ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ವಿರುದ್ಧ ಸಮನ್ಸ್ ನೀಡಲು ಸಂಸದೀಯ ಸಮಿತಿ ನಿರ್ಧಾರ
2024ರ ಲೋಕಸಭಾ ಚುನಾವಣೆಯ ಕುರಿತಂತೆ ಸುಳ್ಳು ಹೇಳಿಕೆ ನೀಡಿರುವ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ಗೆ ಸಮನ್ಸ್ ನೀಡಲು ಸಂಸದೀಯ ಸ್ಥಾತಿ ಸಮಿತಿ ನಿರ್ಧರಿಸಿದೆ. ತಪ್ಪು ಮಾಹಿತಿ ಹರಡಿದ ಕಾರಣಕ್ಕಾಗಿ ಮೆಟಾಗೆ ಸಮನ್ಸ್ ನೀಡಲಾಗುವುದು ಎಂದು ಬಿಜೆಪಿ ಸಂಸದ ಮತ್ತು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸದನ ಸಮಿತಿಯ ಅಧ್ಯಕ್ಷ ನಿಶಿಕಾಂತ್ ದುಬೆ ಮಾಹಿತಿ ನೀಡಿದ್ದಾರೆ.
"ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿರುವ ದೇಶದ ಬಗ್ಗೆ ತಪ್ಪಾಗಿ ಮಾಹಿತಿ ನೀಡುವುದು ದೇಶದ ವರ್ಚಸ್ಸಿಗೆ ಧಕ್ಕೆ ತರುತ್ತದೆ. ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಮೆಟಾ ಸಂಸ್ಥೆ ಸಂಸತ್ತು ಮತ್ತು ಭಾರತೀಯರ ಕ್ಷಮೆ ಯಾಚಿಸಬೇಕು" ಎಂದು ನಿಶಿಕಾಂತ್ ದುಬೆ ಎಕ್ಸ್ನಲ್ಲಿ ತಿಳಿಸಿದ್ದಾರೆ.

ಜುಕರ್ಬರ್ಗ್ ಹೇಳಿದ್ದೇನು?
ಜನವರಿ 10ರಂದು ಪ್ರಸಾರವಾದ ಪಾಡ್ಕ್ಯಾಸ್ಟ್ನಲ್ಲಿ ಮಾತನಾಡಿದ ಫೇಸ್ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ "ಕೋವಿಡ್ ಸಾಂಕ್ರಾಮಿಕವು ಜಗತ್ತಿನಾದ್ಯಂತ ಅಧಿಕಾರದಲ್ಲಿರುವ ಸರ್ಕಾರಗಳ ಮೇಲೆ ಜನರ ನಂಬಿಕೆ ಕಡಿಮೆಯಾಗಲು ಕಾರಣವಾಗಿದೆ ಎಂದು ಹೇಳಿದರು. 2024ರಲ್ಲಿ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಚುನಾವಣೆ ನಡೆದಿದೆ, ಅಧಿಕಾರದಲ್ಲಿದ್ದ ಪಕ್ಷಗಳು ಎಲ್ಲಾ ಕಡೆ ಸೋತಿವೆ. ಹಣದುಬ್ಬರ ಅಥವಾ ಕೋವಿಡ್ ಅನ್ನು ಸರ್ಕಾರಗಳು ಹೇಗೆ ನಿಭಾಯಿಸಿದವು ಎನ್ನುವುದು ಸೋಲಿಗೆ ಕಾರಣವಾಗಿರಬಹುದು. ಜಾಗತಿಕ ಮಟ್ಟದಲ್ಲಿ ಇದು ಪರಿಣಾಮ ಬೀರಿದೆ ಎನಿಸುತ್ತಿದೆ" ಎಂದು ಅವರು ಹೇಳಿದ್ದರು.
ಮಾರ್ಕ್ ಜುಕರ್ಬರ್ಗ್ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಉದಾಹರಣೆಯನ್ನು ತಪ್ಪಾಗಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. 2024ರಲ್ಲಿ ನಡೆದ ಲೋಕಸಭಾ ಚುನಾವಣೆ ಆಡಳಿತಾರೂಢ ಎನ್ಡಿಎ ಒಕ್ಕೂಟ ಮೂರನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಅಶ್ವಿನಿ ವೈಷ್ಣವ್ ಅಸಮಾಧಾನ
ಜುಕರ್ಬರ್ಗ್ ಹೇಳಿಕೆಗೆ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಭಾರತ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ 64 ಕೋಟಿ ಭಾರತೀಯರು ಮತದಾನ ಮಾಡಿದ್ದಾರೆ. ಭಾರತದ ಜನ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಎನ್ಡಿಎ ಮೇಲೆ ನಂಬಿಕೆಯಿಟ್ಟು ಮತ್ತೊಂದು ಅವಕಾಶ ಕೊಟ್ಟಿದ್ದಾರೆ. 2024 ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತಿವೆ ಎಂಬ ಜುಕರ್ಬರ್ಗ್ ಅವರ ಹೇಳಿಕೆ ಸುಳ್ಳು" ಎಂದು ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications