ಶಾಲೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ 'ರಾಷ್ಟ್ರಗೀತೆ' ಮೊದಲು ಮೊಳಗುತ್ತೆ 'ವಂದೇ ಮಾತರಂ' ಗೀತೆ: ಕೇಂದ್ರದಿಂದ ಮಾರ್ಗಸೂಚಿ
ನವದೆಹಲಿ: ಐತಿಹಾಸಿಕ 'ವಂದೇ ಮಾತರಂ' ಗೀತೆಗೆ 150 ಪೂರ್ಣಗೊಂಡು ಅರ್ಥಪೂರ್ಣ ಆಚರಣೆ ಬೆನ್ನಲ್ಲೆ ಕೇಂಧ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಕಾರ್ಯಕ್ರಮಗಳು, ಶಾಲೆಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ರಾಷ್ಟ್ರೀಯ ಗೀತೆಯಾದ 'ವಂದೇ ಮಾತರಂ ಗೀತೆ'ಯನ್ನು ನುಡಿಸಬೇಕು ಅಥವಾ ಹಾಡಬೇಕು ಎಂದು ಸೂಚಿಸಿ ಇಂದು ಬುಧವಾರ (ಫೆಬ್ರವರಿ 11) ಕೇಂದ್ರ ಮಾರ್ಗಸೂಚಿ ಹೊರಡಿಸಿದೆ.
ರಾಷ್ಟ್ರಗೀತೆ ಮೊದಲು 'ವಂದೇ ಮಾತರಂ' ನುಡಿಸಬೇಕೆಂದು ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ ಹೊಸ ನಿಯಮ ಜಾರಿಗೆ ತಂದಿರುವುದಾಗಿ ತಿಳಿಸಿದೆ. ಈ ಹೊಸ ನಿಯಮಗಳ ಪ್ರಕಾರ 'ವಂದೇ ಮಾತರಂ' ನುಡಿಸುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾದ ಗೌರವವು ಈ 'ವಂದೇ ಮಾತರಂ'ಗೂ (ರಾಷ್ಟ್ರೀಯ ಗೀತೆ) ನೀಡುವ ಉದ್ದೇಶದಿಂದ ಈ ಹೊಸ ಮಾರ್ಗಸೂಚಿ ನೀಡಿರುವುದಾಗಿ ತಿಳಿಸಿದೆ.

ಶಾಲೆ, ಕಾಲೇಜುಗಳು, ಸರ್ಕಾರ ಕಾರ್ಯಕ್ರಮಗಳು, ಪದ್ಮ ಪ್ರಶಸ್ತಿಗಳಂತಹ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ರಾಷ್ಟ್ರಪತಿಗಳು ಭಾಗವಹಿಸುವ ಎಲ್ಲಾ ಇತರ ಕಾರ್ಯಕ್ರಮಗಳಲ್ಲಿ ಹಾಗೂ ಆಗಮನ ಮತ್ತು ನಿರ್ಗಮನದ ಸಂದರ್ಭಗಳಲ್ಲಿ ರಾಷ್ಟ್ರೀಯ ಗೀತೆಯನ್ನು ನುಡಿಸಬೇಕು. ಈ ಸಂದರ್ಭದಲ್ಲಿ ಎದ್ದು ನಿಲ್ಲುವುದು ಕಡ್ಡಾಯವಲ್ಲದಿದ್ದರೂ, ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಇದನ್ನು ನುಡಿಸಬೇಕು.
1937 ರಲ್ಲಿ ಕಾಂಗ್ರೆಸ್ ತೆಗೆದು ಹಾಕಿದ ನಾಲ್ಕು ಸೇರಿದಂತೆ ಎಲ್ಲಾ ಆರು ಚರಣಗಳು ಸೇರಿಸಿ ವಂದೇ ಮಾತರಂ ಹಾಡಲಾಗುತ್ತದೆ. ಕಾನೂನಿನಡಿಯಲ್ಲಿ, ರಾಷ್ಟ್ರಗೀತೆಯನ್ನು (ಮತ್ತು ಈಗಿನ ರಾಷ್ಟ್ರೀಯ ಗೀತೆ) ಅಡ್ಡಿಪಡಿಸುವ ಅಥವಾ ಇತರರು ಗೌರವಿಸುವುದನ್ನು ತಡೆದರೆ ಅಂತಹ ವ್ಯಕ್ತಿ ಯಾರೇ ಆಗಿದ್ದರು ಸರಿ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು ಎಂದು ಹೊಸ ನಿಯಮಗಳಲ್ಲಿ ತಿಳಿಸಲಾಗಿದೆ.
ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ
ವಂದೇ ಮಾತರಂ ಗೀತೆಯನ್ನು ಹಾಡುವುದು ಕಡ್ಡಾಯ ಮಾಡಿ ಹೊರಡಿಸಿರುವ ಮಾರ್ಗಸೂಚಿ/ ನಿರ್ದೇಶನವನ್ನು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ರವಾನಿಸಿದೆ.
ವಂದೇ ಮಾತರಂ ಹಾಡಲು ಇವತ್ತಿನ ವರೆಗೆ ಯಾವುದೇ ಅಧಿಕೃತ ಶಿಷ್ಟಾಚಾರ ಇರಲಿಲ್ಲ. ಆದರೆ ಜನ ಗಣ ಮನ ಗೀತೆಗೆ ರಾಗ, ಸಮಯ ಮತ್ತು ಗಾಯನದ ಬಗ್ಗೆ ಸ್ಪಷ್ಟ ನಿಯಮಗಳು ಇದ್ದವು. ಅದರ ಸಮಯ ಕುರಿತು ಇತ್ತೀಚೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಾಡಿನ ವಿಸ್ಕೃತ, ಆರು-ಚರಣಗಳ ಆವೃತ್ತಿಯನ್ನ ಇಲ್ಲಿಯವರೆಗೆ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಿರಲಿಲ್ಲ, ಆದರೆ ಈಗ ಅದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications