ಮೇಘಾಲಯದ 7 ಜಿಲ್ಲೆಗಳಲ್ಲಿ 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ
ಶಿಲ್ಲಾಂಗ್, ನವೆಂಬರ್ 25: ಮೇಘಾಲಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸುವುದನ್ನು ಇನ್ನೂ 48 ಗಂಟೆಗಳ ನಂತರ ವಿಸ್ತರಿಸುವುದಾಗಿ ಗುರುವಾರ ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಅಸ್ಸಾಂ-ನೋಂದಾಯಿತ ವಾಹನಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿರುವ ಘಟನೆಗಳು ವರದಿಯಾದ ಬೆನ್ನಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಮೇಘಾಲಯದ ಏಳು ಜಿಲ್ಲೆಗಳಾದ ಪಶ್ಚಿಮ ಜೈಂಟಿಯಾ ಹಿಲ್ಸ್, ಪೂರ್ವ ಜೈಂಟಿಯಾ ಹಿಲ್ಸ್, ಪೂರ್ವ ಖಾಸಿ ಹಿಲ್ಸ್, ರಿ-ಭೋಯಿ, ಪೂರ್ವ ಪಶ್ಚಿಮ ಖಾಸಿ ಹಿಲ್ಸ್, ಪಶ್ಚಿಮ ಖಾಸಿ ಹಿಲ್ಸ್ ಮತ್ತು ನೈಋತ್ಯ ಖಾಸಿ ಬೆಟ್ಟಗಳಲ್ಲಿ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಲಾಗಿದೆ.
ಗುರುವಾರ ಸಂಜೆ ದುಷ್ಕರ್ಮಿಗಳು ಟ್ರಾಫಿಕ್ ಬೂತ್ ಅನ್ನು ಸುಟ್ಟುಹಾಕಿದ್ದು, ರಾಜಧಾನಿ ಶಿಲ್ಲಾಂಗ್ ನಲ್ಲಿ ಸಿಟಿ ಬಸ್ ಸೇರಿದಂತೆ ಮೂರು ಪೊಲೀಸ್ ವಾಹನಗಳ ಮೇಲೆ ದಾಳಿ ಮಾಡಿದ್ದರು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದರ ಪ್ರಕಾರ, ನವೆಂಬರ್ 22ರಂದು ಅಸ್ಸಾಂ-ಮೀಘಾಲಯ ಗಡಿಯಲ್ಲಿನ ಹಿಂಸಾಚಾರವನ್ನು ವಿರೋಧಿಸಿ ಕೆಲವು ಗುಂಪುಗಳು ಆಯೋಜಿಸಿದ್ದ ಕ್ಯಾಂಡಲ್ಲೈಟ್ ಜಾಗರಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೇಘಾಲಯದಲ್ಲಿ ನಡೆಯುತ್ತಿರುವ ಬೆಳವಣಿಗೆಳ ಕುರಿತು ಮಾಹಿತಿಯನ್ನು ಮುಂದೆ ಓದಿ ತಿಳಿಯಿರಿ.

ಮೇಘಾಲಯದಲ್ಲಿ ಇದೇನು ಆಗುತ್ತಿದೆ?
* ಮೇಘಾಲಯ ಸರ್ಕಾರ ಗುರುವಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಡೇಟಾ ಸೇವೆಗಳನ್ನು ಅಮಾನತುಗೊಳಿಸುವುದನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಿದೆ.
* ಗುರುವಾರ ಸಂಜೆ ದುಷ್ಕರ್ಮಿಗಳು ಟ್ರಾಫಿಕ್ ಬೂತ್ ಅನ್ನು ಸುಟ್ಟುಹಾಕಿದರು ಮತ್ತು ಮೇಘಾಲಯದ ರಾಜಧಾನಿ ಶಿಲ್ಲಾಂಗ್ ನಲ್ಲಿ ಸಿಟಿ ಬಸ್ ಸೇರಿದಂತೆ ಮೂರು ಪೊಲೀಸ್ ವಾಹನಗಳ ಮೇಲೆ ದಾಳಿ ಮಾಡಿದರು.
* ಪ್ರತಿಭಟನಾಕಾರರು ಪೊಲೀಸ್ ಪಡೆಗಳ ಮೇಲೆ ಕಲ್ಲುಗಳು ಮತ್ತು ಪೆಟ್ರೋಲ್ ಬಾಂಬುಗಳನ್ನು ಎಸೆದರು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ಆದೇಶವನ್ನು ಜಾರಿಗೊಳಿಸಲು ಭದ್ರತಾ ಸಿಬ್ಬಂದಿ ಟಿಯರ್ ಗ್ಯಾಸ್ ಸಿಡಿಸಿದ್ದಾರೆ.
* ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಗುರುವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.
* ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲಾಗಿದೆ. ನಮ್ಮ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ವಿಭಿನ್ನ ಕ್ರಮಗಳನ್ನು ತೆಗೆದುಕೊಂಡಿದ್ದು, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲಾಗಿದೆ ಎಂದು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.
* ಮುಂದಿನ 2-3 ದಿನಗಳವರೆಗೆ ನಾವು ಪರಿಸ್ಥಿತಿಯನ್ನು ನೋಡಬೇಕು ಎಂದು ನಾನು ಭಾವಿಸುತ್ತೇನೆ, ಆದರೆ ಯಾವುದನ್ನೂ ಮುಚ್ಚಿಸುವ ಕ್ರಮ ತೆಗೆದುಕೊಂಡಿಲ್ಲ. ಚಾಲ್ತಿಯಲ್ಲಿರುವ ಉದ್ವಿಗ್ನತೆಯಿಂದಾಗಿ ಜನರಿಗೆ ಮುನ್ನೆಚ್ಚರಿಕೆ ಸಲಹೆಯನ್ನು ನೀಡಲಾಗಿದೆ. ಕೇಂದ್ರ ಗೃಹ ಸಚಿವರು ಕೇಂದ್ರ ಏಜೆನ್ಸಿ ವಿಚಾರಣೆಗೆ ಭರವಸೆ ನೀಡಿದ್ದಾರೆ ಎಂದು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ತಿಳಿಸಿದರು.
* ಅಸ್ಸಾಂ-ಮೇಘಾಲಯ ಗಡಿಯುದ್ದಕ್ಕೂ ಮುಕ್ರೋಹ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯು ಎರಡು ರಾಜ್ಯಗಳ ನಡುವಿನ ಗಡಿ ವಿವಾದದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.












Click it and Unblock the Notifications