ಮೆಹದಿ ತಪ್ಪೊಪ್ಪಿಗೆ : ಪೊಲೀಸ್ ಆಯುಕ್ತರು ನೀಡಿದ ವಿವರ
ಬೆಂಗಳೂರು, ಡಿ. 13: ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರ ಮೆಹದಿ ಮಸ್ರೂರ್ ಬಿಸ್ವಾಸ್ ತಾನು @shamwitness ಹೆಸರಿನ ಟ್ವಿಟ್ಟರ್ ಖಾತೆ ನಿರ್ವಹಿಸುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ. ಆದ್ದರಿಂದ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆತನ ಕುರಿತು ನೀಡಿರುವ ಸಂಪೂರ್ಣ ವಿವರ ಇಲ್ಲಿದೆ... [ಟ್ವಿಟ್ಟರ್ ಉಗ್ರನ ರಹಸ್ಯ ಬಯಲು]
- ಮೆಹದಿ ಸೆಕ್ಷನ್ 125 (ಭಾರತ ಸರ್ಕಾರದೊಂದಿಗೆ ಸ್ನೇಹ ಸಂಬಂಧ ಹೊಂದಿರುವ ಏಷ್ಯಾ ದೇಶದ ವಿರುದ್ಧ ಯುದ್ಧ ಘೋಷಣೆ ಮಾಡಿದ ಅಪರಾಧ), ಕಾನೂನು ಬಾಹಿರ ಚಟುವಟಿಕೆ ಹಾಗೂ ಸೆಕ್ಷನ್ 66 ಅಡಿ ಪ್ರಕರಣ ದಾಖಲಿಸಲಾಗಿದೆ.
- ಆತ West Bengal Institute of Technology ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ Manufacturing Executive ಆಗಿ ಕಾರ್ಯನಿರ್ವಹಿಸುತ್ತಿದ್ದ. ವಾರ್ಷಿಕ ಸುಮಾರು 5.3 ಲಕ್ಷ ರೂ. ವೇತನವಿತ್ತು.
- ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗಿದ್ದ.
- ಮೆಹದಿ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಇಬ್ಬರು ಸಹೋದರಿಯರು ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿದ್ದಾರೆ. ತಂದೆ ಪ.ಬಂಗಾಳ ರಾಜ್ಯದ ವಿದ್ಯುತ್ ಮಂಡಳಿಯ ನಿವೃತ್ತ ಉದ್ಯೋಗಿ. [ಮತಾಂತರ ಏಕೆ? ಈ ಬಗ್ಗೆ ಕಾನೂನು ಏನು ಹೇಳುತ್ತದೆ?]
- ಕೆಲವು ವರ್ಷಗಳಿಂದ @shamwitness ಹೆಸರಿನ ಟ್ವಿಟ್ಟರ್ ಖಾತೆ ನಿರ್ವಹಿಸುತ್ತಿದ್ದ. ಟರ್ಕಿ, ಸಿರಿಯಾ, ಲೆಬನಾನ್, ಇಸ್ರೇಲ್, ಗಾಜಾ ಪಟ್ಟಿ, ಈಜಿಪ್ತ್ ಮತ್ತು ಲಿಬಿಯಾ ದೇಶಗಳ ಕುರಿತು 2003ರಿಂದ ಆಸಕ್ತಿ ಹೊಂದಿದ್ದ.
- ಬೆಳಗ್ಗೆಯಿಂದ ಸಂಜೆಯವರೆಗೆ ಕಂಪನಿಯಲ್ಲಿ ದುಡಿಯುತ್ತಿದ್ದ. ರಾತ್ರಿ ಇಂಟರ್ನೆಟ್ನಲ್ಲಿ ಕಾರ್ಯನಿರತನಾಗುತ್ತಿದ್ದ. ಆತ 60 ಜಿಬಿ ಬಳಕೆಯ ತಿಂಗಳ ಇಂಟರ್ನೆಟ್ ಸಂಪರ್ಕ ಪಡೆದಿದ್ದ. ISIS ಮತ್ತು ISIL ವೆಬ್ಸೈಟ್ನಲ್ಲಿ ಬರುತ್ತಿದ್ದ ಎಲ್ಲ ಬ್ರೇಕಿಂಗ್ ನ್ಯೂಸ್ ಓದುತ್ತಿದ್ದ. ಆತನಿಗೆ 17,000 ಕ್ಕಿಂತ ಹೆಚ್ಚಿನ ಫಾಲೋವರ್ಸ್ ಇದ್ದರು.
- ಮೆಹದಿ ಹೆಚ್ಚಾಗಿ ಇಂಗ್ಲಿಷ್ ಮಾತನಾಡಬಲ್ಲ ಐಎಸ್ಐಎಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ. ISIS ಮತ್ತು ISIL ಸೇರಬಯಸುವವರ ಮಾಹಿತಿ ಒದಗಿಸುವ ಮೂಲವಾಗಿ ಪರಿಣಮಿಸಿದ. [ಒಂದು ಕೈಯಲ್ಲಿ ಎಕೆ47, ಇನ್ನೊಂದು ಕೈಯಲ್ಲಿ ಮಗು]
- ಸಾಮಾಜಿಕ ಜಾಲದ ಮೂಲಕವೇ ಏಷ್ಯಾ ರಾಷ್ಟ್ರಗಳ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡುತ್ತಿದ್ದ. ತನ್ನ ಗುರುತು ಮರೆಮಾಚುವ ಕುರಿತು ಜಾಗೃತಿ ವಹಿಸಿದ್ದ. ಯಾವತ್ತೂ ತನ್ನ ಗುರುತು ಪತ್ತೆಯಾಗದು ಎಂದು ನಂಬಿದ್ದ. ಆದರೆ ಆತನ ಗುರುತನ್ನು ಚಾನಲ್ 4 ಪತ್ತೆ ಹಚ್ಚಿತು ಮತ್ತು ಈ ಕುರಿತು ಭಾರತೀಯ ಏಜೆನ್ಸಿಗಳಿಗೆ ವಿಷಯ ರವಾನಿಸಿತು. [ಜಾಣ ಮೆಹದಿ ಪೊಲೀಸ್ ಕಣ್ಣು ತಪ್ಪಿಸಿದ್ದು ಹೇಗೆ]
- ಮೆಹದಿ ಮಸ್ರೂರ್ ಬಿಸ್ವಾಸ್ ವಿರುದ್ಧ ಐಪಿಸಿ, ಯುಎಪಿ ಮತ್ತು ಐಟಿ ಕಾಯ್ದೆ 2000 ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಸಿಬಿಯ ಕ್ರೈಂ ಡಿಸಿಪಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications