ಅತ್ಯಾಚಾರ ಪ್ರಕರಣ ಖಂಡಿಸಿ ಕಾಂಗ್ರೆಸ್ಸಿನಿಂದ ಮಧ್ಯರಾತ್ರಿ ಪ್ರತಿಭಟನೆ
ನವದೆಹಲಿ, ಏಪ್ರಿಲ್ 13: ಉತ್ತರ ಪ್ರದೇಶದ ಉನ್ನಾವೋ ಮತ್ತು ಜಮ್ಮು-ಕಾಶ್ಮೀರದ ಕತುವಾದಲ್ಲಿ ಅಪ್ರಾಪ್ತೆಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮಧ್ಯರಾತ್ರಿ ಧರಣಿ ನಡೆಸಿದರು.
ದೆಹಲಿಯ ಇಂಡಿಯಾ ಗೇಟ್ ಬಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಮುಂದಾಳತ್ವದಲ್ಲಿ ಹಲವು ಕಾಂಗ್ರೆಸ್ ಮುಖಂಡರು ನಡೆಸಿದ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಪಾಲ್ಗೊಂಡು, ಮೊಂಬತ್ತಿ ಬೆಳಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಈ ಪ್ರತಿಭಟನೆ ರಾಜಕೀಯ ಉದ್ದೇಶದ್ದಲ್ಲ, ಇದೊಂದು ರಾಷ್ಟ್ರೀಯ ವಿಷಯ, 'ಬೇಟಿ ಬಚಾವೋ' ಎನ್ನುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಬದ್ಧವಾಗಿಲ್ಲ" ಎಂದು ಆವರು ಕಿಡಿಕಾರಿದರು.

'ಭಾರತದಲ್ಲಿ ಮಹಿಳೆಯರು ಮನೆಯಿಂದ ಆಚೆ ಬರುವುದಕ್ಕೇ ಹೆದರುತ್ತಿದ್ದಾರೆ. ಎಲ್ಲಿ ನೋಡಿದರೂ ಅತ್ಯಾಚಾರ, ಕೊಲೆಯ ಸುದ್ದಿ ಕೇಳುತ್ತಿದೆ. ಇಂಥ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಹೇಗೆ ಹೇಳುವುದು' ಎಂದು ಅವರು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಅಜಯ್ ಮಕೆನ್ ಮುಂತಾದವರಿದ್ದರು.
ಉತ್ತರ ಪ್ರದೇಶದ ಉನ್ನಾವೋದಲ್ಲಿ ಈ ಕ್ಷೇತ್ರದ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದು ಈ ಪ್ರಕರಣವನ್ನು ಈಗಾಗಲೇ ಸಿಬಿಐ ಗೆ ವಹಿಸಲಾಗಿದೆ. ಇಂದು ಬೆಳಿಗ್ಗೆಯಷ್ಟೇ ಸೆನ್ಗಾರ್ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಜಮ್ಮು ಕಾಶ್ಮೀರದ ಕತುವಾ ಎಂಬಲ್ಲಿ ಜನವರಿ ತಿಂಗಳಿನಲ್ಲಿ ಒಂಬತ್ತು ವರ್ಷದ ಮಗುವನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ನ್ಯಾಯ ನೀಡುವಂತೆ ಜಮ್ಮು-ಕಾಶ್ಮೀರದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications