ಕಾವೇರಿ ನದಿಯ ನೀರಿಗೆ ಕಾಯುತ್ತಿದ್ದ ರೈತರಿಗೆ ಕೊನೆಗೂ ಸಿಕ್ಕಿದೆ ಭರ್ಜರಿ ಸುದ್ದಿ!
ಮಳೆಯೇ ಇಲ್ಲದೆ ನರಳಾಡಿ ಹೋಗಿದ್ದ ಕಾವೇರಿ ಕೊಳ್ಳದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಅರೆ ಮಳೆಯೇ ಇಲ್ಲದೆ ಮುಂದಿನ ಬೇಸಿಗೆ ಸಮಯಕ್ಕೆ ಕುಡಿಯುವ ನೀರಿಗೆ ಏನಪ್ಪಾ ಮಾಡೋದು? ಅಂತಾ ಚಿಂತೆಯಲ್ಲಿ ಮುಳುಗಿದ್ದ ಜನರಿಗೆ ವರುಣ ದೇವ ಕೃಪೆ ತೋರಿದ್ದಾನೆ. ಕೃಷಿಗೂ ಭಾರಿ ಪ್ರಮಾಣದಲ್ಲಿ ನೀರು ಸಿಗಲಿದ್ದು, ಇನ್ನೂ ಒಂದು ಬೆಳೆ ಆರಾಮವಾಗಿ ಬೆಳೆಯಬಹುದು ಎಂಬ ವಾತಾವರಣ ಸೃಷ್ಟಿಯಾಗಿದೆ.
ಹೌದು, ಕರ್ನಾಟಕದಲ್ಲಿ ಮಳೆ ಇಲ್ಲದೆ ಕಾವೇರಿ ನದಿ ಬತ್ತಿ ಹೋಗುತ್ತಿದೆ. ಅದರಲ್ಲೂ ನೆರೆ ರಾಜ್ಯ ತಮಿಳುನಾಡು ಕಾವೇರಿ ನೀರಿಗೆ ಸಖತ್ ಕಿರಿಕ್ ಮಾಡಿ, ನಮ್ಮಿಂದ ನೀರನ್ನು ಕಸಿದು ಕೊಂಡು ಹೋಗಿದೆ. ಹೀಗಿದ್ದಾಗ ತಮಿಳುನಾಡು ರಾಜ್ಯಕ್ಕೆ ಭಾರಿ ಪ್ರಮಾಣದ ಮಳೆ ಸುರಿದು, ಅಲ್ಲಿನ ಹಳ್ಳ & ಕೊಳ್ಳ ತುಂಬಿ ತುಳುಕುತ್ತಿವೆ.

ಹಾಗೇ ಕಾವೇರಿ ನದಿಗೆ ತಮಿಳುನಾಡು ರಾಜ್ಯದಲ್ಲಿ ಅಡ್ಡಲಾಗಿ ಕಟ್ಟಿರುವ ಡ್ಯಾಂಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಈ ಮೂಲಕ, ತಮಿಳುನಾಡು ಸಂಕಷ್ಟದಿಂದ ಪಾರಾಗಿದ್ದರೆ. ಕರ್ನಾಟಕದ ಕಾವೇರಿ ಕೊಳ್ಳದ ಜನರು ಈಗ ಸಮಸ್ಯೆಗೆ ಸಿಲುಕಿದ್ದಾರೆ.
ತಮಿಳುನಾಡಿನ ಕಾವೇರಿ ನದಿಗೆ ಭಾರಿ ನೀರು
ಈ ಬಾರಿ ಕರ್ನಾಟಕ ವರುಣನ ಶಾಪದಿಂದ ತತ್ತರಿಸಿದ್ದರೆ ನೆರೆ ರಾಜ್ಯ ತಮಿಳುನಾಡು ಭಾರಿ ಮಳೆಗೆ ಬೆಚ್ಚಿಬಿದ್ದಿದೆ. ಅದರಲ್ಲೂ ಎರಡೆರಡು ಬಾರಿ ಸೈಕ್ಲೋನ್ ಹಾವಳಿಗೆ ಸಿಲುಕಿ ನಲುಗಿ ಹೋಗಿರುವ ತಮಿಳುನಾಡಿನ ಡ್ಯಾಂಗಳು ಮತ್ತು ಜಲಪಾತಗಳು ತುಂಬಿ ಹರಿಯುತ್ತಿವೆ. ಈ ಸಮಯದಲ್ಲೇ ಕಾವೇರಿ ಕೊಳ್ಳದಲ್ಲಿ ಕೂಡ ಭಾರಿ ಪ್ರಮಾದ ನೀರು ಹರಿದು ಬರುತ್ತಿದೆ. ಇದೇ ರೀತಿ ಕಾವೇರಿ ಕೋಳ್ಳದ ಅತಿ ದೊಡ್ಡ ಜಲಾಶಯ ಎನಿಸಿಕೊಂಡಿರುವ, ಪ್ರತಿಬಾರಿ ಕಾವೇರಿ ನದಿ ನೀರಿನ ವಿಚಾರಕ್ಕೆ ಕಿರಿಕ್ ಆದಾಗಲೂ ಗಮನ ಸೆಳೆಯುವ ಮೆಟ್ಟೂರು ಡ್ಯಾಂ ಇದೀಗ ತುಂಬಿ ತುಳುಕಲು ಆರಂಭಿಸಿದೆ.

ಕಾವೇರಿ ನದಿಯ ಡ್ಯಾಂನ ಮಟ್ಟ ಇಷ್ಟು!
ಹೌದು, ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಸೈಕ್ಲೋನ್ ಹಾವಳಿ ಹಿನ್ನೆಲೆ ತಮಿಳುನಾಡು ಸೇರಿದಂತೆ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಹೀಗೆ ಸುಮಾರು 120 ಅಡಿ ಇರುವ ಮೆಟ್ಟೂರು ಜಲಾಶಯದಲ್ಲಿ 70.30 ಅಡಿ ನೀರು ಸಂಗ್ರಹವಾಗಿದೆ. 1,978 ಕ್ಯುಸೆಕ್ ಒಳಹರಿವು ದಾಖಲಾಗಿದ್ದು, 2,753 ಕ್ಯುಸೆಕ್ಗೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಈ ಮೂಲಕ ನೆರೆ ರಾಜ್ಯ ತಮಿಳುನಾಡು ನೀರಿನ ಸಮಸ್ಯೆಯಿಂದ ಮುಕ್ತವಾಗುತ್ತಿದೆ.
ಕರ್ನಾಟಕದಲ್ಲಿ ಆವರಿಸಿದ ಬರದ ಛಾಯೆ
ಇಷ್ಟೆಲ್ಲದರ ನಡುವೆ ಕಾವೇರಿ ನದಿ ಹುಟ್ಟುವ ಕರ್ನಾಟಕದಲ್ಲಿ ಮಾತ್ರ ಈಗಲೂ ಬರ, ಬರ ಎನ್ನುವಂತಾಗಿದೆ. ಯಾಕಂದ್ರೆ ಈಗಲೂ ಕರ್ನಾಟಕದಲ್ಲಿ ಉತ್ತಮವಾಗಿ ಮಳೆ ಬಿದ್ದಿಲ್ಲ. ಈ ಹಿನ್ನೆಲೆ ಕನ್ನಡಿಗರು ಮುಂದಿನ ದಿನಗಳಲ್ಲಿ ಭಾರಿ ನೀರಿನ ಕೊರತೆ ಎದುರಿಸುವ ಸ್ಥಿತಿ ಕೂಡ ನಿರ್ಮಾಣವಾಗಿದೆ. ಅದರಲ್ಲೂ ಕಾವೇರಿ ನದಿ ಕೊಳ್ಳದಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣವಾಗಿ ರೈತರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಕೈಮೀರಿ ಹೋಗುವ ಸಾಧ್ಯತೆ ಇದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications