ಕೊಚ್ಚಿ, ತಿರುವನಂತಪುರಂ ವಿಮಾನ ನಿಲ್ದಾಣದ ವೆಬ್ ಸೈಟ್ ಗೆ ಕನ್ನ
ತಿರುವನಂತಪುರಂ, ಡಿಸೆಂಬರ್ 28: ಕೊಚ್ಚಿನ್ ಹಾಗೂ ತಿರುವನಂತಪುರಂನ ವಿಮಾನ ನಿಲ್ದಾಣಗಳ ವೆಬ್ ಸೈಟ್ ಗೆ ಕನ್ನ ಹಾಕಲಾಗಿದೆ. ಪಾಕಿಸ್ತಾನದ ಸೈಬರ್ ದಾಳಿಕೋರರ ಕೃತ್ಯ ಎಂದು ಸಂದೇಶ ರವಾನಿಸಲಾಗಿದೆ. ಈ ವೆಬ್ ಸೈಟ್ ಗೆ ಕನ್ನ ಹಾಕಿರುವುದು ಕಾಶ್ಮೀರಿ ಚೀತಾ ಎಂಬ ಒಕ್ಕಣೆಯೂ ಇದೆ.
ಪ್ರಾಥಮಿಕ ತನಿಖೆ ಪ್ರಕಾರ ಬುಧವಾರದ ನಸುಕಿನ ವೇಳೆ ಕನ್ನ ಹಾಕಲಾಗಿದೆ. ಮತ್ತೊಂದು ಸಂದೇಶದಲ್ಲಿ, 'ಹ್ಯಾಕ್ಡ್. ತಂಡ: ಪಾಕಿಸ್ತಾನ್ ಸೈಬರ್ ದಾಳಿಕೋರರು. ನಮ್ಮನ್ನು ಪತ್ತೆಹಚ್ಚುವುದು, ಸೋಲಿಸುವುದು ಅಸಾಧ್ಯ...' ಹೀಗೆ ಸಾಗುತ್ತದೆ. ಸೈಬರ್ ರಕ್ಷಣಾ ಅಧಿಕಾರಿಗಳು ಈ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.[ಮಂಗಳೂರು: ಇ-ಮೇಲ್ ಗೆ ಹ್ಯಾಕರ್ಸ್ ಕನ್ನ, ಲಕ್ಷಗಟ್ಟಲೇ ಕದ್ದರು!]

ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸ್ಪಷನೆ ಇಲ್ಲ ಎಂದು ಗುಪ್ತಚರ ಇಲಾಖೆ ದಳದ ಅಧಿಕಾರಿಗಳು ಒನ್ಇಂಡಿಯಾ ಕನ್ನಡಕ್ಕೆ ಕೇರಳದಿಂದ ಮಾಹಿತಿ ನೀಡಿದ್ದಾರೆ. http://www.cochinairport.com ಮತ್ತು trivandrumairport.com ವೆಬ್ ಸೈಟ್ ಗಳಿಗೆ ಕನ್ನ ಹಾಕಲಾಗಿದೆ. ವಿಮಾನ ಹಾರಾಟ ಸಮಯದ ಪ್ರಮುಖ ಮಾಹಿತಿ ಇರುವ ವೆಬ್ ಸೈಟ್ ಗಳನ್ನು ಸರಿಪಡಿಸುವ ಕೆಲಸ ಮುಂದುವರಿದಿದೆ.[ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಗೆ ಹ್ಯಾಕರ್ಸ್ ಕನ್ನ]
ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂದು ತಿಳಿಯುವ ಸಲುವಾಗಿ ತನಿಖೆ ಕೂಡ ಚುರುಕಾಗಿ ನಡೆಯುತ್ತಿದೆ. ಸೈಬರ್ ರಕ್ಷಣಾ ಸಿಬ್ಬಂದಿ ಪ್ರಕಾರ ಕನ್ನ ಹಾಕಿದವರು ಸ್ಥಳೀಯರಲ್ಲ. ಕೇರಳದ ಹೊರಭಾಗದಿಂದ ಈ ಕೃತ್ಯ ಎಸಗಿದ್ದಾರೆ. ಸದ್ಯಕ್ಕೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಮೊದಲ ಆದ್ಯತೆ ವೆಬ್ ಸೈಟ್ ಕಾರ್ಯನಿರ್ವಹಿಸುವಂತೆ ಮಾಡುವುದಕ್ಕೆ ಎಂದಿದ್ದಾರೆ ಅಧಿಕಾರಿಗಳು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications