ಕಾಶ್ಮೀರದ ಉಗ್ರರು, ಯುವಕರಿಗೆ ಪಾಕ್ ಕಡೆಯಿಂದ ನೇರ ಸೂಚನೆ!
ಇತ್ತೀಚೆಗಿನ ಕಾರ್ಯಾಚರಣೆಗಳಲ್ಲಿ ಬಂಧಿತವಾಗಿರುವ ಉಗ್ರರು ಹಾಗೂ ಕಲ್ಲು ತೂರಾಟ ನಡೆಸುತ್ತಿದ್ದ ಯುವಕರ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿತ್ತು. ಕರೆಗಳ ತನಿಖೆಯಲ್ಲಿ ಪಾಕಿಸ್ತಾನದಿಂದಲೇ ನೇರ ನಿರ್ದೇಶನ ಬರುತ್ತಿದ್ದುದು ಸ್ಪಷ್ಟವಾಗಿದೆ.
ಶ್ರೀನಗರ, ಏಪ್ರಿಲ್ 3: ಜಮ್ಮು ಕಾಶ್ಮೀರದಲ್ಲಿ ಸಕ್ರಿಯವಾಗುವ ಉಗ್ರರಿಗೆ ಹಾಗೂ ಅಲ್ಲಿನ ಗಲಭೆಗಳಲ್ಲಿ ಕಲ್ಲು ತೂರಾಟ ನಡೆಸುವ ಯುವಕರಿಗೆ ಪಾಕಿಸ್ತಾನದಲ್ಲಿರುವ ಭಾರತ ವಿರೋಧಿ ಗುಂಪುಗಳ ನಾಯಕರಿಂದ ಮೊಬೈಲ್ ಫೋನ್ ಗಳ ಮೂಲಕ ನೇರವಾಗಿ ಸಲಹೆ, ಸೂಚನೆಗಳು ಲಭ್ಯವಾಗುತ್ತಿವೆ ಎಂಬ ಆಘಾತಕಾರಿ ವಿಚಾರ ಬಯಲಿಗೆ ಬಂದಿದೆ.
ಇತ್ತೀಚೆಗಿನ ಕಾರ್ಯಾಚರಣೆಗಳಲ್ಲಿ ಬಂಧಿತವಾಗಿರುವ ಉಗ್ರರು ಹಾಗೂ ಕಲ್ಲು ತೂರಾಟ ನಡೆಸುತ್ತಿದ್ದ ಯುವಕರ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿತ್ತು.[ದೇಶದ ಅತೀ ದೊಡ್ಡ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ]

ಈ ಮೊಬೈಲ್ ಫೋನ್ ಗಳಲ್ಲಿನ ಕರೆಗಳನ್ನು ಜಮ್ಮು ಕಾಶ್ಮೀರ ಪೊಲೀಸರು ತನಿಖೆಗೊಳಪಡಿಸಿದಾಗ ಈ ವಿಚಾರ ಬಹಿರಂಗಗೊಂಡಿದೆ.[ಟೂರಿಸಂ ಬೇಕಾ ಟೆರರಿಸಂ ಬೇಕಾ?: ಕಾಶ್ಮೀರಿಗಳಿಗೆ ಮೋದಿ ಪ್ರಶ್ನೆ]
2010ರಿಂದ ಕಾಶ್ಮೀರದಲ್ಲಿ ಬುಡಮೇಲು ಕೃತ್ಯಗಳನ್ನು ನಡೆಸುತ್ತಿದ್ದ ಮಸಾರತ್ ಅಲಿ ಎಂಬಾತನನ್ನು ಇತ್ತೀಚೆಗೆ ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದವು. ಆತನಿಂದ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವುಗಳಲ್ಲಿನ ಕರೆ ವಿವರಗಳನ್ನು ಪರಿಶೀಲಿಸಿದಾಗ ಆತನಿಗೆ ಪಾಕಿಸ್ತಾನದಿಂದ ಸಂದೇಶಗಳು ರವಾನೆಯಾಗಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಆ ಕರೆಗಳನ್ನು ಸಂಪೂರ್ಣವಾಗಿ ಆಲಿಸಿರುವ ಪೊಲೀಸರು ಮಸಾರತ್ ಅವರಿಗೆ ಪಾಕಿಸ್ತಾನದಿಂದಲೇ ಸಂದೇಶಗಳು ಬಂದಿರುವ ಹೊಸ ಪುರಾವೆಗಳನ್ನು ಸಾಬೀತುಪಡಿಸಲು ಸಾಧ್ಯವಾಯಿತು.
ಈ ಘಟನೆಯು ಈಗ ಸಿಕ್ಕಿಬಿದ್ದಿರುವ ಅನೇಕ ಯುವಕರ ಮೊಬೈಲ್ ಕರೆಗಳ ಬಗ್ಗೆಯೂ ತನಿಖೆ ನಡೆಸಲು ಪೊಲೀಸರನ್ನು ಪ್ರೇರೇಪಿಸಿತ್ತು. ಈ ಹಿನ್ನೆಲೆಯಲ್ಲಿ, ನಡೆಸಲಾದ ತನಿಖೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲಾ ಬುಡಮೇಲು ಕೃತ್ಯಗಳಿಗೂ ಪಾಕಿಸ್ತಾನದಿಂದಲೇ ನೇರ ನಿರ್ದೇಶನ ಬರುತ್ತಿದ್ದುದು ಸ್ಪಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications