ಹೆದ್ದಾರಿಗಳಲ್ಲಿ ಆತಂಕ ಸೃಷ್ಟಿ- ಉಗ್ರರ ಹೊಸ ಸಂಚು
ಬೆಂಗಳೂರು, ಅಕ್ಟೋಬರ್ 13: ಭಾರತದಲ್ಲಿರುವ ರಾಷ್ಟ್ರೀಯ ಸ್ಮಾರಕಗಳ ಧ್ವಂಸ ಹಾಗೂ ರಾಷ್ಟೀಯ ಹೆದ್ದಾರಿಗಳು ಈಗ ಉಗ್ರದ ಹೊಸ ಟಾರ್ಗೆಟ್ ಗಳಾಗಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ತನಕ, ಗುಜರಾತಿನಿಂದ ಅರುಣಾಚಲ ಪ್ರದೇಶದ ತನಕದ ಹೆದ್ದಾರಿಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಯೋಜನೆ ಹಾಕಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮೂಲಕ ಭಾರತಕ್ಕೆ ನುಸುಳಲು ಈ ಉಗ್ರರ ಗುಂಪು ಯತ್ನಿಸುತ್ತಿದೆ. ಆದರೆ, ಸತತ ಪ್ರಯತ್ನದಿಂದ ವಿಫಲರಾಗಿದ್ದು, ಈಗ ಈಶಾನ್ಯ ಭಾರತದ ಮೂಲಕ ಪ್ರವೇಶಿಸಲು ಯತ್ನಿಸುತ್ತಿರುವ ವಿಷಯ ಬಹಿರಂಗವಾಗಿದೆ.
ಹೆದ್ದಾರಿಗಳಲ್ಲಿ ಸುರಕ್ಷತೆ: ಭಾರತದ ಅನೇಕ ಹೆದ್ದಾರಿಗಳಲ್ಲಿ ಸುರಕ್ಷತೆ ಅಲ್ಪ ಪ್ರಮಾಣದಲ್ಲಿರುತ್ತದೆ. ಅಲ್ಲಲ್ಲಿ ಚೆಕ್ ಪೋಸ್ಟ್ ಗಳು ಇರುವುದು ಬಿಟ್ಟರೆ ಯಾವುದೇ ಭದ್ರತೆ ಇರುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಮಾದರಿಯಲ್ಲಿ ಕಾರ್ಯಾಚಾರಣೆ ನಡೆಸಲು ಹೊಂಚು ಹಾಕುತ್ತಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ನಂತರದ ಬೆಳವಣಿಗೆ: ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರಾಂತ್ಯದಲ್ಲಿ ನಡೆದ ಕಾರ್ಯಾಚರಣೆ ನಂತರ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ಸ್ಟ್ರೈಕ್ ಯಶಸ್ವಿಯಾಗಿದ್ದು ಉಗ್ರರನ್ನು ಕಂಗಾಲಾಗುವಂತೆ ಮಾಡಿದೆ. ಇದಕ್ಕೆ ಪ್ರತಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಹಲವು ಬಾರಿ ಎಚ್ಚರಿಕೆ ನೀಡಿದೆ.
ಸ್ಮಾರಕಗಳಿಗೆ ರಕ್ಷಣೆ: ಈಗಾಗಲೇ ರಾಷ್ಟ್ರೀಯ ಸ್ಮಾರಕಗಳ ಬಳಿ ಸೆಲ್ಫಿ ತೆಗೆಸಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಭದ್ರತೆ ಹೆಚ್ಚು ಮಾಡಲಾಗಿದೆ. 2000 ಇಸವಿಯಲ್ಲಿ ಲಷ್ಕರ್ ಇ ತೋಯ್ಬಾ ಉಗ್ರರು ಕೆಂಪು ಕೋಟೆ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ವಿಫಲರಾಗಿದ್ದರು. ಆದರೆ ಇಬ್ಬರು ಯೋಧರು ಹುತಾತ್ಮರಾದರೆ, ಒಬ್ಬ ನಾಗರಿಕ ಮೃತ ಪಟ್ಟಿದ್ದ ಘಟನೆ ನಡೆದಿತ್ತು.
ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆ ಬಳಿ ತ್ರಿವರ್ಣ ಧ್ವಜವನ್ನು ಪ್ರಧಾನಿ ಹಾರಿಸುತ್ತಾರೆ. ಇದು ಭಾರತೀಯರ ಹೆಮ್ಮೆಯ ವಿಷಯ. ಇದಕ್ಕೆ ಸರಿಯಾದ ಪೆಟ್ಟು ನೀಡಬೇಕು ಎಂಬುದು ಉಗ್ರರ ಉದ್ದೇಶ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. (ಒನ್ಇಂಡಿಯಾ ಸುದ್ದಿ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications