ಎರಡು ದಿನ ದೆಹಲಿ ಪ್ರವಾಸ: ಮಹತ್ವದ ಮಾಹಿತಿ ನೀಡಿದ ಸಚಿವ ಎಂ ಬಿ ಪಾಟೀಲ್
ನವದೆಹಲಿ, ಸೆಪ್ಟೆಂಬರ್ 11: ಮುಂಬರುವ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ, ಜರ್ಮನಿ ಮತ್ತು ದಕ್ಷಿಣ ಕೊರಿಯಾ ದೇಶಗಳ ಹೈಕಮಿಷನರುಗಳನ್ನು ಭೇಟಿ ಮಾಡಿ, ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಉದ್ದೇಶಿತ ಸಮಾವೇಶಕ್ಕೆ ಪೂರ್ವಭಾವಿಯಾಗಿ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಅವರು, ಬುಧವಾರ ಕರ್ನಾಟಕ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಕಾರ್ಯಕ್ರಮದ ಮೊದಲ ದಿನ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ರಾಜ್ಯದ ಕೈಗಾರಿಕಾ ವಲಯದ ಬೆಳವಣಿಗೆಗೆ ಕೇಂದ್ರದ ನೆರವನ್ನು ಕೋರಿದ್ದರು. ಜತೆಗೆ ಸಿಂಗಪುರ್ ಹೈಕಮಿಷನರ್ ಅವರನ್ನು ಭೇಟಿ ಮಾಡಿ, ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನಿಸಿದ್ದರು.

ತಮ್ಮ ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರು ಟಾಯ್ ಝೋನ್, ಎಎಂಡಿ, ವಾಟ್ಲೋ, ಭಾರತ್ ಸೆಮಿ ಸಿಸ್ಟಮ್ಸ್, ಥರ್ಡ್-ಐಟೆಕ್, ಆ್ಯಂಬರ್ ಎಂಟರ್ಪ್ರೈಸಸ್, ಎಚ್ಎಂಇಎಲ್ ಸೇರಿದಂತೆ ಹಲವು ಉದ್ಯಮ ಕಂಪನಿಗಳ ಪ್ರಮುಖರನ್ನು ಕಂಡು, ಅವರನ್ನೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಮಂತ್ರಿಸಿದ್ದಾರೆ.
ಎರಡನೇ ದಿನದಂದು ಅವರು ಆಸ್ಟ್ರೇಲಿಯಾ ಹೈಕಮಿಷನರ್ ಫಿಲಿಫ್ ಗ್ರೀನ್ ಅವರೊಂದಿಗೆ ಶಿಕ್ಷಣ, ವೈಮಾಂತರಿಕ್ಷ, ಜೈವಿಕ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಪರಸ್ಪರ ಸಹಕಾರ ಕುರಿತು ಮಾತುಕತೆ ನಡೆಸಿ, ಬಂಡವಾಳ ಹೂಡಿಕೆಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ತಿಳಿಸಿದರು.
ಜರ್ಮನಿ ಮಿಷನ್ ಉಪಮುಖ್ಯಸ್ಥ ಜಾರ್ಜ್ ಎಂಜ್ವೀಲರ್ ಅವರೊಂದಿಗಿನ ಭೇಟಿಯಲ್ಲಿ ಅವರು ಮರುಬಳಕೆ ಮಾಡಬಹುದಾದ ಇಂಧನ, ಹವಾಮಾನ ಬದಲಾವಣೆ ಮತ್ತು ಸುಸ್ಥಿರ ಅಭಿವೃದ್ಧಿ, ಎಂಜಿನಿಯರಿಂಗ್ ಮತ್ತು ರಾಸಾಯನಿಕಗಳ ಉತ್ಪಾದನೆ ಇತ್ಯಾದಿ ಕ್ಷೇತ್ರಗಳಲ್ಲಿ ಸಹಕಾರ ಸಾಧ್ಯತೆ ಕುರಿತು ವಿಚಾರ ವಿನಿಮಯ ನಡೆಸಿದರು.
ದಕ್ಷಿಣ ಕೊರಿಯಾದ ರಾಯಭಾರಿ ಚಾಂಗ್ ಜೇಬಾಕ್ ಅವರನ್ನು ಕಂಡ ಸಚಿವರು, ತಂತ್ರಜ್ಞಾನ, ನಾವೀನ್ಯತೆ, ಎಲೆಕ್ಟ್ರಾನಿಕ್ಸ್, ವಾಹನ ತಯಾರಿಕೆ ಮತ್ತು ಮಶೀನ್ ಟೂಲ್ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ ಹೂಡಿಕೆಗೆ ಇರುವ ಯಥೇಚ್ಛ ಅವಕಾಶಗಳ ಬಗ್ಗೆ ಚರ್ಚಿಸಿದರು. ಕಾರ್ಯಕ್ರಮದಲ್ಲಿ ಸಚಿವರ ಜೊತೆಗೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications