ಮೇಘಾಲಯ: ಕಾಂಗ್ರೆಸ್ಸಿಗೆ ಮುನ್ನಡೆ, ಸರ್ಕಾರ ರಚನೆ ಕಗ್ಗಂಟು
ಬೆಂಗಳೂರು, ಮಾರ್ಚ್ 03: ಈಶಾನ್ಯ ರಾಜ್ಯಗಳಲ್ಲಿ ಕೇಸರಿ ಬಾವುಟ ಹಾರಿಸುವಲ್ಲಿ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಜೋಡಿ ಯಶಸ್ವಿಯಾಗಿದೆ. ಆದರೆ, ಮೇಘಾಲಯದಲ್ಲಿ ಅತಂತ್ರ ಸ್ಥಿತಿ ಮುಂದುವರೆದಿದ್ದು, ಮುನ್ನಡೆ ಗಳಿಸಿದರೂ ಸರ್ಕಾರ ರಚನೆ ಸಾಧ್ಯವಾಗುತ್ತಿಲ್ಲ.
ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಅಲ್ಪ ಮುನ್ನಡೆ ಸಿಕ್ಕಿದ್ದು, ಅಧಿಕಾರ ಸ್ಥಾಪನೆಗೆ ಯತ್ನ ನಡೆದಿದೆ. ತ್ರಿಪುರಾದಲ್ಲಿ ಕೇಸರಿ ಪಡೆ ಭರ್ಜರಿ ಮುನ್ನಡೆ ಸಾಧಿಸಿ, ಜಯಭೇರಿ ಬಾರಿಸಿದೆ.

ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಅತಂತ್ರದಲ್ಲಿದೆ. ಇತ್ತೀಚಿನ ವರದಿಗಳಂತೆ, 59 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎನ್ಪಿಪಿ 14 ಕ್ಷೇತ್ರಗಳಲ್ಲಿ, ಬಿಜೆಪಿ 4 ಹಾಗೂ ಇತರರು 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರ್ಕಾರ ರಚನೆಗೆ 31 ಸ್ಥಾನಗಳ ಅಗತ್ಯವಿದೆ. 2013ರಲ್ಲಿ ಕಾಂಗ್ರೆಸ್ 28, ಎನ್ ಪಿಪಿ 2 ಸ್ಥಾನಗಳಿಸಿತ್ತು.
ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಸರ್ಕಾರ ರಚನೆಗೆ ಸಾಧ್ಯತೆಯಿರುವ ಎಲ್ಲಾ ಮಾರ್ಗಗಳನ್ನು ಹುಡುಕುತ್ತಿದೆ. ಗೋವಾದಲ್ಲಿ ಆದಂತೆ ಮೇಘಾಲಯದಲ್ಲಿ ಆಗಬಾರದು ಎಂಬ ಎಚ್ಚರಿಕೆ ವಹಿಸಲಾಗುತ್ತಿದೆ.
ಶಿಲ್ಲಾಂಗ್ ಗೆ ಪಕ್ಷದ ಮುಖಂಡರಾದ ಅಹ್ಮದ್ ಪಟೇಲ್ ಹಾಗೂ ಕಮಲ್ನಾಥ್ ಅವರು ಆಗಮಿಸಿದ್ದಾರೆ. ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದ್ದಾರೆ.
ಮೇಘಾಲಯದ ಪೂರ್ವದ ಗರೋ ಹಿಲ್ಸ್ ಕ್ಷೇತ್ರದ ಎನ್ ಸಿಪಿ ಅಭ್ಯರ್ಥಿ ಜೊನಾಥೊನ್ ನೆಂಗ್ಮಿನ್ಜಾ ಸಂಗ್ಮಾ ಅವರು ವಿಲಿಯಮ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇತ್ತೀಚೆಗೆ ಎಲ್ ಐಡಿ ಸ್ಫೋಟದಲ್ಲಿ ಮೃತಪಟ್ಟಿದ್ದರಿಂದ 59 ಕ್ಷೇತ್ರದ ಫಲಿತಾಂಶ ಮಾತ್ರ ಇಂದು ಸಿಗಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications