Metro: ಆ ಮಹಿಳೆ ಸಾವಿಗೆ ಕಾರಣವಾಯ್ತ ಸೀರೆ ಸೆರಗು?
ನವದೆಹಲಿ, ಡಿಸೆಂಬರ್, 17: ಸಾಮಾನ್ಯ ಮೆಟ್ರೋಗಳಲ್ಲಿ ಆಗಾಗ ವಿಚಿತ್ರ, ಆಘಾತಕಾರಿ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಹಾಗೆಯೇ ಇದೀಗ ಆಘಾತಕಾರಿ ಘಟನೆಯೊಂದು ದೆಹಲಿ ಮೆಟ್ರೋದಲ್ಲಿ ನಡೆದಿದೆ. ಮೆಟ್ರೋ ರೈಲಿನ ಬಾಗಿಲಿಗೆ ಮಹಿಳೆಯೊಬ್ಬರ ಸೀರೆಯ ಸೆರಗು ಸಿಕ್ಕಿಹಾಕಿಕೊಂಡ ಹಿನ್ನೆಲೆ ಮಹಿಳೆ ರೈಲಿನಿಂದ ಎಳೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದರ್ಲೋಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುರುವಾರ ಇಂದರ್ಲೋಕ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ರೀನಾ (35) ಮೆಟ್ರೋ ರೈಲಿನ ಅಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೂ ಅವರು ಶನಿವಾರ (ಡಿಸೆಂಬರ್ 16) ಮೃತಪಟ್ಟಿದ್ದಾರೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇನ್ನು ಘಟನೆ ಕುರಿತು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಲಿದ್ದಾರೆ ಎಂದು ದೆಹಲಿ ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನುಜ್ ದಯಾಲ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮೃತ ಮಹಿಳೆಯ ಸಂಬಂಧಿಯೊಬ್ಬರು, ರೀನಾ ಅವರು ಪಶ್ಚಿಮ ದೆಹಲಿಯ ನಾಂಗ್ಲೋಯ್ನಿಂದ ಮೋಹನ್ ನಗರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ರೀನಾ ಇಂದರ್ಲೋಕ್ ಮೆಟ್ರೋ ನಿಲ್ದಾಣಕ್ಕೆ ತಲುಪಿ ರೈಲು ಬದಲಾಯಿಸಲು ಮುಂದಾದಾಗ ಅವರ ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಕ್ಕಿಹಾಕಿಕೊಂಡಿದೆ. ಅವರು ಈ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಶನಿವಾರ ಸಂಜೆ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications