ಪ್ರಧಾನಿ ಮೋದಿಯವರ ಭಾಷಣದಲ್ಲಿ ಪದೇ ಪದೇ ಹೇಳುವ 3 ಪದಗಳು...
ದೆಹಲಿ ಆಗಸ್ಟ್ 15: ಭಾರತದ 77ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ನಂತರ ಪ್ರಧಾನಿ ಮೋದಿ ವೇದಿಕೆಯಿಂದ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರ ಭಾಷಣದ ವೇಳೆ ವೇದಿಕೆಯಿಂದ ಅವರು ಹೇಳಿದ ಮೂರು ಮಾತುಗಳು ಸದ್ಯ ಸುದ್ದಿಯಾಗಿವೆ.
ಧ್ವಜಾರೋಹಣದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವಾಗ ಪದೇ ಪದೇ ತಮ್ಮ ಬಾಂಧವ್ಯವನ್ನು ತೋರಿಸಿದರು. ತಮ್ಮ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳನ್ನು ಉದ್ದೇಶಿಸಿ 'ನನ್ನ ಪ್ರೀತಿಯ ಕುಟುಂಬ ಸದಸ್ಯರೇ...' ಎಂದು ಹೇಳಿದರು. 'ನನ್ನ ಪ್ರೀತಿಯ ಕುಟುಂಬ ಸದಸ್ಯರು' ಈ ಮೂರು ಪದಗಳನ್ನು ಪ್ರಧಾನಿ ಮೋದಿಯವರು ಹಲವು ಬಾರಿ ಹೇಳಿದರು.

ಪ್ರಧಾನಿ ಮೋದಿ ಪದೇ ಪದೇ ಹೇಳಿದ ಈ ಮೂರು ಪದಗಳು ಇಡೀ ಭಾಷಣದಲ್ಲಿ ಪ್ರಾಬಲ್ಯ ಹೊಂದಿವೆ. ಅಂದಹಾಗೆ ಇದೀಗ ಈ ಮೂರು ಪದಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲದೆ ಮಾಧ್ಯಮಗಳಲ್ಲೂ ಸುದ್ದಿಯಾಗಿವೆ.
ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿಯವರು ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೆ ಜನಸಂಖ್ಯೆಯಲ್ಲಿ ನಮ್ಮದು ನಂಬರ್ ಒನ್ ದೇಶ ಎಂದು ಹೇಳಿದರು. ಈ ಬೃಹತ್ ದೇಶದಲ್ಲಿ ಇರುವ 140 ಕೋಟಿ ನನ್ನ ಸಹೋದರರು, ಸಹೋದರಿಯರು, ನನ್ನ ಕುಟುಂಬ ಸದಸ್ಯರು... ಇಂದು ಅವರು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ದೇಶದ ಕೋಟ್ಯಂತರ ಜನರಿಗೆ, ದೇಶ ಮತ್ತು ಪ್ರಪಂಚದಲ್ಲಿ ಭಾರತವನ್ನು ಪ್ರೀತಿಸುವ ಮತ್ತು ಗೌರವಿಸುವ ಕೋಟ್ಯಂತರ ಜನರಿಗೆ ಈ ಮಹಾನ್ ಹಬ್ಬದಂದು ನಾನು ಅನೇಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ನನ್ನ ಕುಟುಂಬದ ಸದಸ್ಯರಾದ ಪೂಜ್ಯ ಬಾಪು ಅವರ ನೇತೃತ್ವದಲ್ಲಿ ತ್ಯಾಗ ಬಲಿದಾನ ಮಾಡಿದ ಅಸಂಖ್ಯಾತ ವೀರರಿಗೆ ತಲೆಬಾಗುತ್ತೇನೆ ಎಂದು ಹೇಳಿದರು. ಆ ತಲೆಮಾರಿನಲ್ಲಿ ಕೊಡುಗೆ ನೀಡದ ವ್ಯಕ್ತಿಯೇ ಇರುತ್ತಿರಲಿಲ್ಲ. ಕೊಡುಗೆ ನೀಡಿದವರು, ತ್ಯಾಗ, ಬಲಿದಾನ, ತಪಸ್ಸು ಮಾಡಿದವರು ಅನೇಕರಿದ್ದಾರೆ. ಅವರೆಲ್ಲರಿಗೂ ಗೌರವಪೂರ್ವಕವಾಗಿ ತಲೆಬಾಗುತ್ತೇನೆ.
ದೇಶವನ್ನು ತಮ್ಮ ಕುಂಟುಬ ಎಂದು ಭಾವಿಸಿ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಪದೇ ಪದೇ ದೇಶವಾಸಿಗಳನ್ನು ತಮ್ಮ ಕುಟುಂಬದ ಸದಸ್ಯರು ಎಂದು ಸಂಬೋಧಿಸುತ್ತಿದ್ದರು. ಪ್ರಧಾನಿ ಮೋದಿ, 'ನನ್ನ ಪ್ರೀತಿಯ ಕುಟುಂಬ ಸದಸ್ಯರೇ, ಈ ಬಾರಿಯ ನೈಸರ್ಗಿಕ ವಿಕೋಪವು ದೇಶದ ಅನೇಕ ಭಾಗಗಳಲ್ಲಿ ಊಹಿಸಲಾಗದ ಬಿಕ್ಕಟ್ಟನ್ನು ಸೃಷ್ಟಿಸಿದೆ. ಇದನ್ನು ಎದುರಿಸುತ್ತಿರುವ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ'' ಎಂದು ಹೇಳಿದರು.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications