ಕಾಶ್ಮೀರದ ಉಗ್ರರು, ಯುವಕರಿಗೆ ಪಾಕ್ ಕಡೆಯಿಂದ ನೇರ ಸೂಚನೆ!
ಇತ್ತೀಚೆಗಿನ ಕಾರ್ಯಾಚರಣೆಗಳಲ್ಲಿ ಬಂಧಿತವಾಗಿರುವ ಉಗ್ರರು ಹಾಗೂ ಕಲ್ಲು ತೂರಾಟ ನಡೆಸುತ್ತಿದ್ದ ಯುವಕರ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿತ್ತು. ಕರೆಗಳ ತನಿಖೆಯಲ್ಲಿ ಪಾಕಿಸ್ತಾನದಿಂದಲೇ ನೇರ ನಿರ್ದೇಶನ ಬರುತ್ತಿದ್ದುದು ಸ್ಪಷ್ಟವಾಗಿದೆ.
ಶ್ರೀನಗರ, ಏಪ್ರಿಲ್ 3: ಜಮ್ಮು ಕಾಶ್ಮೀರದಲ್ಲಿ ಸಕ್ರಿಯವಾಗುವ ಉಗ್ರರಿಗೆ ಹಾಗೂ ಅಲ್ಲಿನ ಗಲಭೆಗಳಲ್ಲಿ ಕಲ್ಲು ತೂರಾಟ ನಡೆಸುವ ಯುವಕರಿಗೆ ಪಾಕಿಸ್ತಾನದಲ್ಲಿರುವ ಭಾರತ ವಿರೋಧಿ ಗುಂಪುಗಳ ನಾಯಕರಿಂದ ಮೊಬೈಲ್ ಫೋನ್ ಗಳ ಮೂಲಕ ನೇರವಾಗಿ ಸಲಹೆ, ಸೂಚನೆಗಳು ಲಭ್ಯವಾಗುತ್ತಿವೆ ಎಂಬ ಆಘಾತಕಾರಿ ವಿಚಾರ ಬಯಲಿಗೆ ಬಂದಿದೆ.
ಇತ್ತೀಚೆಗಿನ ಕಾರ್ಯಾಚರಣೆಗಳಲ್ಲಿ ಬಂಧಿತವಾಗಿರುವ ಉಗ್ರರು ಹಾಗೂ ಕಲ್ಲು ತೂರಾಟ ನಡೆಸುತ್ತಿದ್ದ ಯುವಕರ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿತ್ತು.[ದೇಶದ ಅತೀ ದೊಡ್ಡ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ]

ಈ ಮೊಬೈಲ್ ಫೋನ್ ಗಳಲ್ಲಿನ ಕರೆಗಳನ್ನು ಜಮ್ಮು ಕಾಶ್ಮೀರ ಪೊಲೀಸರು ತನಿಖೆಗೊಳಪಡಿಸಿದಾಗ ಈ ವಿಚಾರ ಬಹಿರಂಗಗೊಂಡಿದೆ.[ಟೂರಿಸಂ ಬೇಕಾ ಟೆರರಿಸಂ ಬೇಕಾ?: ಕಾಶ್ಮೀರಿಗಳಿಗೆ ಮೋದಿ ಪ್ರಶ್ನೆ]
2010ರಿಂದ ಕಾಶ್ಮೀರದಲ್ಲಿ ಬುಡಮೇಲು ಕೃತ್ಯಗಳನ್ನು ನಡೆಸುತ್ತಿದ್ದ ಮಸಾರತ್ ಅಲಿ ಎಂಬಾತನನ್ನು ಇತ್ತೀಚೆಗೆ ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದವು. ಆತನಿಂದ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವುಗಳಲ್ಲಿನ ಕರೆ ವಿವರಗಳನ್ನು ಪರಿಶೀಲಿಸಿದಾಗ ಆತನಿಗೆ ಪಾಕಿಸ್ತಾನದಿಂದ ಸಂದೇಶಗಳು ರವಾನೆಯಾಗಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಆ ಕರೆಗಳನ್ನು ಸಂಪೂರ್ಣವಾಗಿ ಆಲಿಸಿರುವ ಪೊಲೀಸರು ಮಸಾರತ್ ಅವರಿಗೆ ಪಾಕಿಸ್ತಾನದಿಂದಲೇ ಸಂದೇಶಗಳು ಬಂದಿರುವ ಹೊಸ ಪುರಾವೆಗಳನ್ನು ಸಾಬೀತುಪಡಿಸಲು ಸಾಧ್ಯವಾಯಿತು.
ಈ ಘಟನೆಯು ಈಗ ಸಿಕ್ಕಿಬಿದ್ದಿರುವ ಅನೇಕ ಯುವಕರ ಮೊಬೈಲ್ ಕರೆಗಳ ಬಗ್ಗೆಯೂ ತನಿಖೆ ನಡೆಸಲು ಪೊಲೀಸರನ್ನು ಪ್ರೇರೇಪಿಸಿತ್ತು. ಈ ಹಿನ್ನೆಲೆಯಲ್ಲಿ, ನಡೆಸಲಾದ ತನಿಖೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲಾ ಬುಡಮೇಲು ಕೃತ್ಯಗಳಿಗೂ ಪಾಕಿಸ್ತಾನದಿಂದಲೇ ನೇರ ನಿರ್ದೇಶನ ಬರುತ್ತಿದ್ದುದು ಸ್ಪಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications