ಮಧ್ಯಪ್ರಾಚ್ಯ ಯುದ್ಧ: ಗ್ಯಾಸ್ ಸಿಲಿಂಡರ್, ಪೆಟ್ರೋಲ್ - ಡಿಸೇಲ್ ಸೇರಿದಂತೆ ಪ್ರಮುಖ ವಸ್ತುಗಳ ಬಗ್ಗೆ ಕೇಂದ್ರದಿಂದ ಮಹತ್ವದ ಆದೇಶ
War Impact: ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳು ಮತ್ತು ನೈಸರ್ಗಿಕ ಅನಿಲದ ಲಭ್ಯತೆ, ಪೂರೈಕೆ ಮತ್ತು ಸಮಾನ ವಿತರಣೆಯನ್ನು ನಿಯಂತ್ರಿಸಲು ಭಾರತ ಸರ್ಕಾರವು 1955 ರ ಅಗತ್ಯ ಸರಕುಗಳ ಕಾಯ್ದೆಯನ್ನು ಜಾರಿಗೊಳಿಸಿದೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆಯು ಭಾರೀ ಹೆಚ್ಚಳವಾಗಿದೆ. ಇದರ ಬಿಸಿಯು ಇದೀಗ ಭಾರತದ ಮೇಲೂ ಆಗಲು ಪ್ರಾರಂಭವಾಗಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ. ಇದೀಗ ಇಂಧನ ಪೂರೈಕೆಯ ಮೇಲೆ ಒತ್ತಡ ಹೇರುತ್ತಿರುವುದರಿಂದ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಮಹತ್ವದ ಕ್ರಮವನ್ನು ತೆಗೆದುಕೊಂಡಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಇಂಧನ ಸರಬರಾಜಿನ ಮೇಲೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮಂಗಳವಾರ ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಕಾಯ್ದೆ (Essential Commodities Act) ಜಾರಿಗೆ ತಂದಿದೆ. ಈ ಮೂಲಕ ಮನೆ ಬಳಕೆಯ ಅಡುಗೆ ಅನಿಲ (LPG) ಸರಬರಾಜು ಅಡ್ಡಿಯಾಗದಂತೆ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ತೈಲ ಶುದ್ಧೀಕರಣ ಘಟಕಗಳು ಮತ್ತು ಪೆಟ್ರೋಕೆಮಿಕಲ್ ಘಟಕಗಳು ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಆದೇಶ ಮಾಡಿದೆ.
ಸರ್ಕಾರದ ಆದೇಶದ ಪ್ರಕಾರ ಕೆಲವು ಕ್ಷೇತ್ರಗಳಿಗೆ ನೈಸರ್ಗಿಕ ಅನಿಲ (Natural Gas) ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ. ಮನೆಗಳಿಗೆ ಪೈಪ್ ಮೂಲಕ ಸರಬರಾಜು ಮಾಡುವ ಅನಿಲ (PNG), ವಾಹನಗಳಿಗೆ ಬಳಸುವ ಸಿಎನ್ಜಿ (CNG), ಎಲ್ಪಿಜಿ ಉತ್ಪಾದನೆ, ಪೈಪ್ಲೈನ್ ಕಾರ್ಯಾಚರಣೆಗಳಿಗೆ ಬೇಕಾದ ಇಂಧನ ಮುಂತಾದ ಕ್ಷೇತ್ರಗಳಿಗೆ ಕಳೆದ 6 ತಿಂಗಳ ಸರಾಸರಿ ಬಳಕೆಯ 100% ಮಟ್ಟದ ಸರಬರಾಜು ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಪ್ರಮುಖ ನಿರ್ದೇಶನ ನೀಡಿದೆ.
ಮುಂದುವರಿದು ರಸಗೊಬ್ಬರ ಕಾರ್ಖಾನೆಗಳಿಗೆ ಕಳೆದ 6 ತಿಂಗಳ ಸರಾಸರಿ ಬಳಕೆಯ ಶೇ.70 ಮಟ್ಟದ ಅನಿಲ ಪೂರೈಕೆ ಮಾಡುವಂತೆ ತಿಳಿಸಲಾಗಿದೆ. ಚಹಾ ಉದ್ಯಮಗಳು, ತಯಾರಿಕಾ ಘಟಕಗಳು ಹಾಗೂ ಇತರೆ ಕೈಗಾರಿಕೆಗಳಿಗೆ ರಾಷ್ಟ್ರೀಯ ಅನಿಲ ಜಾಲದ ಮೂಲಕ ಸುಮಾರು ಶೇ.80 ಮಟ್ಟದ ಅನಿಲ ಪೂರೈಕೆ ನೀಡಲಾಗುತ್ತದೆ. ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ಕಂಪನಿಗಳಿಗೂ ತಮ್ಮ ಜಾಲದ ಮೂಲಕ ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರಿಗೆ ಶೇ. 80 ಸರಬರಾಜು ಇರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಮಹತ್ವದ ಆದೇಶ
ಇನ್ನು ದೇಶದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಸರಬರಾಜಿನಲ್ಲಿ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಸೂಚನೆಯನ್ನು ಕೇಂದ್ರ ಸರ್ಕಾರವು ಇದೇ ಸಂದರ್ಭದಲ್ಲಿ ನೀಡಿದೆ. ಎಲ್ಎನ್ಜಿ (LNG) ಸರಬರಾಜಿನಲ್ಲಿ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ತೈಲ ಶುದ್ಧೀಕರಣ ಕಂಪನಿಗಳಿಗೆ ನೀಡುವ ಅನಿಲ ಹಂಚಿಕೆಯನ್ನು ಕಳೆದ 6 ತಿಂಗಳ ಸರಾಸರಿಯ ಸುಮಾರು ಶೇ.65 ಕಡಿಮೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಅನಿಲ ಉತ್ಪಾದಕರು, ಆಮದುದಾರರು, ಸಾಗಣೆದಾರರು ಹಾಗೂ ಮಾರಾಟಗಾರರು ತಮ್ಮ ಉತ್ಪಾದನೆ, ಆಮದು, ಸಂಗ್ರಹ, ಸರಬರಾಜು ಮತ್ತು ಬಳಕೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕು ಎಂದು ಆದೇಶಿಸಲಾಗಿದೆ.
ಇದೇ ವೇಳೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತೈಲ ಶುದ್ಧೀಕರಣ ಘಟಕಗಳಿಗೆ ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸುವುದಕ್ಕೆ ಹೇಳಲಾಗಿದೆ. ಮುಂದುವರಿದು ಅದನ್ನು ಮನೆ ಬಳಕೆಗೆ ಆದ್ಯತೆಯಿಂದ ನೀಡಲು ಸೂಚಿಸಲಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಇರುವುದರಿಂದ ದೇಶದ ಜನರಿಗೆ ಎಲ್ಪಿಜಿ ಕೊರತೆ ಆಗದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದು ಮಹತ್ವದ ಕ್ರಮವಾಗಿ ಗ್ರಾಹಕರು ಅತಿಯಾಗಿ ಸಿಲಿಂಡರ್ ಬುಕ್ಕಿಂಗ್ ಮಾಡುವುದು ಮತ್ತು ಮಧ್ಯವರ್ತಿ /ಕಾಳಸಂತೆ ತಡೆಯಲು ಸಿಲಿಂಡರ್ ಬುಕ್ಕಿಂಗ್ ನಡುವಿನ ಅವಧಿಯನ್ನು 25 ದಿನಗಳಿಗೆ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications