ್ಕಿದೆ. ರಾಜ್ಯದ 60 ಕ್ಷೇತ್ರಗಳ ಪೈಕಿ 59 ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆದಿತ್ತು. ಬಿಜೆಪಿ ಹಿನ್ನಡೆ ಅನುಭವಿಸುವ ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷರೂ ಸಹ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ದಕ್ಷಿಣ ಶಿಲ್ಲಾಂಗ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕ್ಷೇತ್ರದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಪೌಲ್ ಲಿಂಗ್ಡಾನ್ ಸುಮಾರು 6 ಸಾವಿರ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಎನ್ಪಿಪಿಯ ಮೊಹೇಂದ್ರೋ ರಾಪ್ಸಂಗ್ ಇದ್ದು 2,920 ಮತಗಳನ್ನು ಪಡೆದಿದ್ದಾರೆ.

12 ಗಂಟೆಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಎನ್ಪಿಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಎನ್ಪಿಪಿ 23, ಬಿಜೆಪಿ ಮತ್ತು ಕಾಂಗ್ರೆಸ್ 5, ಯುಡಿಪಿ 8 ಸ್ಥಾನಗಳಲ್ಲಿ ಮುನ್ನಡೆ ಪಡೆದಿವೆ. 59 ಸ್ಥಾನಗಳಿಗೆ ಚುನಾವಣೆ ನಡೆದ ಕಾರಣ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 30. ಆಗಿದೆ.
ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಬಿಜೆಪಿ ಮೇಘಾಲಯ ವಿಧಾನಸಭೆ ಚುನಾವಣೆ 2023ರಲ್ಲಿ ಸ್ವತಂತ್ರವಾಗಿ ಕಣಕ್ಕಿಳಿದಿದೆ. ಎಲ್ಲಾ 60 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ಶಿಲ್ಲಾಂಗ್ ದಕ್ಷಿಣದಿಂದ ಸ್ಪರ್ಧಿಸಿದ್ದಾರೆ.
2018ರಲ್ಲಿ ಬಿಜೆಪಿ ರಾಜ್ಯದಲ್ಲಿ ಎರಡು ಸ್ಥಾನಗಳಲ್ಲಿ ಜಯಗಳಿಸಿತ್ತು. ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಮೈತ್ರಿಕೂಟಕ್ಕೆ ಚುನಾವಣಾ ಫಲಿತಾಂಶದ ಬಳಿಕ ಬೆಂಬಲ ನೀಡಿತ್ತು. ಇಬ್ಬರು ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನವನ್ನು ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೀಡಿದ್ದರು. ಆದರೆ ಪ್ರಮುಖ ಖಾತೆ ನೀಡಿಲ್ಲ ಎಂಬುದು ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ಆರೋಪವಾಗಿತ್ತು.
ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎನ್ಪಿಪಿ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡು ಪಕ್ಷಗಳು ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿವೆ. ಆದರೆ ಅರ್ನಸ್ಟ್ ಮಾವ್ರಿ ಎನ್ಪಿಪಿ ಅಭ್ಯರ್ಥಿಯಿಂದಲೇ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications