Mettur Dam: 100 ಅಡಿ ಭರ್ತಿಯಾದ ಮೆಟ್ಟೂರು ಜಲಾಶಯ; ಒಳಹರಿವು ಎಷ್ಟಿದೆ?
ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ರಾಜ್ಯದ ಪ್ರಮುಖ ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿವೆ. ರಾಜ್ಯದ ಕಾವೇರಿ ನದಿ ಪಾತ್ರದ ಜಲಾಶಯಗಳು ಭರ್ತಿಯಾಗಿದ್ದು, ತಮಿಳುನಾಡಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.
ಮೆಟ್ಟೂರು ಜಲಾಶಯದ ಒಳಹರಿವು ದಿನೇ ದಿನೇ ಹೆಚ್ಚಾಗುತ್ತಿದ್ದು ಭಾರಿ ಪ್ರಮಾಣದಲ್ಲಿ ನೀರು ಸಂಗ್ರವಾಗುತ್ತಿದೆ. ಜುಲೈ 16 ರಂದು ಕೇವಲ 45 ಅಡಿಗಳಷ್ಟಿದ್ದ ನೀರಿನ ಮಟ್ಟ 11 ದಿನಗಳಲ್ಲಿ 100 ಅಡಿಗೆ ಏರಿಕೆಯಾಗಿದೆ. ಈಗಾಗಲೇ ರಾಜ್ಯದ ಕಾವೇರಿ ಕೊಳ್ಳದ ಜಲಾಶಯಗಳು ಭರ್ತಿಯಾಗಿರುವ ಕಾರಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯಲಿದ್ದು, ಕೆಲವೇ ದಿನಗಳಲ್ಲಿ ಮೆಟ್ಟೂರು ಜಲಾಶಯ ಕೂಡ ಭರ್ತಿಯಾಗಲಿದೆ.

ಮೆಟ್ಟೂರು ಜಲಾಶಯದ ನೀರಿನ ಮಟ್ಟ
ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ ಮೆಟ್ಟೂರು ಜಲಾಶಯದ ನೀರಿನ ಮಟ್ಟ 99.110 ಅಡಿಗಳಿಷ್ಟಾಗಿದ್ದು, 93,828 ಕ್ಯೂಸೆಕ್ಸ್ ಒಳಹರಿವು ದಾಖಲಾಗಿದೆ. ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಇದೇ ರೀತಿ ಒಳಹರಿವು ಇದ್ದರೆ 24 ಗಂಟೆಗಳಲ್ಲೇ ಸುಮಾರು 8 ಟಿಎಂಸಿ ನೀರು ಮೆಟ್ಟೂರು ಜಲಾಶಯ ಸೇರಲಿದೆ.
ಮೆಟ್ಟೂರು ಜಲಾಶಯದ ಗರಿಷ್ಠ ನೀರಿನ ಮಟ್ಟ 120 ಅಡಿಗಳಾಗಿದ್ದು, ಇಂದು 100 ಅಡಿಗೆ ತಲುಪಿದೆ. ಜಲಾಶಯದ ಭರ್ತಿಯಾಗಲು ಇನ್ನು 20 ಅಡಿಗಳಷ್ಟು ತುಂಬಬೇಕಿದ್ದು, ಆಗಸ್ಟ್ ಮೊದಲ ವಾರದ ವೇಳೆಗೆ ಜಲಾಶಯ ಭರ್ತಿಯಾಗುವುದು ಬಹುತೇಕ ಖಚಿತವಾಗಿದೆ. ಸದ್ಯ ಜಲಾಶಯದಿಂದ 1000 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದ್ದು, ನದಿಗೆ ನೀರು ಹರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಕೆಆರ್ ಎಸ್ ಜಲಾಶಯದಿಂದ 1.12 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಬಿಳಿಗುಂಡ್ಲುವಿನಲ್ಲಿ ಸದ್ಯ 1.15 ಲಕ್ಷ ಕ್ಯೂಸೆಕ್ಸ್ ನೀರು ಹರಿಯುತ್ತಿರುವುದು ದಾಖಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications